Breaking News

Laxminews 24x7

ಭೆಂಡಿಗೇರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಭೆಂಡಿಗೇರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಭೆಂಡಿಗೇರಿ ಗ್ರಾಮದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದಿಢೀರ್ ಬಸ್ ತಡೆದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬಸ್‌ಗಳ ಅಭಾವದಿಂದಾಗಿ ಪ್ರತಿದಿನ ನೂಕುನುಗ್ಗಲಿನಲ್ಲಿ ಜೀವಭಯದಿಂದ ಪ್ರಯಾಣಿಸುವಂತಾಗಿದ್ದು, ಸಾರಿಗೆ ಸಂಸ್ಥೆಯು ತಕ್ಷಣವೇ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ ಭೆಂಡಿಗೇರಿ ಗ್ರಾಮದಲ್ಲಿ ಬಸ್‌ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು …

Read More »

ಹಿರಿಯ ನಾಗರಿಕನ ನಿಸ್ವಾರ್ಥ ಸೇವೆ: ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿದ ಎಂ. ಎ. ಸಯ್ಯದ್

ಚಿಕ್ಕೋಡಿ:ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಪರದಾಡುತ್ತಿರುವ ಈ ದಿನಗಳಲ್ಲಿ, ಹಿರಿಯ ನಾಗರಿಕರೊಬ್ಬರು ಸ್ವತಃ ಮುಂಚೂಣಿಯಲ್ಲಿ ನಿಂತು ರಸ್ತೆ ಗುಂಡಿ ಮುಚ್ಚುವ ಮೂಲಕ ಸಾರ್ವಜನಿಕರ ಜೀವ ರಕ್ಷಣೆಗೆ ಮುಂದಾಗಿ ಮಾದರಿಯಾಗಿದ್ದಾರೆ. ಚಿಕ್ಕೋಡಿ-ಕರೋಶಿ ರಸ್ತೆ ಮಾರ್ಗದಲ್ಲಿ ಬಿದ್ದಿದ್ದ ಅಪಾಯಕಾರಿ ರಸ್ತೆ ಗುಂಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಭೀತಿ ಎದುರಾಗಿತ್ತು. ಸ್ಥಳೀಯ ಆಡಳಿತದ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ, ಯಾರ ನೆರವಿಗೂ ಕಾಯದೆ ಚಿಕ್ಕೋಡಿಯ ಹಿರಿಯ ನಾಗರಿಕ ಎಂ. …

Read More »

ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿ

ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿ • ಗಣಾಚಾರಿ ರುದ್ರಭೂಮಿಯಲ್ಲಿ ಸಸಿ ನೆಡುವ ಅಭಿಯಾನ • ಪರಿಸರ ಸಂರಕ್ಷಣೆಗೆ ಆರ್‌ಎಫ್‌ಒ ಕರೆ • ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾಯಕ ಯಶಸ್ವಿ • ಸಮಾಜದ ಹಲವು ಪ್ರಮುಖರ ಸಕ್ರಿಯ ಭಾಗಿ ಬೆಳಗಾವಿಯ ಸದಾಶಿವ ನಗರದ ಗಣಾಚಾರಿ ರುದ್ರಭೂಮಿಯಲ್ಲಿ ವೀರಶೈವ ಸಮಾಜ ಸೇವಾ ಸಮಿತಿ, ಪಾಹಿ ಫೌಂಡೇಶನ್ ಹಾಗೂ ಕರ್ನಾಟಕ ಸರ್ಕಾರದ ವಲಯ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ …

Read More »

ಲಿಂಗರಾಜ ಕಾಲೇಜಿನಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ

ಲಿಂಗರಾಜ ಕಾಲೇಜಿನಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ ದೇಶಪ್ರೇಮವೆಂದರೆ ದೇಶದ ಪ್ರಗತಿಗೆ ಪ್ರಾಮಾಣಿಕವಾಗಿ ದುಡಿಯುವುದು: ಮೇಜರ್ ಮಹೇಶ ಗುರನಗೌಡರ ಬೆಳಗಾವಿ, ಆ. 10:* ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಮರ್ಪಣಾಭಾವದಿಂದ ದುಡಿಯಬೇಕು. ನಮ್ಮಲ್ಲಿ ‘ದೇಶ ನನ್ನದು’ ಎಂಬ ಹೆಮ್ಮೆ ಹಾಗೂ ಜವಾಬ್ದಾರಿಯ ಭಾವನೆ ಬೆಳೆಸಿಕೊಳ್ಳಬೇಕು ಎಂದು ಲಿಂಗರಾಜ ಕಾಲೇಜಿನ ಎನ್‌ಸಿಸಿ …

Read More »

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭ; ನಶಾಮುಕ್ತ ರಾಷ್ಟ್ರನಿರ್ಮಾಣ ಸಂಕಲ್ಪ

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭ; ನಶಾಮುಕ್ತ ರಾಷ್ಟ್ರನಿರ್ಮಾಣ ಸಂಕಲ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ನಾಯಕತ್ವ ಗುಣ ಬೆಳೆಸುವ ವೇದಿಕೆ: ಜಿಪಂ ಸಿಇಒ ರಾಹುಲ್ ಶಿಂಧೆ ಬೆಳಗಾವಿ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ನಗರದ ಸೇಂಟ್ ಅಂಥೋನಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸೋಮವಾರ …

Read More »

