Breaking News

Laxminews 24x7

ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

ಬೆಳಗಾವಿ: ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆಗೆ ಗೋಕಾಕ್ ತಾಲೂಕು ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಗಿದೆ. ಇಲ್ಲಿನ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ 20 ವರ್ಷದ ರೇಣುಕಾ ರವಿ ಗಣಾಚಾರಿ ಎಂಬವರು ತ್ರಿವಳಿ ಮಕ್ಕಳಿಗೆ ಜನ್ಮ ಕೊಟ್ಟ ಮಹಾತಾಯಿ. ಇವರಿಗೆ ಎರಡು ಗಂಡು, ಒಂದು ಹೆಣ್ಣು ಮಗು ಜನಿಸಿದೆ. ಅವಧಿಪೂರ್ವ ಜನಿಸಿದ್ದರೂ ನವಜಾತ ಶಿಶುಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಆದರೂ ಶಿಶುಗಳನ್ನು ತೀವ್ರ …

Read More »

13 ಖಜಾನೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ; ಲಕ್ಷಾಂತರ ರೂಪಾಯಿ ಅವ್ಯವಹಾರ ಬೆಳಕಿಗೆ

ಬೆಂಗಳೂರು: ಬಿಲ್ ವಿಲೇವಾರಿಯಲ್ಲಿ ವಿಳಂಬ, ಹಣ ಮಂಜೂರಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಖಜಾನೆ ಇಲಾಖೆಯ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ತಂಡ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಬೆಂಗಳೂರು ನಗರ ಜಿಲ್ಲೆಯ 7 ಖಜಾನೆಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಖಜಾನೆ ಹಾಗೂ ಕೆಜಿಐಡಿ ಇಲಾಖೆಯ ಖಜಾನೆ-2 ಮೇಲೆ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಹಾಗೂ ಬಿ.ವೀರಪ್ಪ ಅವರ ನೇತೃತ್ವದಲ್ಲಿ 11 ನ್ಯಾಯಾಂಗದ …

Read More »

ಶಿವಂ ಅಸೋಸಿಯೇಟ್ಸ್​ನಿಂದ ಹೂಡಿಕೆದಾರರಿಗೆ ₹2,110 ಕೋಟಿ ವಂಚನೆ: ಇ.ಡಿ ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ಹೆಚ್ಚು ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿರುವ ಆರೋಪದಡಿ ಶಿವಂ ಅಸೋಸಿಯೇಟ್ಸ್ ಹಾಗೂ ಶಿವಾನಂದ ಸಿದ್ಧಪ್ಪ ನೀಲಣ್ಣವರ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಭಾರಿ ಕಾರ್ಯಾಚರಣೆ ನಡೆಸಿದೆ. ಮಂಗಳೂರಿನ ಇ.ಡಿ ತನಿಖಾ ತಂಡವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಬೆಳಗಾವಿ, ಚಿಕ್ಕೋಡಿ ಹಾಗೂ ನಿಪ್ಪಾಣಿಯ ಹಲವು ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಮಾಹಿತಿ ನೀಡಿದೆ. ​ತಿಂಗಳಿಗೆ …

Read More »

