Breaking News

Laxminews 24x7

ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಕನ್ನಡಿಗರ ಮೀಸಲಾತಿ ನೀಡುವ ವಿಧೇಯಕ ಪುನರ್ ಪರಿಶೀಲಿಸಲಾಗುವುದು. ಹೀಗಾಗಿ ತಕ್ಷಣಕ್ಕೆ ಮಸೂದೆ ಮಂಡಿಸದಿರಲು ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ನಾಲ್ಕು ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಸೂಕ್ತ …

Read More »

ಹುಬ್ಬಳ್ಳಿ | ಇಂಗ್ಲಿಷ್‌ ಮಾಧ್ಯಮ; ಶಿಕ್ಷಕರ ಕೊರತೆ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಇನ್ನೂ ಆರು ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವವೂ ಸಲ್ಲಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದದಲ್ಲಿ ತಲಾ ಒಂದೊಂದು ಶಾಲೆ ಸೇರಿ ಒಟ್ಟು 8 ಕರ್ನಾಟಕ ಪಬ್ಲಿಕ್‌ ಶಾಲೆಗಳಿವೆ (ಕೆಪಿಎಸ್‌). ಇಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಬೋಧಿಸಲಾಗುತ್ತದೆ. ‘ಪೋಷಕರು ಹಾಗೂ ವಲಯ ವ್ಯಾಪ್ತಿಯ …

Read More »

270ಕ್ಕೂ ಹೆಚ್ಚು ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ: ಪೊಲೀಸ್ ಬಲೆಗೆ ಸೈಬರ್ ವಂಚಕರು

ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.   ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, …

Read More »

ಪೊಲೀಸ್ ಬಲೆಗೆ ಸೈಬರ್ ವಂಚಕರು

ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ. ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ …

Read More »

ಧಾರವಾಡ | ಮಹಿಳಾ ಕಾಲೇಜು ಕಟ್ಟಡ ಕಾಮಗಾರಿಗೆ ಮೀನಮೇಷ: ಸೋರುವ ಕೊಠಡಿಗಳಲ್ಲೇ ಪಾಠ

ಧಾರವಾಡ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ, ಜಾಗ ಮಂಜೂರಾದರೂ ಕಾಮಗಾರಿ ಆರಂಭವಾಗಿಲ್ಲ. ಶಿಥಿಲಸ್ಥಿತಿಗೆ ತಲುಪಿರುವ ಸೋರುವ ಕಟ್ಟಡದಲ್ಲಿಯೇ ವಿದ್ಯಾರ್ಥಿನಿಯರು ಪಾಠ ಕೇಳುವ ಸ್ಥಿತಿ ಇದೆ. ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದ ಮುಂಭಾಗದ ಇಎಲ್‌ಟಿಸಿ (ಇಂಗ್ಲಿಷ್‌ ಲಾಂಗ್ವೆಜ್‌ ಲರ್ನಿಂಗ್‌ ಕೋರ್ಸ್‌ ಫಾರ್‌ ಟೀಚರ‍್ಸ್‌) ಕಟ್ಟಡದಲ್ಲಿ ಈ ಕಾಲೇಜು ಇದೆ. ಕಾಲೇಜು ಆರಂಭವಾಗಿ ದಶಕ ಕಳೆದರೂ ಸ್ವಂತ ಕಟ್ಟಡ ಇಲ್ಲ, ಶಿಥಿಲವಾಗಿರುವ ಕಟ್ಟಡವೇ ಗತಿಯಾಗಿದೆ. ಕಳೆದ ವರ್ಷ ಮಳೆಗಾಲದಲ್ಲಿ …

Read More »

ಬೆಳಗಾವಿ: ನದಿಪಾತ್ರಗಳಿಗೆ ಭೇಟಿ ನೀಡಿದ DC; ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ: ‘ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ‌ ಉದ್ಭವಿಸಿಲ್ಲ. ಆದಾಗಿಯೂ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದಗಳನ್ನು ಪರಿಶೀಲಿಸಿದ ನಂತರ ಅವರು ಮಾಹಿತಿ ನೀಡಿದರು. ‘ಈಗಾಗಲೇ 26 ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್‌ಗಳನ್ನು ಕಾರವಾರದಿಂದ ತರಿಸಲಾಗುವುದು’ …

Read More »

