Breaking News

ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:

Spread the love

ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ  ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಯಾವುದಕ್ಕೆ ವಿನಾಯಿತಿ?
* ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು
* ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ
* ನೀರು ಪೂರೈಕೆ, ಶುಚಿತ್ವ, ವಿದ್ಯುತ್ ಪ್ರಸರಣ ವಾಹಕಗಳ ಕೆಲಸ
* ಟೆಲಿಕಾಂ ಆಪ್ಟಿಕಲ್ ಫೈಬರ್ ಮತ್ತು ಕೇಬಲ್
* ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣ ಕಾಮಗಾರಿಗಳು
* ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ, ಅರಣ್ಯ ಚಟುವಟಿಕೆಗಳು
* ಬೆಳೆ ಮತ್ತು ಸಂಸ್ಕರಣೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಚಟುವಟಿಕೆ
* ಬಿದಿರು, ತೆಂಗಿನಕಾಯಿ, ಅಡಿಕೆ, ಕೊಕ್ಕೊ, ಮಸಾಲೆ ಪದಾರ್ಥ ಬೆಳೆಗಳನ್ನು ಬೆಳೆಯುವುದು
* ಈ ಬೆಳೆಗಳ ಸಂಸ್ಕರಣೆ, ಪ್ಯಾಕೆಜಿಂಗ್, ಮಾರಾಟ ಮತ್ತು ಮಾರುಕಟ್ಟೆಗೆ ವಿನಾಯ್ತಿ
* ಹೌಸಿಂಗ್ ಫೈನಾನ್ಸ್ ಮತ್ತು ಸಣ್ಣ ಹಣಕಾಸು ಸಂಸ್ಥೆಗಳಲ್ಲಿ ಅಗತ್ಯ ಸಿಬ್ಬಂದಿ ನೆರವಿನೊಂದಿಗೆ ಕಾರ್ಯ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