ಮಂಟೂರು ವಿಭಾಗದ ಸೆಕ್ಷನ್ ಆಫೀಸರ್ ಮೋಹನ ಗುದ್ದಯ್ಯ ಹಿರೇಮಠ ಅವರ ವಿರುದ್ಧ ರೈತರು ಆಕ್ಷೇಪ

ರಾಯಬಾಗ: ಕೃಷಿ ಪಂಪ್‌ಸೆಟ್‌ಗೆ ಅಧಿಕೃತ ಮಂಜೂರಾತಿ ಮಾಡಿಕೊಡುವುದಾಗಿ ₹45 ಸಾವಿರ ಹಣ ಪಡೆದು, ಬಳಿಕ ಮಂಜೂರಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆ ವಿಳಂಬ ಮಾಡಿರುವ ಆರೋಪದಡಿ ರಾಯಬಾಗ HESCOM ಮಂಟೂರು ವಿಭಾಗದ ಸೆಕ್ಷನ್ ಆಫೀಸರ್ ಮೋಹನ ಗುದ್ದಯ್ಯ ಹಿರೇಮಠ ಅವರ ವಿರುದ್ಧ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಟೂರು ಗ್ರಾಮದ ರೈತ ರೇವಪ್ಪ ಹುಕ್ಕೇರಿ ಅವರ ಹೇಳಿಕೆಯ ಪ್ರಕಾರ, ತಮ್ಮ ಜಮೀನಿನ ಬಾವಿಗೆ ಕೃಷಿ ಪಂಪ್‌ಸೆಟ್ ಅಳವಡಿಸಲು ಅಗತ್ಯವಿದ್ದ ಅಧಿಕೃತ ಮಂಜೂರಾತಿಗಾಗಿ 19-05-2025 ರಂದು …

Read More »

ವಿದೇಶ ಪ್ರವಾಸದಲ್ಲಿರುವ ಜನನಾಯಕ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಲಂಡನ್ ನಲ್ಲಿರುವ ಸಂವಿಧಾನ ಶಿಲ್ಪ ಡಾ.ಬಿ.ಆರ್ ಅಂಬೇಡ್ಕರ್ ಅವರು ವಾಸವಿದ್ದ ಸ್ಮಾರಕ ಮನೆಗೆ ಭೇಟಿ ನೀಡಿದರು..

ವಿದೇಶ ಪ್ರವಾಸದಲ್ಲಿರುವ ಜನನಾಯಕ ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಲಂಡನ್ ನಲ್ಲಿರುವ ಸಂವಿಧಾನ ಶಿಲ್ಪ ಡಾ.ಬಿ.ಆರ್ ಅಂಬೇಡ್ಕರ್ ಅವರು ವಾಸವಿದ್ದ ಸ್ಮಾರಕ ಮನೆಗೆ ಭೇಟಿ ನೀಡಿದರು.. ಇಂದು ಲಂಡನ್‌ನಲ್ಲಿ ಸಂವಿಧಾನ ಶಿಲ್ಪ, ಹಿಂದೂತ ನ್ಯಾಯದ ಪ್ರೇರಣಾಸ್ತ್ರ, ಸಮಾಜದ ದಿಕ್ಕುಗೇಲು, ಭಾರತೀಯ ಸಂವಿಧಾನದ ಶಿಲಾವಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವದ ಸ್ಮಾರಕ ಮನೆಗೆ ಭೇಟಿ ನೀಡಿ, ಡಾ. ಅಂಬೇಡ್ಕರ್ ಅವರಿಗೆ ಆಳವಾದ ಗೌರವ ಮತ್ತು ನಮನ ಸಲ್ಲಿಸಿದರು. ಲಂಡನ್‌ …

Read More »

ಕೋಟ್ಯಾಧಿಪತಿಯನ್ನು ಮದುವೆಯಾದ ಮಹಿಳೆ ಬಸ್ ಕಂಡಕ್ಟರ್ ಜತೆ ಪರಾರಿ!

ಕೋಟ್ಯಾಧಿಪತಿಯನ್ನು ಮದುವೆಯಾದ ಮಹಿಳೆ ಬಸ್ ಕಂಡಕ್ಟರ್ ಜತೆ ಪರಾರಿ! ​ಸಾಮಾಜಿಕ ಜಾಲತಾಣಗಳಲ್ಲಿ ಯಾವಾಗ ಏನು ವೈರಲ್ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದಾ ಮುಂಚೂಣಿಯಲ್ಲಿದ್ದ ಕೇರಳದ ಜನಪ್ರಿಯ ದಂಪತಿಗಳಾದ ಅಖಿಲ್ (Akhil NRD) ಮತ್ತು ಮೇಘಾ ಕುರಿತಾದ ಒಂದು ಸುದ್ದಿ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಫಾಲೋವರ್‌ಗಳನ್ನು ಹೊಂದಿರುವ ಈ ಕ್ಯೂಟ್ ಕಪಲ್, ತಮ್ಮ ರೀಲ್ಸ್ ಮತ್ತು ವ್ಲಾಗ್‌ಗಳ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. …

Read More »

ರಾಜ್ಯ ಸರ್ಕಾರದ ನಡೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಪರಿಸ್ಥಿತಿಗೆ ಒಳಗಾಗಿ ರಾಜೀನಾಮೆ ನೀಡಿದ್ದೇನೆ.

