Breaking News

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

Spread the love

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. ಬಸರಗಿ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ಮತ್ತು ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಗಿತ್ತು. ತಂಡಕ್ಕೆ ಎಸ್ಪಿ ನಗದು ಬಹುಮಾನ ಘೋಷಿಸಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