Breaking News

Laxminews 24x7

ಕಲಾ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಅವರು ಡಾ. ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು ಇದೇ ವೇಳೆ ಮಾತನಾಡಿ . ಎಸ್. ಆರ್. ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ

ಗೋಕಾಕ: ಚಿಕ್ಕನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಶ್ರೀ ಸಂತ ಬಾಳು ಮಾಮಾ ದೇವರೊಂದಿಗೆ ಆಗಮಿಸಿದ್ದ 2,000ಕ್ಕೂ ಅಧಿಕ ಕುರಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಅವುಗಳಿಗೆ ಅಗತ್ಯವಾದ ಸ್ಥಳಾವಕಾಶದ ವ್ಯವಸ್ಥೆ ಮಾಡಲಾಯಿತು. ಭಕ್ತರು ಹಾಗೂ ಕುರಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

Read More »

ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್!

ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್! ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್! ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹ, ಸಾಗಣೆ, ವಿತರಣೆ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರದಿಂದ ಕಠಿಣ ಕ್ರಮ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಜಾರಿ. ಡಿ.ಕೆ. ಶಿವಕುಮಾರ್ ಸರ್ಕಾರದಿಂದ ಗಟ್ಟಿ ನಿರ್ಧಾರ

Read More »

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಸವದಿಗೊಲಿದ ಸಹಕಾರ ಇಲಾಖೆ

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಸವದಿಗೊಲಿದ ಸಹಕಾರ ಇಲಾಖೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಆಗಸ್ಟ್ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ ಗೋಕಾಕ: ಚಿಕ್ಕನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಶ್ರೀ ಸಂತ ಬಾಳು ಮಾಮಾ ದೇವರೊಂದಿಗೆ ಆಗಮಿಸಿದ್ದ 2,000ಕ್ಕೂ ಅಧಿಕ ಕುರಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಅವುಗಳಿಗೆ ಅಗತ್ಯವಾದ ಸ್ಥಳಾವಕಾಶದ ವ್ಯವಸ್ಥೆ …

Read More »

ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಪಕ್ಷ ಗುರುತಿಸಬೇಕು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಡಿಸಿಎಂ ಸ್ಥಾನ ನೀಡುತ್ತಾರೆ ಅಂತಾ ಚರ್ಚೆ ಆಗಿದ್ದು ನಿಜ. ಸದ್ಯಕ್ಕೆ ಮಾಡಿಲ್ಲ. ಮುಂದಿನ ದಿನದಲ್ಲಿ ಪಕ್ಷ ಮಾಡಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ಚರ್ಚೆ ನಡೆಯುತ್ತಿತ್ತು. ನಾವು ಒತ್ತಡ ಹಾಕಲ್ಲ ಪಕ್ಷ ಗುರುತಿಸಬೇಕಾಗುತ್ತದೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಹೊರಗಡೆ ಚರ್ಚೆ ಮಾಡುವುದು ಸರಿಯಲ್ಲ ಎಂದರು. ಸತೀಶ್ ಜಾರಕಿಹೊಳಿ‌ ಖಾತೆ ಬದಲಾವಣೆ …

Read More »

ಬಿಡದಿಯಲ್ಲಿ ನೋಟಿಫಿಕೇಷನ್ ಆಗದ ಹಳ್ಳಿಗಳನ್ನು ನೋಟಿಫಿಕೇಷನ್‌ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ: ಸಿಎಂ ಡಿಕೆಶಿ

