ಬೆಳಗಾವಿ: ‘ವಕ್ಫ್ ಕಾಯ್ದೆ ರದ್ದುಪಡಿಸಬೇಕು ಒತ್ತಾಯಿಸಿ ಹಾಗೂ ಈ ಕಾಯ್ದೆಯಿಂದ ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಆಗುತ್ತಿರುವ ಅನ್ಯಾಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಇಲ್ಲಿನ ಸಂಭಾಜಿ ಉದ್ಯಾನದಲ್ಲಿ ನ.12ರಂದು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದೇವೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಮುಖಂಡ ಬಸವರಾಜ ಭಾಗೋಜಿ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಕೊಲ್ಹಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಸಭೆ ಉದ್ದೇಶಿಸಿ ಮಾತನಾಡುವರು. ಜಿಲ್ಲೆಯ ವಿವಿಧ ಮಠಾಧೀಶರು, ಸಂತರು, …
Read More »ಕಲಕಾಂಬ ಗ್ರಾ.ಪಂ ಕಟ್ಟಡಕ್ಕೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು
ಬೆಳಗಾವಿ: ತಾಲ್ಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಕಚೇರಿಯೊಳಗಿನ ಕೆಲ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಕೂಡ ಕಿತ್ತುಕೊಂಡು ಹೋಗಿದ್ದಾರೆ. ಘಟನೆ ಶನಿವಾರ ಬೆಳಿಗ್ಗೆಯೇ ಜನರಿಗೆ ಗೊತ್ತಾಗಿದೆ. ಬಿಯರ್ ಬಾಟಲಿಯಲ್ಲಿ ಪೆಟ್ರೋಲ್ ತುಂಬಿ, ಅದಕ್ಕೆ ಬೆಂಕಿ ಹಚ್ಚಿ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಗೆ ಎಸೆಯಲಾಗಿದೆ. ಕಿಟಕಿಗೆ ಹೊತ್ತಿಕೊಂಡ ಬೆಂಕಿ ಕೆಲ ನಿಮಿಷಗಳ ಬಳಿಕ ತಾನಾಗಿಯೇ ನಂದಿದೆ. ಅದರ …
Read More »15-20 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ; ಸಿಎಂ ಜೈಲಿಗೆ : ಭವಿಷ್ಯ ನುಡಿದ ಯಡಿಯೂರಪ್ಪ
ಬಳ್ಳಾರಿ, ನವೆಂಬರ್ 09: ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವ ಹಕ್ಕನ್ನು ಕಳೆದುಕೊಂಡಿದ್ದಾರೆ ಮತ್ತು ಮುಂದಿನ 15 ರಿಂದ 20 ದಿನಗಳಲ್ಲಿ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. ಸಂಡೂರು ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, …
Read More »ವ್ಯಾನ್ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹3.70 ಕೋಟಿಗೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ‘ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಇನ್ಸ್ಪೆಕ್ಟರ್ ದತ್ತ ಕಿಂದ್ರೆ ತಿಳಿಸಿದ್ದಾರೆ. ‘ಶೋಧ ವೇಳೆಯಲ್ಲಿ ₹3.70 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಈ ನಗದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಹಾಜರುಪಡಿಸಿಲ್ಲ. …
Read More »ರಾಣಿ ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆ: ಜನ- ಪೊಲೀಸರ ಮಧ್ಯೆ ವಾಗ್ವಾದ
ಬೆಳಗಾವಿ: ತಾಲ್ಲೂಕಿನ ಕಣಬರಗಿಯ ಮುಖ್ಯವೃತ್ತದಲ್ಲಿ ಎರಡು ದಿನಗಳ ಹಿಂದೆ ಪ್ರತಿಷ್ಠಾಪಿಸಿದ್ದ ವೀರರಾಣಿ ಕಿತ್ತೂರು ಚನ್ನಮ್ಮನ ಅಶ್ವಾರೂಢ ಪ್ರತಿಮೆ ತೆರವು ಮಾಡುವ ವಿಚಾರಾಗಿ, ಶುಕ್ರವಾರ ತಡರಾತ್ರಿ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಶನಿವಾರ ನಸುಕಿನವರೆಗೂ ಗ್ರಾಮದಲ್ಲಿ ವಾತಾವರಣ ಬಿಗುವಿನಿಂದ ಕೂಡಿತ್ತು. ಬೆಳಗಾವಿ ನಗರದಿಂದ ಕಣಬರಗಿಗೆ ಪ್ರವೇಶ ಮಾಡುವಾಗ ಸಿಗುವ ಮೊದಲ ವೃತ್ತದಲ್ಲಿ ಯಾವುದೇ ಪ್ರತಿಮೆ ಇರಲಿಲ್ಲ. ಆರಂಭದಿಂದಲೂ ಇದಕ್ಕೆ ರಾಣಿ ಚನ್ನಮ್ಮ ವೃತ್ತ ಎಂದೇ ಹೆಸರಿಡಲಾಗಿದೆ. ಇಲ್ಲಿ ಚನ್ನಮ್ಮನ …
Read More »ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ
ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ( Marijuana ) ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ …
Read More »ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ; ಪೌರಕಾರ್ಮಿಕ ಸಾವು
ಸಿರವಾರ: ಸ್ಥಳೀಯ ಪಟ್ಟಣ ಪಂಚಾಯತ್ ನಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.9ರ ಶನಿವಾರ ಬೆಳಗಿನ ಜಾವ ನಡೆದಿದೆ. ಪಟ್ಟಣ ಪಂಚಾಯತ್ ನ ಪೌರಕಾರ್ಮಿಕ ತಿಮ್ಮಪ್ಪ ಅಸ್ಕಿಹಾಲ್ (36) ಮೃತಪಟ್ಟವರು. ತಿಮ್ಮಪ್ಪ ಅಸ್ಕಿಹಾಲ್ ಅವರು ಪಟ್ಟಣದ ಬಸವ ವೃತ್ತದಲ್ಲಿ ಬೆಳಗಿನ ಜಾವ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಕುಳಿತಿದ್ದ ಸ್ಥಳದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ ರವಿ ಎಸ್. ಅಂಗಡಿ, ಪ.ಪಂ. ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಅದೆಪ್ಪ …
Read More »ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ. ಲಕ್ಷ್ಮಣ ಸವದಿ
ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಯತ್ನಾಳ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಮೂರು ತಂಡಗಳ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ ತೀವ್ರಗೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯಾಗಿ ಉಪಯೋಗಿಸಲು ಹೊರಟಿದೆ. ನಾವೂ ಹಿಂದೂಗಳೇ. ಆದರೆ, ಬಿಜೆಪಿಯವರು ನಕಲಿ ಮನುವಾದವನ್ನು ಪ್ರತಿಪಾದಿಸುವ ನಕಲಿ ಹಿಂದೂಗಳು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ವಿಜಯಪುರಕ್ಕೆ ಭೇಟಿ ನೀಡಿದ್ದು ಕಾನೂನು ಬಾಹಿರ. ಅದು ಹಕ್ಕುಚ್ಯುತಿ ಆಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಗಳನ್ನು ಈ ಹಿಂದೆಯೇ ಇಂದೀಕರಣ ಮಾಡಿಕೊಳ್ಳದ ಪರಿಣಾಮ ಇನಾಂ ಹಾಗೂ ಭೂ ಸುಧಾರಣಾ ಕಾಯ್ದೆಯಡಿ …
Read More »
Laxmi News 24×7