ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಸರ್ಕಾರ ಬುಧವಾರ (ಆಗಸ್ಟ್ 14, 2024) ವಿವಿಧ ಕೇಂದ್ರ ಮತ್ತು ರಾಜ್ಯ ಪಡೆಗಳ 1,037 ಪೊಲೀಸ್ ಸಿಬ್ಬಂದಿಗೆ ಸೇವಾ ಪದಕಗಳನ್ನು ಘೋಷಿಸಿದೆ. ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ (ಎಚ್ಜಿ &ಸಿಡಿ) ಮತ್ತು ಸುಧಾರಣಾ ಸೇವೆಗಳ ಒಟ್ಟು 1037 ಸಿಬ್ಬಂದಿಗೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶೌರ್ಯ ಮತ್ತು ಸೇವಾ ಪದಕಗಳನ್ನು ನೀಡಲಾಗಿದೆ. ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪದಕ (ಪಿಎಂಜಿ) ಮತ್ತು …
Read More »ಬದಲಾಗಲಿದೆ ಉತ್ತರ ಕರ್ನಾಟಕ ಭಾಗದ ಪ್ರವಾಸೋದ್ಯಮ
ಬೆಳಗಾವಿ, ಆಗಸ್ಟ್ 14: ಉತ್ತರ ಕರ್ನಾಟಕ ಅನೇಕ ಪ್ರವಾಸಿ ತಾಣಗಳನ್ನು ಹೊಂದಿದೆ. ಆದರೆ ಅವುಗಳು ಪ್ರಚಾರದಲ್ಲಿ, ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಈಗ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇರುವ ಪೂರಕ ಅಂಶಗಳನ್ನು ಗುರುತಿಸಿ ಅವುಗಳ ಮೇಲೆ ಹೆಚ್ಚಿನ ಗಮನ ಹರಿಸಿ, ಈ ಭಾಗದ ಪ್ರವಾಸೋದ್ಯಮದ ಚಿತ್ರಣ ಬದಲಿಸಲು ಯೋಜನೆ ರೂಪಿಸಲಾಗಿದೆ. ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಬೆಳಗಾವಿಯ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಬೆಳಗಾವಿ ವಿಮಾನ ನಿಲ್ದಾಣದ …
Read More »ದರ್ಶನ್ ಅರೆಸ್ಟ್ ಆಗಿ 2 ತಿಂಗಳ ನಂತರ ಮೊದಲ ಬಾರಿ ಭೇಟಿಗೆ ಬಂದ ಅಭಿಷೇಕ್ ಅಂಬರೀಷ್
ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ (Darshan) ಹಾಗೂ ಗ್ಯಾಂಗ್ ಸದ್ಯ ಹೊರಗೆ ಬರುವಂತೆ ಕಾಣಿಸುತ್ತಿಲ್ಲ. ನಟ ದರ್ಶನ್ ಅವರು ಜೈಲು ಸೇರಿ ಈಗಾಗಲೇ 2 ತಿಂಗಳು ಕಳೆದಿದೆ. ಇದೀಗ ನಟ ಅಭಿಷೇಕ್ ಅಂಬರೀಷ್ (Abhishek Ambareesh)ಅವರು ನಟ ದರ್ಶನ್ ಭೇಟಿಗೆ ಆಗಮಿಸಿದ್ದಾರೆ. ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ ಅವರು ದರ್ಶನ್ ಭೇಟಿಗಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ಭೇಟಿ ಮಾಡಲಿರುವ ಆಪ್ತರ ಕಾರು ಪರಪ್ಪನ ಅಗ್ರಹಾರ …
Read More »ಬೆಳಗಾವಿ | ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣ: 41 ಮಂದಿ ಅಸ್ವಸ್ಥ
ಚಚಡಿ (ಬೆಳಗಾವಿ ಜಿಲ್ಲೆ): ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ- ಭೇದಿ ಸೋಮವಾರ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ- ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ರಾಣಗೊಂಡಿರುವ ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ …
Read More »ಬೆಳಗಾವಿ: ಕ್ರೀಡಾ ಕುಟುಂಬದ ಶೂಟಿಂಗ್ ಕಲಿ ಸ್ವಪ್ನಿಲ್
