Home / ಅಂತರಾಷ್ಟ್ರೀಯ / ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು

ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು

Spread the love

 

ಅಥಣಿ  : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ  ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ  ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ  ಹೇಳಿದರು .

ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ  ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ  ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ ಕಲಾಜಾಥಾ ತಮಟೆ ವಾದ್ಯ ನುಡಿಸಿ ಚಾಲನೆ ನೀಡಿ ಮಾತನಾಡಿದರು . ಪ.ಜಾ , ಪ.ಪಂಗಡ ಸಮುದಾಯಕ್ಕೆ ವಿಶೇಷ ಘಟಕ ಯೋಜನೆ ವಿವಿಧ ಅಭಿವೃದ್ಧಿ ನಿಗಮಗಳ ಮುಖಾಂತರ ಹಲವಾರು ಯೋಜನೆಗಳ ರೂಪಿಸಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೆಕು ಎಂದರು .ನಂತರ ರಂಗದರ್ಶನ ತಂಡ ಧುಳಗನವಾಡಿ ಬೀದಿ ನಾಟಕ ಜಾಗೃತಿ ಹಾಡುಗಳ ಮುಖಾಂತರ ಕಲಾ ಪ್ರದರ್ಶನ ನೀಡಿ ಅರಿವು  ಮೂಡಿಸಿದರು ಈ ವೆಳೆ ಸಮಾಜ ಕಲ್ಯಾಣ ಇಲಾಖೆಯ ಚಂದ್ರು ಕಾಂಬಳೆ, ವಿನೋದ್ ಪರೋಲಿ ಫಕ್ಕೀರಪ್ಪ  ಸೇರಿದಂತೆ  ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಗ್ರಾಮಸ್ಥರು  ಉಪಸ್ಥಿತರಿದ್ದರು .


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