ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ.
ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ.
ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ ರಸ್ತೆಯಲ್ಲಿ ಬೈಕ್ ಜಾರಿದ ಹಿನ್ನಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.