ಬೆಳಗಾವಿ: ಕ್ರೀಡಾ ಕುಟುಂಬದ ಶೂಟಿಂಗ್ ಕಲಿ ಸ್ವಪ್ನಿಲ್ ಬೆಳಗಾವಿ: ‘ನನ್ನ ಪುತ್ರನ ಒಂದೂವರೆ ದಶಕದ ಪ್ರಯತ್ನ ಒಂದಿಷ್ಟು ಫಲ ಕೊಟ್ಟಿದೆ. ಈಗ ಕಂಚು ಗೆದ್ದಿರುವ ಆತ ಮುಂದಿನ ಒಲಿಂಪಿಕ್ಸ್ನಲ್ಲಿ ಖಂಡಿತ ಚಿನ್ನದ ಪದಕ ಗಳಿಸುವನು ಎಂಬ ವಿಶ್ವಾಸವಿದೆ’ ಹೀಗೆಂದು ‘ಸಂತಸ ಹಂಚಿಕೊಂಡವರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ತಾಲ್ಲೂಕಿನ ಕಂಬಳವಾಡಿಯ ಸುರೇಶ ಕುಸಾಳೆ. ಅವರ ಪುತ್ರ ಸ್ಪಪ್ನಿಲ್ ಪ್ಯಾರಿಸ್ನಲ್ಲಿ ನಡೆದಿರುವ ಒಲಿಂಪಿಕ್ಸ್ನ ಶೂಟಿಂಗ್ ಸ್ಪರ್ಧೆಯ 50 ಮೀಟರ್ ರೈಫಲ್ ತ್ರಿ ಪೊಸಿಷನ್ …
Read More »ಯತ್ನಾಳ್, ಜಾರಕಿಹೊಳಿ ಪಾದಯಾತ್ರೆ ಮಾಡಲಿ, ಆದರೆ, ಹೈಕಮಾಂಡ್ ಅನುಮತಿ ಪಡೆಯಲಿ: BYV
ಬೆಂಗಳೂರು: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಕೆಲವು ಶಾಸಕರು ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಅವರು ವರಿಷ್ಠರ ಅನುಮತಿ ಪಡೆದುಕೊಂಡು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸಂತನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ವಿಷಯ …
Read More »ಕಿತ್ತೂರು-ಧಾರವಾಡ ರೈಲು ಮಾರ್ಗ ಶೀಘ್ರ
ಹಿರೇಬಾಗೇವಾಡಿ: ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಇಲ್ಲಿನ ಪಡಿಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದರು. ಹಿರೇಬಾಗೇವಾಡಿ ಮಾರ್ಗವಾಗಿ ಧಾರವಾಡಕ್ಕೆ ಹೊಸ ರೈಲು ಮಾರ್ಗ ನಿರ್ಮಾಣ ಕಾರ್ಯದಲ್ಲಿ ಯಾವುದೇ ಅಡೆತಡೆಗಳಿಲ್ಲ. ರೈತರು ಜಮೀನು ನೀಡಲು ಮುಂದಾಗಿದ್ದು, ಅದರಿಂದ ಯಾವುದೇ ರೈತರಿಗೆ ಸಮಸ್ಯೆಗಳಾಗದಂತೆ ಕ್ರಮ ಕೈಗೊಳ್ಳಲಾಗುವುದು. ಭಕ್ತರ ಬೇಡಿಕೆಗನುಸಾರವಾಗಿ …
Read More »ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ …
Read More »ಹೆಸರುಕಾಳು ದರ ಕುಸಿತ ರೈತರು ಕಂಗಾಲ
ಬಾಗಲಕೋಟೆ: ಸತತ ಮಳೆ ಸುರಿಯುತ್ತಿರುವುದರಿಂದ ಹೆಸರುಕಾಳಿಗೆ ಹಳದಿ ರೋಗ ಕಾಡುತ್ತಿದ್ದು, ಬೆಲೆ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿ ಕೇಂದ್ರಗಳು ಇನ್ನೂ ಆರಂಭಗೊಂಡಿಲ್ಲ. ಹೀಗಾಗಿ, ಮಾರುಕಟ್ಟೆಯಲ್ಲಿ ಲಭ್ಯವಿರುವ ಬೆಲೆಗೆ ರೈತರಯ ಹೆಸರುಕಾಳು ಮಾರುವಂತಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಸರುಕಾಳು ಪ್ರಮುಖ ಬೆಳೆಯಾಗಿದೆ. 2.50 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಹುಬ್ಬಳ್ಳಿ …
Read More »ಇಂದಿನಿಂದ ಗೇಟ್ ಅಳವಡಿಕೆ ಕೆಲಸ ಆರಂಭ,
ಬೆಂಗಳೂರು, ಆಗಸ್ಟ್ 14: ಕೊಪ್ಪಳದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಕಟ್ಟಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಈ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಇಂದು ಬುಧವಾರದಿಂದ ಜಲಾಶಯಕ್ಕೆಂದೆ ಸಿದ್ದಪಡಿಸಲಾದ ಗೇಟ್ಗಳನ್ನು ಅಳವಡಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿ ಹೋದ ಬಳಿಕ ಇತರ ಗೇಟ್ಗಳ ಮೇಲೆ …
Read More »
Laxmi News 24×7