ಹುಬ್ಬಳ್ಳಿ: “ರಾಜ್ಯ ಸರ್ಕಾರದ ನಡೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಪರಿಸ್ಥಿತಿಗೆ ಒಳಗಾಗಿ ರಾಜೀನಾಮೆ ನೀಡಿದ್ದೇನೆ. ಅವರಿಗೆ ನನ್ನ ಮೇಲೆ ನಂಬಿಕೆ ಇಲ್ಲ ಅಂದರೆ ಅಲ್ಲಿ ಇರೋದು ಸರಿಯಲ್ಲ ಅನ್ನಿಸಿತು. ಇನ್ನು ಮುಂದೆ ಸಾಮಾನ್ಯ ಸದಸ್ಯನಾಗಿ ಸದನದಲ್ಲಿ ಭಾಗವಹಿಸುತ್ತೇ‌ನೆ” ಎಂದು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನೇನು ತಪ್ಪು ಮಾಡಿದ್ದೇನೆ?, ಭ್ರಷ್ಟಾಚಾರ ಮಾಡಿದ್ದೀನಾ? ಅವ್ಯವಹಾರ ಮಾಡಿದ್ದೀನಾ? ಅವಿಶ್ವಾಸ ಮಂಡನೆ ಮಾಡಲು …

Read More »

ಬೃಹತ್ ತಿರಂಗಾ ಯಾತ್ರೆ: ದೇಶಭಕ್ತಿಯ ಅಲೆಯಲ್ಲಿ ತೇಲಿದ ಚಿಕ್ಕೋಡಿ ನಗರ

ಚಿಕ್ಕೋಡಿ:ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲೆಯ ವತಿಯಿಂದ ಇಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ತಿರಂಗಾ ಯಾತ್ರೆ ವೈಭವಯುತವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಸ್ಥಳೀಯ ಸಂಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮೀಜಿಯವರು ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ‘ಅಖಂಡ ವಂದೇ ಮಾತರಂ’ ಘೋಷಣೆಯೊಂದಿಗೆ ಯಾತ್ರೆಗೆ ಚಾಲನೆ ನೀಡಿದರು. ಸಾವಿರಾರು ವಿದ್ಯಾರ್ಥಿಗಳು ಒಗ್ಗೂಡಿ ರಾಷ್ಟ್ರಗೀತೆ ಗಾಯನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಭವ್ಯ ಆರಂಭ ಸಿಕ್ಕಿತು. ಈ …

Read More »

ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಹಾದಾಯಿ, ಕಳಸಾ-ಬಂಡೂರಿ, ಮೇಕೆದಾಟು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನ್ನಟ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆಯಿಂದ ಆ.13 ರಂದು ಅಖಂಡ ಕರ್ನಾಟಕ ಬಂದ್ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಇಲ್ಲಿನ ಕಿತ್ತೂರು …

Read More »

ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಅಲಾರವಾಡ ಅಂಡರ್‌ಬ್ರಿಡ್ಜ್ ಸರ್ಕಲ್‌ನಿಂದ ಹಳೆಯ ಬೆಳಗಾವಿ ನಾಕಾ ನಡುವಿನ ಓಲ್ಡ್ ಪಿಬಿ ರಸ್ತೆ ಅಂದರೆ ಯಡಿಯೂರಪ್ಪ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು ಎಂದು ಆಗ್ರಹಿಸಿ ಅಡ್ವೊಕೇಟ್ ಅಣ್ಣಾಸಾಹೇಬ್ ಘೋರ್ಪಡೆ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಕಾರ್ಮಿಕರು, ರೈತರು ಮತ್ತು ನಾಗರಿಕರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಕಮಕಾರಹಟ್ಟಿ, ತಾರಿಹಾಳ, ಮಸ್ತಮರ್ಡಿ, …

Read More »