ಮರಾಠಾ ಮಂಡಳದಲ್ಲಿ “ಯಶಸ್ವಿಯಾಗಿ” ಪ್ರವಚನ: ವಿದ್ಯಾರ್ಥಿಗಳಿಗೆ ಪ್ರಹ್ಲಾದ್ ಪೈ ಮಾರ್ಗದರ್ಶನ

• ಮರಾಠಾ ಮಂಡಳದಲ್ಲಿ ಪ್ರಹ್ಲಾದ್ ಪೈ ಉಪನ್ಯಾಸ • ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಾಧ್ಯ: ಪೈ • ಸಮಯದ ಸದ್ಬಳಕೆಗೆ ವಿದ್ಯಾರ್ಥಿಗಳಿಗೆ ಕರೆ • ಪಸಾಯದಾನದೊಂದಿಗೆ ಯಶಸ್ವಿ ಕಾರ್ಯಕ್ರಮ ಮುಕ್ತಾಯ ಬೆಳಗಾವಿಯ ಮರಾಠಾ ಮಂಡಳ ಸಂಸ್ಥೆಯಲ್ಲಿ ಪ್ರಖ್ಯಾತ ಪ್ರವಚನಕಾರ ಪ್ರಹ್ಲಾದ್ ವಾಮನ್‌ರಾವ್ ಪೈ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಜೀವನವಿದ್ಯಾ ಮಿಷನ್ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ಸಿನ ಮಾರ್ಗದರ್ಶನ ಪಡೆದರು. ಬೆಳಗಾವಿಯ …

Read More »

ಹಿರಿಯ ರಾಜಕಾರಣಿ, ಮಾಜಿ ರಾಜ್ಯಪಾಲ ಡಿ. ವೈ. ಪಾಟೀಲ್ ನಿಧನ: ಕುಟುಂಬಸ್ಥರಿಗೆ ಡಾ. ಪ್ರಭಾಕರ್ ಕೋರೆ ಸಾಂತ್ವನ

ಹಿರಿಯ ರಾಜಕಾರಣಿ, ಮಾಜಿ ರಾಜ್ಯಪಾಲ ಡಿ. ವೈ. ಪಾಟೀಲ್ ನಿಧನ: ಕುಟುಂಬಸ್ಥರಿಗೆ ಡಾ. ಪ್ರಭಾಕರ್ ಕೋರೆ ಸಾಂತ್ವನ ಇತ್ತೀಚೆಗೆ ಕೊಲ್ಲಾಪುರದಲ್ಲಿ ನಿಧನರಾದ ಪಶ್ಚಿಮ ಬಂಗಾಳ, ಬಿಹಾರ ಮತ್ತು ತ್ರಿಪುರಾ ರಾಜ್ಯಗಳ ಮಾಜಿ ರಾಜ್ಯಪಾಲ ಹಾಗೂ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಡಿ. ವೈ. ಪಾಟೀಲ್ ಅವರ ನಿವಾಸಕ್ಕೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ಪದ್ಮಶ್ರೀ ಡಾ. ಪ್ರಭಾಕರ್ ಕೋರೆ ಅವರು ರವಿವಾರ ಸಂಜೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಕೊಲ್ಲಾಪುರದಲ್ಲಿ ನಿಧನರಾದ ಪಶ್ಚಿಮ …

Read More »

ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು

ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು ಕುಮಟಾ: ರಾಷ್ಟ್ರೀಯ ಹೆದ್ದಾರಿ 66 ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಬರ್ಗಿ ಸಮೀಪದ ಸರ್ಕಾರಿ ಪ್ರೌಢಶಾಲೆ ಬಳಿ ಸೋಮವಾರ ನಡೆದಿದೆ. ಮೃತರನ್ನು ಕುಮಟಾ ಶಶಿಹಿತ್ಲ ನಿವಾಸಿ ದುರ್ಗಿ ಮಾದೇವ ಹರಿಕಾಂತ (62) ಎಂದು ಗುರುತಿಸಲಾಗಿದೆ. ದುರ್ಗಿ ಅವರು ಬರ್ಗಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಲು ಕುಮಟಾದಿಂದ ಬಂದು ಬರ್ಗಿಯಲ್ಲಿ ಬಸ್ ಇಳಿದಿದ್ದರು. …

Read More »

ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಬೆಳಗಾವಿಯ ಪುಣೆ–ಬೆಂಗಳೂರು (ಪಿ.ಬಿ.) ರಸ್ತೆಯ ತಾನಾಜಿ ಗಲ್ಲಿ ಓವರ್‌ಬ್ರಿಡ್ಜ್‌ ಬಳಿ ಸೋಮವಾರ ಮಧ್ಯಾಹ್ನ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ರೋಹಿತ್ ರಮೇಶ್ ಪಾಟೀಲ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸೋಶಿಯಲ್ ವರ್ಕರ್ ರೆಸ್ಕ್ಯೂ ತಂಡದ ಅವಧೂತ್ ತುದವೇಕರ್, ಪದ್ಮಪ್ರಸಾದ್ …

Read More »

ಬೆಳಗಾವಿ | ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಬಂಧನ

ಬೆಳಗಾವಿ: ನಗರದಲ್ಲಿ ಗಾಂಜಾ ಮಿಶ್ರಿತ ಮಾದಕ ವಸ್ತುವಿನ ಚಾಕೊಲೇಟ್ ಪ್ಯಾಕೆಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉದ್ಯಮಬಾಗ ಪೊಲೀಸ್‌ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಭೋಲು ಪ್ರಜಾಪತಿ (39) ಬಂಧಿತ ಆರೋಪಿ. ಬೆಳಗಾವಿ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮುಂಭಾಗದ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಗಾಂಜಾ ಮಿಶ್ರಿತ ಮಾದಕ ವಸ್ತುವಿನ ಚಾಕೊಲೇಟ್ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತ …

Read More »