ಬೆಂಗಳೂರು: ಬಿಡದಿಯಲ್ಲಿ ನೋಟಿಫಿಕೇಷನ್ ಆಗದ ಹಳ್ಳಿಗಳನ್ನು ನೋಟಿಫಿಕೇಷನ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಿಡದಿಯ ರೈತರು ವಿಧಾನಸೌಧದಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಸಿಎಂ, “ನೂರಾರು ರೈತರು ಬಂದಿದ್ದರು. ಕೆಲ ಹಳ್ಳಿಗಳ ನೋಟಿಫಿಕೇಷನ್ ಆಗಿಲ್ಲ. ಸರ್ಕಾರ ಉತ್ತಮವಾದ ಪರಿಹಾರ ಕೊಡುತ್ತಿದೆ. ನೋಟಿಫಿಕೇಷನ್ ಆಗದ ಕಾರಣ ಪರಿಹಾರ ತೆಗೆದುಕೊಳ್ಳಲು ಆಗುತ್ತಿಲ್ಲ. ನೋಟಿಫಿಕೇಷನ್ ಮಾಡಿ ಎಂದು ರೈತರು ಮನವಿ ಮಾಡಿದ್ದಾರೆ. ನಾನು ಅಧಿಕಾರಗಳ ಜೊತೆಗೆ …

Read More »

ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.‌

ಬೆಂಗಳೂರು: ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.‌ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗಿನ ಸಂವಾದದಲ್ಲಿ ನೌಕರರನ್ನು ಉದ್ದೇಶಿಸಿ ಅವರು ಮಾತನಾಡಿದರು. ಭ್ರಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಅಧಿಕಾರಿಗಳ ಪ್ರತಿ ಹೆಜ್ಜೆಯನ್ನೂ ಪರಿಶೀಲಿಸುತ್ತೇನೆ. ಪ್ರತಿ ಫಲಾನುಭವಿ ಮಾಹಿತಿ ಇಟ್ಟುಕೊಳ್ಳಬೇಕು. ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂದು ನೋಡಬೇಕು. ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು …

Read More »

ತುಂಗಾಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಹರಿಸುವ ಕುರಿತು ಸಚಿವ ತಂಗಡಗಿ ಹೇಳಿದ್ದೇನು?

ಕೊಪ್ಪಳ: ತುಂಗಾಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಬಿಡುವ ವಿಚಾರವಾಗಿ ರೈತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತಿದೆ. ರೈತರು ಹಾಗೂ ಮುಖಂಡರ ಸಲಹೆ ಪಡೆದು, ಅವರಿಂದ ಮಾಹಿತಿ ಸಂಗ್ರಹಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಒಟ್ಟಾರೆ ನಮ್ಮ ರೈತರಿಗೆ ಒಳ್ಳೆಯ ಸುದ್ದಿ ನೀಡುವ ಕೆಲಸ ಮಾಡುತ್ತೇನೆ ಎಂದು ಸಚಿವ ಶಿವರಾಜ್​ ತಂಗಡಗಿ ಹೇಳಿದ್ದಾರೆ. ಕಾಲುವೆಗಳಿಗೆ ನೀರು ಹರಿಸುವ ವಿಚಾರ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಮುನಿರಾಬಾದ್​​ನಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನೀರು ಬಿಡುವ …

Read More »

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ ಜಪ್ತಿ

ಬೆಂಗಳೂರು: ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಆರೋಪದ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ 80ಕ್ಕೂ ಹೆಚ್ಚು ಮಂದಿ ಅಧಿಕಾರಿ-ಸಿಬ್ಬಂದಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಸಿಬಿ ಡಿಸಿಪಿ ಹರಿಬಾಬು ಮತ್ತು ರಾಜಾ ಇಮಾಮ್‌ ಖಾಸೀಂ ನೇತೃತ್ವದ ಸುಮಾರು 90ಕ್ಕೂ ಹೆಚ್ಚು ಮಂದಿ ಜೈಲಿನ ಪ್ರತಿಯೊಂದು ಬ್ಯಾರಕ್‌ಗಳಲ್ಲಿ ರಾತ್ರಿ 8 ಗಂಟೆವರೆಗೂ ತಪಾಸಣೆ ನಡೆಸಿದ್ದಾರೆ. ಈ ವೇಳೆ …

Read More »