ನಗರದ ಪಕ್ಕವಿದ್ದರೂ ಅಭಿವೃದ್ಧಿ ಮರೀಚಿಕೆ; ಮಾಯವಾದ ಶುಚಿತ್ವ

ಬೆಳಗಾವಿ: ನಗರದ ಮಗ್ಗುಲಲ್ಲೇ ಇರುವ ಹಿಂಡಲಗಾ ಗ್ರಾಮ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಬೆಳಗಾವಿ ಮಹಾನಗರಕ್ಕೆ ಸರಿಸಮಾನಾಗಿ ಬೆಳೆಯಬೇಕಿದ್ದ ಊರು ಅಭಿವೃದ್ಧಿಯಿಂದ ದೂರವುಳಿದಿದೆ. ‘ನಮ್ಮೂರಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ನಿರ್ವಹಣೆ ಕಾಣದ ಚರಂಡಿಗಳಿಂದ ಕೊಳಚೆ ನೀರು ಬಾವಿಗಳಿಗೆ ಸೇರುತ್ತಿದೆ. ರಸ್ತೆಬದಿ ಸಂಗ್ರಹವಾಗುತ್ತಿರುವ ಮಳೆನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಇಡೀ ಊರಲ್ಲಿ ಶುಚಿತ್ವ ಇಲ್ಲದ್ದರಿಂದ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಕಾಡುತ್ತಿದೆ’ ಎಂದು ಗ್ರಾಮಸ್ಥ ಸಂದೀಪ ಮೋರೆ ‘ಪ್ರಜಾವಾಣಿ’ ಮಂದೆ ಅವಲತ್ತುಕೊಂಡರು. ‘ಕೆಲವು ಮಾರ್ಗಗಳಲ್ಲಿ …

Read More »

ಮುಂಡಗೋಡ: ಭಾವೈಕ್ಯದ ಸಂಕೇತ ಮೊಹರಂ ಆಚರಣೆ

ಮುಂಡಗೋಡ: ತಾಲ್ಲೂಕಿನ ಇಂದೂರ, ಅಜ್ಜಳ್ಳಿ, ಬಸವನಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬುಧವಾರ ಮೊಹರಂ ಆಚರಿಸಲಾಯಿತು. ಮುಸ್ಲಿಮ ಜನಸಂಖ್ಯೆ ಇಲ್ಲದ ಕೆಲವು ಊರುಗಳಲ್ಲಿಯೂ ಹಿಂದೂಗಳು ಮುಂಚೂಣಿಯಲ್ಲಿದ್ದು ಮೊಹರಂ ಆಚರಿಸಿರುವುದು ವಿಶೇಷವಾಗಿತ್ತು. ಸುರಿಯುವ ಮಳೆಯ ನಡುವೆಯೂ, ದೇವರು ಹೊಳೆಗೆ ಹೋಗುವ ಕಾರ್ಯಕ್ರಮ ನೂರಾರು ಜನರ ಸಮ್ಮುಖದಲ್ಲಿ ನಡೆಯಿತು. ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದಂತೆ ಮೊಹರಂ ಆಚರಣೆ ಮಾಡಿದರು. ಕಳೆದ ಐದು ದಿನಗಳ ಹಿಂದೆ ತಾಲ್ಲೂಕಿನ ಬಹುತೇಕ ಕಡೆ ಪಂಜಾಗಳನ್ನು …

Read More »

KLE ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ನಡೆಸಿದ ರೊಬಾಟಿಕ್‌ ಚಿಕಿತ್ಸೆ ಯಶಸ್ವಿ

ಬೆಳಗಾವಿ: ‘ಇಲ್ಲಿನ ಕೆಎಲ್‌ಇ ಸಂಸ್ಥೆ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ರೊಬಾಟಿಕ್‌ ತಂತ್ರಜ್ಞಾನ ಬಳಸಿ ಇಬ್ಬರಿಗೆ ಯಶಸ್ವಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಮಾಡಲಾಗಿದೆ’ ಎಂದು ಕೇಂದ್ರದ ವೈದ್ಯಕೀಯ ನಿರ್ದೆಶಕ ಕರ್ನಲ್‌ ಡಾ. ಎಂ. ದಯಾನಂದ ಹೇಳಿದರು. ‘ಅನ್ನನಾಳ ಕ್ಯಾನ್ಸರಿನಿಂದ ಬಳಲುತ್ತಿದ್ದ 62 ಮತ್ತು 70 ವರ್ಷದ ಇಬ್ಬರು ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಇದು ಉತ್ತರ ಕರ್ನಾಟಕದಲ್ಲಿ ನಡೆದ ಮೊದಲ ಪ್ರಯೋಗ. ಕೆಎಲ್‌ಇ …

Read More »

ಅನಂತನಾರಾಯಣ ವಾದ್ಯಾರ್ ಅವರಿಗೆ ವ್ಯಾಸಜ್ಯೋತಿ ಪ್ರಶಸ್ತಿ

ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಜ್ಯೋತಿ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಸಹಯೋಗದಲ್ಲಿ ನೀಡುವ 2024ನೇ ಸಾಲಿನ ‘ವ್ಯಾಸಜ್ಯೋತಿ ಪ್ರಶಸ್ತಿ’ಗೆ ವೇದಬ್ರಹ್ಮ ಶ್ರೀ ಅನಂತನಾರಾಯಣ ವಾದ್ಯಾರ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯು ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜು. 21ರಂದು ್ಗ ಭಾರತೀಯ ವಿದ್ಯಾ ಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಎಂ. ನರಸಿಂಹನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ …

Read More »