ಗೋವಾ: ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಹಾಯ ಹಸ್ತಕೋರುವಂತೆ ಮನವಿ ಮಾಡಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಹರದಗಟ್ಟಿ ಗ್ರಾಮದ 30 ಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕಾಗಿ ಗೋವಾಗೆ ತೆರಳಿದ್ದರು. ಆದ್ರೆ ಲಾಕ್ ಡೌನ್ ಹಿನ್ನೆಲೆ ಗ್ರಾಮಕ್ಕೆ ತೆರಳಲಾಗದ ಅತ್ತೆ ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡುಂತಾಗಿದೆ.
ಪಣಜಿಯ ಮಾಪ್ಸಾ ಬಳಿ ಉಳಿದುಕೊಂಡಿರುವ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ಸಾಗಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.