ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ. ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್, ವಾಸ್ತುಶಿಲ್ಪ ಶಾಸ್ತ್ರ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಬಿಎಸ್ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ ಇತರೆ ಕೋರ್ಸುಗಳ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ವಿವರಗಳನ್ನು ಅರ್ಥೈಸಿಕೊಂಡು ನಾಲ್ಕು ಚಾಯ್ಸ್ ಗಳಲ್ಲಿ ಸೂಕ್ತವಾದ ಕಾಲೇಜು …
Read More »‘ನನ್ನನ್ನು ಕ್ಷಮಿಸು ಅಮ್ಮ, ನಾನು ನಿನ್ನನ್ನು ಕೊಲ್ಲುತ್ತಿದ್ದೇನೆ’ : ಹತ್ತ ತಾಯಿಯ ಹತ್ಯೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪಾಪಿ ಮಗ!
ನವದೆಹಲಿ : ಗುಜರಾತ್ನಲ್ಲಿ 21 ವರ್ಷದ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಕ್ಷಮಿಸಿ ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ಐ ಮಿಸ್ ಯೂ ಎಂದು ಬರೆದುಕೊಂಡಿದ್ದಾನೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿ ನೀಲೇಶ್ ಗೋಸಾಯಿಯನ್ನು ಬಂಧಿಸಿದ್ದಾರೆ. ಆರೋಪಿ ನೀಲೇಶ್ ತನ್ನ ತಾಯಿಯೊಂದಿಗೆ ವಾಸವಾಗಿದ್ದ. ಇಬ್ಬರ ನಡುವೆ ಆಗಾಗ ಜಗಳ, ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿ ಪೊಲೀಸರಿಗೆ ಚಾಕುವಿನಿಂದ …
Read More »CM’ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ’ ಗಡಿಪಾರಿಗೆ ಮನವಿ!
ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು …
Read More »ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!
ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ …
Read More »ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM
ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. …
Read More »ಜುಲೈ ವೇಳೆಗೆ ಬ್ಯಾಂಕ್ ಸಾಲದ ಬೆಳವಣಿಗೆ ಶೇ.15.1ಕ್ಕೆ ಏರಿಕೆ: RBI
ನವದೆಹಲಿ:ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮರುಹಂಚಿಕೆ 2024 ರ ಜುಲೈನಲ್ಲಿ ಶೇಕಡಾ 18.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 21.55 ಲಕ್ಷ ಕೋಟಿರೂ.ಗೆತಲುಪಿದೆ ಎಂದು ಆರ್ಬಿಐ ತಿಳಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಆಹಾರೇತರ ಬ್ಯಾಂಕ್ ಸಾಲವು ಜುಲೈ 2024 ರ ವೇಳೆಗೆ ಶೇಕಡಾ 15.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 162.92 ಲಕ್ಷ ಕೋಟಿರೂ.ಗೆತಲುಪಿದೆ. ಆದಾಗ್ಯೂ, ಬ್ಯಾಂಕುಗಳ ಠೇವಣಿ ಬೆಳವಣಿಗೆಯು ಶೇಕಡಾ 11.3 ರಷ್ಟು ಹಿಂದುಳಿದು …
Read More »ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ
ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ. ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು …
Read More »ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲೆನಾಡು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಶ್ರೀನಿವಾಸ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಕಾನೂನಿನ ಶಿಕ್ಷಣವನ್ನು ಮುಗಿಸಿದ ನಂತರ ಕಾನೂನು ವೃತ್ತಿಯನ್ನು ಪ್ರಾರಂಭಿಸಿದರು. ರಾಜಕೀಯಕ್ಕೆ ಬರುವ ಮುನ್ನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಶ್ರೀನಿವಾಸ ಅವರು ಮೈಸೂರು ವಿಧಾನಸಭೆಯ ಮಾಜಿ ಸದಸ್ಯರಾದ ಕಾನುಗೋಡು ಹರಿಯಪ್ಪನವರ್ …
Read More »ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು.
ಮೂಡಲಗಿ- ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು. ಮೂಡಲಗಿ ಪುರಸಭೆಗೆ ಬುಧವಾರದಂದು ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮಹಿಳೆಗೆ ಅಧ್ಯಕ್ಷರಾಗುವ ಅದೃಷ್ಟವನ್ನು ನೀಡಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಸಾಮಾನ್ಯ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ …
Read More »ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?
ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …
Read More »
Laxmi News 24×7