ಮುಂಬಯಿ: ರಿಷಬ್ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …
Read More »ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ. ಪಟ್ಟಿಯಲ್ಲಿ ಬದಲಾವಣೆ
ಕಲಬುರಗಿ: ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಉತ್ತಮ ಶಿಕ್ಷಕರ ಆಯ್ಕೆಯನ್ನು ಅಂತೀಮಗೊಳಿಸುವಲ್ಲಿ ರಾಜಕೀಯ ಪ್ರಹಸನ ನಡೆದಿರುವುದು ಇಡೀ ಶಿಕ್ಷಣ ಇಲಾಖೆ ತಲೆ ತಗ್ಗಿಸುವಂತಾಗಿದೆ. ಡಿಡಿಪಿಐ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ತಾಲೂಕಿಗೆ ಇಬ್ಬರು ಶಿಕ್ಷಕರಂತೆ ಒಟ್ಟು 16 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕಿಗೆ ಒಬ್ಬರಂತೆ 8 ಉತ್ತಮ ಶಿಕ್ಷಕರೆಂದು ಪಟ್ಟಿ ಅಂತೀಮಗೊಳಿಸಿ ಸಿಇಓ ಅವರಿಗೆ ಸಲ್ಲಿಸಿ ಅನುಮತಿ ಪಡೆದು ಸಾರ್ವಜನಿಕ ಪ್ರಕಟಣೆಗಾಗಿ ವಾರ್ತಾ ಇಲಾಖೆ ಗೆ ಸಲ್ಲಿಸಲಾಗಿದೆ. ಆದರೆ …
Read More »ನಾನು ಯಾವ ರೇಸ್ನಲ್ಲೂ ಇಲ್ಲ: ಆರ್.ವಿ.ದೇಶಪಾಂಡೆ
ಧಾರವಾಡ: ‘ನಾನು ಯಾವ ರೇಸ್ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.
Read More »ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ …
Read More »ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ
ಕಿತ್ತೂರು: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಅಪಹರಣಕ್ಕೆ ಒಳಗಾದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು ಕಾಂಗ್ರೆಸ್ …
Read More »ಅಸುರಕ್ಷಿತ ಸ್ಥಳಗಳಲ್ಲಿ ಪಟಾಕಿ ಮಳಿಗೆ!
ಹುಬ್ಬಳ್ಳಿ: ಗಣೇಶ ಹಬ್ಬದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲೆಯ ವಿವಿಧೆಡೆ ಇರುವ ಪಟಾಕಿ ಸಂಗ್ರಹ ಗೋದಾಮು ಹಾಗೂ ಮಾರಾಟ ಮಳಿಗೆಗಳ ಪರಿಶೀಲನೆಗೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಮಳಿಗೆಗಳ ಮಾಲೀಕರಿಗೆ ನೋಟಿಸ್ ನೀಡಿ, ಬೀಗ ಹಾಕಲು ನಿರ್ಧರಿಸಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ವಿಶೇಷ ತಂಡ, ಪಟಾಕಿ ಅಂಗಡಿಗಳ ಪರಿಶೀಲನೆ ನಡೆಸಲು ಸಿದ್ಧತೆ ನಡೆಸಿವೆ. …
Read More »ಈದ್ಗಾದಲ್ಲಿ ಗಣೇಶೋತ್ಸವ: ಪಾಲಿಕೆಯಿಂದ ಅನುಮತಿ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಸ್ತುತ ವರ್ಷವೂ ಮೂರು ದಿನಗಳ ಅನುಮತಿ ನೀಡಿದೆ. ಮಂಡಳಿಯ ಪದಾಧಿಕಾರಿಗಳಿಗೆ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ವಿತರಿಸಿದರು. ‘ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಸೆಪ್ಟೆಂಬರ್ 7 ರಿಂದ 9ರವರೆಗೆ ಉತ್ಸವ ಆಚರಿಸಬಹುದು. ಸೂಚಿಸಿದ ಜಾಗದಲ್ಲೇ ಪೆಂಡಾಲ್ ಹಾಕಬೇಕು. ಬೇರೆ ಯಾವುದೇ ರೀತಿ ಬಾವುಟ, ಪ್ರಚೋದನಕಾರಿ ಭಾವಚಿತ್ರ, …
Read More »ಕಲಘಟಗಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆ
ಕಲಘಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯಿತು. ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆ ಹಾನಿಯ ಆತಂಕ ರೈತರನ್ನು ಕಾಡುತ್ತಿದೆ. ರಸ್ತೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಪಟ್ಟಣದಲ್ಲಿ ಮಂಗಳವಾರ ನಡೆದ ಸಂತೆಯಲ್ಲಿ ಜನರು ಮಳೆಯಲ್ಲೇ ತರಕಾರಿ ಖರೀದಿಸಿದರು. ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದ ಚರ್ಚ್ ರಸ್ತೆ ಮೇಲೆ ಚರಂಡಿ ನೀರು ಹಾಗೂ ಮಳೆ ನೀರು ಹರಿದಿದ್ದರಿಂದ ಎಲ್ಲೆಡೆ ಕೊಳಚೆ ಸಂಗ್ರಹವಾಗಿತ್ತು. …
Read More »ಬೆಳಗಾವಿ: ಉಪ ಆಯುಕ್ತರ ಕಾರಿಗೆ ನೋಟಿಸ್ ಪ್ರತಿ ಅಂಟಿಸಿದ ಸಂತ್ರಸ್ತ
ಬೆಳಗಾವಿ: ರಸ್ತೆ ನಿರ್ಮಾಣಕ್ಕಾಗಿ ಶಹಾಪುರದ ಹೈಬತ್ತಿ ಕಾಲೊನಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿಗೆ, ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆಯವರು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಂತ್ರಸ್ತರೊಬ್ಬರು ಇಲ್ಲಿನ ಪಾಲಿಕೆ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಉಪ ಆಯುಕ್ತರ ವಾಹನಕ್ಕೆ ನೋಟಿಸ್ ಪ್ರತಿ ಅಂಟಿಸಿದ ಪ್ರಸಂಗ ಮಂಗಳವಾರ ನಡೆಯಿತು. ‘ನಾನು ರಸ್ತೆ ನಿರ್ಮಾಣಕ್ಕಾಗಿ 5 ಗುಂಟೆ ಜಮೀನು ನೀಡಿದ್ದೇನೆ. ಆದರೆ, ಹಲವು ವರ್ಷಗಳಿಂದ ಪರಿಹಾರ ಕೊಡದೆ ಸತಾಯಿಸುತ್ತಿದ್ದಾರೆ. ನನಗೆ ₹75.96 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ …
Read More »ಹೊಲದ ಸೀಮೆಯ ವಿಚಾರ,ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ
ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ ಹೊಲದ ಸೀಮೆಯ ವಿಚಾರಕ್ಕೆ ದೇವಸ್ಥಾನದ ಕಟ್ಟೆಯ ಮೇಲೆ ಹರಿದ ನೆತ್ತರು ಮಡ್ಡೆಪ್ಪ ಯಲ್ಲಪ್ಪ ಬಾನಸಿ(47) ಮೃತ ದುರ್ದೈವಿ ಬೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದ ಘಟನೆ ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಮರಕಾಸ್ತ್ರದಿಂದ ಮಡ್ಡೆಪ್ಪನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬೀರಪ್ಪ ತೀವ್ರ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ …
Read More »
Laxmi News 24×7