Breaking News

ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ

Spread the love

ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ ಗ್ರಾಮಸ್ಥರೆಲ್ಲರೂ ಹೂ ಚೆಲ್ಲಿ ಭರ್ಜರಿ ಸ್ವಾಗತ ಕೋರಿದ್ದಾರೆ.

 

ಈ ವೇಳೆ ಭಾರತಾಂಭೆಗೆ ಜಯ ಘೋಷಣೆ ಕೂಗಿದ್ದ ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೇಳಿದ್ದಾರೆ. ಇತ್ತ ಜನರ ಪ್ರೀತಿ ಕಂಡು ಆಶಾ ಕಾರ್ಯಕರ್ತೆಯರು ಭಾವುಕಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