ಯಲ್ಲಾಪುರ: ತಾಲ್ಲೂಕಿನ ಮಲವಳ್ಳಿಯಿಂದ ಮರಹಳ್ಳಿಗೆ ಸಾಗುವ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು ಭಾರಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಲವಳ್ಳಿಯ ಜೋಗಾಳಕೇರಿ ಅಸ್ಲೆಕೊಪ್ಪದಲ್ಲಿ ಮನೆ ಪಕ್ಕದ ಗುಡ್ಡ ಕುಸಿಯುವ ಅಪಾಯ ಇರುವ ಹಿನ್ನೆಲೆಯಲ್ಲಿ ನಾಲ್ಕು ಕುಟುಂಬವನ್ನು ಸ್ಥಳಾಂತರಿಸಲಾಗಿದೆ. ಈ ನಾಲ್ಕು ಕುಟುಂದವರಿಗೆ ಮಲವಳ್ಳಿಯ ಪ್ರಾಥಮಿಕ ಕೇಂದ್ರದ ಪಕ್ಕದಲ್ಲಿರುವ ಕಟ್ಟಡದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು ರಾತ್ರಿಯ ಮೇಳೆ ಮನೆಯಲ್ಲಿ ವಸತಿ ಮಾಡದಂತೆ ಸೂಚಿಸಲಾಗಿದೆ ಎಂದು ಮಾವಿನಮನೆ ಗ್ರಾಮ ಪಂಚಾಯ್ತಿ ಪ್ರಕಟಣೆಯಲ್ಲಿ ತಿಳಿಸಿದೆ.
Read More »ಮಹಾರಾಷ್ಟ್ರದಲ್ಲಿ ನಿರಂತರ ಮಳೆಗೆ ಕುಸಿದ ಆವಕ; ₹100ರ ಗಡಿ ತಲುಪಿದ ಟೊಮೆಟೊ ದರ
ಬೆಳಗಾವಿ: ನಗರದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಕನಿಷ್ಠ ₹80ರಿಂದ ₹100ರವರೆಗೆ ಮಾರಾಟವಾಗುತ್ತಿದೆ. ವಾರದ ಹಿಂದೆ ₹50ರಷ್ಟಿದ್ದ ದರ ಏಕಾಏಕಿ ಗಗನಮುಖಿ ಆಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಸಗಟು ವ್ಯಾಪಾರದಲ್ಲಿ ಎರಡು ವಾರಗಳ ಹಿಂದೆ 10 ಕೆ.ಜಿಯ ಒಂದು ಬುಟ್ಟಿಗೆ ₹600 ದರವಿತ್ತು. ವಾರದಿಂದಲೂ ದರ ಏರಿಸುತ್ತಲೇ ಇದ್ದಾರೆ. ಬುಧವಾರ ಬೆಳಿಗ್ಗೆ 10 ಕೆ.ಜಿಯ ಒಂದು ಟ್ರೇ ಟೊಮೆಟೊಗೆ ₹1000 ತೆಗೆದುಕೊಂಡಿದ್ದಾರೆ. ನಾವು ₹100ಕ್ಕೆ ಮಾರಿದರೂ ಹಾನಿ ಸಂಭವಿಸುತ್ತದೆ’ ಎಂದು …
Read More »ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ
ದಾಂಡೇಲಿ : ಸ್ಥಳೀಯ ಗಣೇಶನಗರದ ಅವಿವಾಹಿತ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಈ ಬಗ್ಗೆ ನಗರ ಪೊಲೀಸ್ ಠಾಣೆಯಿಂದ ಮಾಹಿತಿ ಲಭ್ಯವಾಗಿದೆ. ಖಾಸಗಿ ಕೋರಿಯರ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಸ್ಥಳೀಯ ಗಣೇಶನಗರದ ನಿವಾಸಿ 27 ವರ್ಷ ವಯಸ್ಸಿನ ಪ್ರವೀಣ್ ತೆಗ್ಗಿ ಎಂಬಾತನೆ ನಾಪತ್ತೆಯಾದ ಯುವಕನಾಗಿದ್ದಾನೆ. ಈತ ಜುಲೈ 3 ರಂದು ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆ ಬಿಟ್ಟು ಹೋದವನು ಈವರೆಗೆ ಮನೆಗೆ ಬಂದಿಲ್ಲ. ಈತನ ಕುಟುಂಬಸ್ಥರು ಹಾಗೂ ಸ್ನೇಹಿತರು ಆತನನ್ನು …
Read More »ಜಾರಿ ಬಿದ್ದ ಶಾಸಕ ರೇವಣ್ಣ
ಹೊಳೆನರಸೀಪುರ: ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ. ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್, ಮೂಳೆ ತಜ್ಞರಾದ ಡಾ.ಜೆ.ಕೆ. ದಿನೇಶ್, ಡಾ. ದಿನೇಶ್ ಕುಮಾರ್ ಹಾಗೂ ಡಾ. ಸತ್ಯಪ್ರಕಾಶ್, ತೀವ್ರ ನಿಗಾ ಘಟಕದಲ್ಲಿ …
Read More »ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್; ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನ್ಗೌಡ ದದ್ದಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು .ಪ್ರಕರಣಕ್ಕೆ ಸಂಬಂಧಿಸಿದಂತೆ …
