Breaking News

ಕೊಪ್ಪಳ ಜಿಲ್ಲೆ ಆರೋಗ್ಯ ಇಲಾಖೆ ಎಡವಟ್ಟು; ಲಸಿಕೆ ಪಡೆಯದಿದ್ದರೂ 2ನೇ ಡೋಸ್ ಲಸಿಕೆ ಪಡೆದಿರುವುದಾಗಿ ಮೆಸೇಜ್

Spread the love

ಕೊಪ್ಪಳ: ಕೊರೊನಾ ವಿಚಾರದಲ್ಲಿ ಸರ್ಕಾರ ಅನೇಕ ಬಾರಿ ಪದೇ ಪದೇ ಎಡವುತ್ತಿದ್ದು, ಆರೋಗ್ಯ ಇಲಾಖೆ ಎಡವಟ್ಟಿನಿಂದಾಗಿ ಲಸಿಕೆ ಪಡೆಯದವರಿಗೂ ಲಸಿಕೆ ಸಂಪೂರ್ಣವಾಗಿದೆ ಎನ್ನುವ ಪ್ರಮಾಣ ಪತ್ರ ದೊರೆತಿರುವುದು ಲಸಿಕೆ ಹಾಕಿಸಿಕೊಳ್ಳದವರನ್ಬು ಚಿಂತೆಗೀಡುಮಾಡಿದೆ. ಜಿಲ್ಲೆಯ ಆರೋಗ್ಯ ಇಲಾಖೆ ಮಹಾ ಎಡವಟ್ಟು ಮಾಡಿದೆ. 2ನೇ ಡೋಸ್ ಲಸಿಕೆಯನ್ನು ಪಡೆಯದಿದ್ದರೂ ಪಡೆದಿರುವುದಾಗಿ ಹಲವರ ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ಜನ ಆರೋಗ್ಯ ಇಲಾಖೆ ನಡೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯಲ್ಲಿ ಕೊರೊನಾ ಎರಡನೇ ಡೋಸ್ ಪಡೆಯದವರಿಗೂ ಲಸಿಕೆ ಪಡೆಯಲಾಗಿದೆ ಎಂಬ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡನೇ ಲಸಿಕೆ ಪಡೆಯದೆ ಇದ್ದರೂ, ಸೆಕೆಂಡ್ ಡೋಸ್ ಕಂಪ್ಲೀಟ್ ಆಗಿದೆ ಎಂಬ ಪ್ರಮಾಣ ಪತ್ರ ಬಂದಿರುವುದು ಗ್ರಾಮಸ್ಥರನ್ನು ಕಂಗಾಲಾಗಿಸಿದೆ. ಮರ್ಲಾನಹಳ್ಳಿ ಗ್ರಾಮದ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಈ ಮೇಸೆಜ್ ಬಂದಿದೆ. ಇವರಲ್ಲದೆ ಗ್ರಾಮದ ಇತರರಿಗೂ ಇದೇ ರೀತಿಯ ಸಂದೇಶಗಳು ಬರುತ್ತಿವೆ. ಸೆಪ್ಟೆಂಬರ್ 2021ರಲ್ಲಿ ಯುವಕರು ಮೊದಲನೇ ಲಸಿಕೆ ಹಾಕಿಸಿಕೊಂಡಿದ್ದು, ಎರಡನೇ ಡೋಸ್ ಹಾಕಿಸಿಕೊಳ್ಳಲು ಕಾಯುತಿದ್ದರು. ಈ ಮಧ್ಯೆಯೇ ಲಸಿಕೆ ಪೂರ್ಣಗೊಂಡಿದೆ ಎಂಬ ಪ್ರಮಾಣ ಪತ್ರ ದೊರೆತಿದೆ. ಈ ಸಂಬಂಧ ಆರೋಗ್ಯ ಇಲಾಖೆ ಗಮನಕ್ಕೆ ತರಲಾಗಿದೆ. ಆದರೆ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಲೆಕೆಡಿಸಿಕೊಂಡಿಲ್ಲ. ಈಗ ಎರಡನೇ ಲಸಿಕೆ ಹಾಕಿಸಿಕೊಳ್ಳಬೇಕೇ ಬೇಡವೇ ಎಂಬ ಚಿಂತೆಯಲ್ಲಿ ಯುವಕರಿದ್ದಾರೆ.

ಕೊರೊನಾ ಎರಡನೇ ಲಸಿಕೆ ಪಡೆಯದೆ ಇದ್ದರೂ, ನನಗೆ ಎರಡನೇ ಲಸಿಕೆ ಸಂಪೂರ್ಣವಾಗಿದೆ ಎನ್ನುವ ಪ್ರಮಾಣ ಪತ್ರ ದೊರೆತಿದೆ. ನನಗೆ ಇನ್ನೊಂದು ಲಸಿಕೆ ಪಡೆಯಬೇಕೇ? ಬೇಡವೇ? ಎನ್ನುವ ಗೊಂದಲದಲ್ಲಿದ್ದೀನಿ. ಗ್ರಾಮದ ಇತರರಿಗೂ ಇದೇ ಸಂದೇಶ ಬಂದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಸಿಕೆ ಪಡೆಯದೇ ಇದ್ದರೂ, ಸಂಕಷ್ಟ ಅನುಭವಿಸುವಂತಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಂಜನೇಯ ತಾವರಗೇರಾ ಎಂಬ ಯುವಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

 


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