Read More »SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ,ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ
SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಶಿವಮೊಗ್ಗ : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠ ನೋಟಿಸ್ ಕೊಟ್ಟು ನಾಗೇಂದ್ರಗೆ ಅಧಿಕಾರಿಗಳು ವಿಚಾರಣೆಗೆ ಕರೆದಿಲ್ಲ. ಎಸ್ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ …
Read More »KSRTC ಬಸ್ ಚಾಲಕನ ರೀಲ್ಸ್ ಶೋಕಿಗೆ ಎತ್ತುಗಳು ಬಲಿ, ರೈತನ ಸ್ಥಿತಿ ಗಂಭೀರ
ಹುಬ್ಬಳ್ಳಿ: ಇತ್ತೀಚಿನ ವರ್ಷಗಳಲ್ಲಿ ಜನರ ರೀಲ್ಸ್ ಹುಚ್ಚಾಟಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಭರದಲ್ಲಿ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಜನರು ಇನ್ನಿಲ್ಲದ ಪೇಚಿಗೆ ಸಿಲುಕುತ್ತಾರೆ. ಇದೀಗ ಹುಬ್ಬಳ್ಳಿಯಲ್ಲಿ KSRTC ಚಾಲಕನೋರ್ವ ಬಸ್ ಚಾಲನೆ ವೇಳೆ ರೀಲ್ಸ್ ಮಾಡಲು ಹೋಗಿ ಎರಡು ಎತ್ತು ಹಾಗೂ ರೈತನ ಜೀವಕ್ಕೆ ಕುತ್ತು ತಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ. ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ …
Read More »ಬೆಂಗಳೂರಿನ ‘ಪಾರ್ಕಿಂಗ್’ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ; ಗೃಹ ಸಚಿವ
ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಪಾರ್ಕಿಂಗ್ ನೀತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣ. ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬಿಬಿಎಂಪಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಜೊತೆ ಚರ್ಚಿಸಿ …
Read More »ವೈದ್ಯಕೀಯ ಸೀಟು ಕೊಡಿಸುವುದಾಗಿವಂಚನೆ:
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಅಂತಾರಾಜ್ಯ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿ ಸಿ 12 ಲಕ್ಷ ರೂ. ನಗದು ಹಾಗೂ 15 ಕಂಪ್ಯೂಟರ್, ಡೆಬಿಟ್ / ಕ್ರೆಡಿಟ್ ಕಾರ್ಡ್ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಂಡಕಲ್ನ ಅರಗೊಂಡ ಅರವಿಂದ ಉರೂಫ್ ಅರುಣ ಕುಮಾರ (47) ಬಂಧಿತ ಆರೋಪಿ. ಬೆಳಗಾವಿ …
Read More »ಜಮೀನು ವರ್ಗಾವಣೆ: 15 ದಿನಗಳಲ್ಲಿ ವರದಿ ನೀಡಿ
ಬೆಳಗಾವಿ: ನಗರದ ಕ್ಯಾಂಟೋನ್ಮೆಂಟ್ನ ವಸತಿ ಪ್ರದೇಶವನ್ನು ಮಹಾನಗರ ಪಾಲಿಕೆಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್ಮೆಂಟ್ ಬೋರ್ಡ್ನ ಒಟ್ಟು 1763.78 ಎಕರೆ ಜಾಗೆಯ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ವಿಡಿಯೊ ಸಂವಾದ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕ್ಯಾಂಟೋನ್ಮೆಂಟ್ ಪ್ರದೇಶಗಳನ್ನು …
Read More »
Laxmi News 24×7