Breaking News

Laxminews 24x7

B.J.P.ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದೆಂದರೆ ಭೂತದ ಬಾಯಿಯಲ್ಲಿ ಭಗವದ್ಗೀತೆ ಉಲಿದಂತೆ:ಶಂಕರಗೌಡ ಪಾಟೀಲ

ಬೆಳಗಾವಿ  : ಬೆಳಗಾವಿ : ಭಾರತೀಯ ಜನತಾ ಪಾರ್ಟಿಯವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದೆಂದರೆ ಭೂತದ ಬಾಯಿಯಲ್ಲಿ ಭಗವದ್ಗೀತೆ ಉಲಿದಂತೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ ಹೇಳಿದ್ದಾರೆ. ಕುಟುಂಬ ರಾಜಕಾರಣ ಕುರಿತಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸುತ್ತಿರುವ ಕುರಿತು ಹೇಳಿಕೆ ನೀಡಿರುವ ಅವರು, ರಾಷ್ಟ್ರ ರಾಜಕಾರಣದಿಂದ ಹಳ್ಳಿ ರಾಜಕಾರಣದವರೆಗೂ ಕುಟುಂಬ ರಾಜಕಾರಣವನ್ನೇ ಮಾಡಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಈ ಬಗ್ಗೆ ಮಾತನಾಡಲು ಯಾವ ನೈತಿಕತೆ …

Read More »

ವಾಹನ ಸವಾರ’ರಿಗೆ ಗುಡ್ ನ್ಯೂಸ್: ‘ಪೆಟ್ರೋಲ್, ಡೀಸೆಲ್ ದರ’ ಪ್ರತಿ ಲೀಟರ್ ಗೆ 2 ರೂ ಇಳಿಕೆ

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ.   ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು …

Read More »

ಮಕ್ಕಳಿಗೆ ಸಂಸ್ಕಾರ-ಸಂಸ್ಕೃತಿ ಕಲಿಸೋಣ: ಹಂಚಲಿ

ಅಡಹಳ್ಳಿ: ಒಂದಿಷ್ಟು ದೇಶಗಳು ಹಣ ಬಲ, ಶಸ್ತ್ರ ಬಲ ಮತ್ತು ಭಯೋತ್ಪಾದನೆಯಿಂದ ಜಗತ್ತನ್ನಾಳಲು ಹೊರಟರೆ, ಆಧ್ಯಾತ್ಮಿಕ ಬಲದಿಂದ ಭಾರತ ವಿಶ್ವವನ್ನೇ ಗೆಲ್ಲಲು ಹೊರಟಿದೆ ಎಂದು ತಾಳಿಕೋಟಿಯ ವಾಗ್ಮಿ ಅಶೋಕ ಹಂಚಲಿ ಹೇಳಿದರು. ಅವರು ಸಮೀಪದ ನದಿ ಇಂಗಳಗಾಂವ ಗ್ರಾಮದಲ್ಲಿ 63ನೇ ಶರಣ ಸಂಸ್ಕೃತಿ ಉತ್ಸವ ನಿಮಿತ್ತ ಮುತ್ತೈದೆಯರಿಗೆ ಉಡಿ ತುಂಬುವ, ಮಹಾಂತ ಅಪ್ಪಗಳ ತೃತೀಯ ಪುಣ್ಯಸ್ಮರಣೋತ್ಸವ ಹಾಗೂ ಶರಣ ದಂಪತಿಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸ್ಕೃತಿ ಉಳಿವು ಕುರಿತು ಉಪನ್ಯಾಸ ನೀಡಿ, …

Read More »

ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಮಾರ್ಚ್‌ 14: ಬಿಸಿಲಿನ ಕಾವು ಜೋರಾಗುತ್ತಿದ್ದಂತೆ ರಾಜ್ಯದಲ್ಲೂ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನ ರಾಜಕೀಯ ಪಕ್ಷಗಳು ನಡೆಸಿದಿದ್ದು, ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇನ್ನು ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ1.ಡಾ. ಅಜಯ್ ನಾಗಭೂಷಣ್ ಎಂ.ಎನ್: …

Read More »

ಪ್ರತಿಜೀವಕ ಔಷಧ ದುರ್ಬಳಕೆ ತಡೆಗಟ್ಟಿ’

ಚನ್ನಮ್ಮನ ಕಿತ್ತೂರು: ‘ಪ್ರತಿಜೀವಕ (ಆಯಂಟಿ ಬಯೊಟಿಕ್) ಔಷಧಗಳನ್ನು ಹೆಚ್ಚು ಉಪಯೋಗ ಮಾಡುತ್ತಿರುವ ಕ್ರಮದಿಂದಾಗಿ ರೋಗಿಗಳ ಪಾಲಿಗೆ ತಂದೊಡ್ಡುವ ಅಪಾಯ ತಪ್ಪಿಸಬೇಕಿದೆ. ಇವುಗಳ ದುರ್ಬಳಕೆಯನ್ನೂ ತಡೆಗಟ್ಟಬೇಕಿದೆ’ ಎಂದು ಬೆಳಗಾವಿ ವಿಭಾಗದ ಔಷಧ ಉಪನಿಯಂತ್ರಕ ಎಸ್. ನಾಗರಾಜ್ ಸಲಹೆ ನೀಡಿದರು.   ತಾಲ್ಲೂಕಿನ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ನಿರಂತರ ಕಲಿಕಾ ಕಾರ್ಯಕ್ರಮದಡಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರತಿಜೀವಕ ಔಷಧಗಳ ದುರುಪಯೋಗ ಪಡೆಯಲು ಔಷಧ ವ್ಯಾಪಾರಿಗಳು ಮತ್ತು ವೈದ್ಯರ ಸಹಕಾರ ಹೆಚ್ಚಾಗಿ …

Read More »

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ?

ಎರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಅಂತ ಹೇಳಿ ಗಂಡ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ತನಿಖೆ ಶುರು ಮಾಡಿದ್ದಾರೆ. ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.ಅವರದ್ದು ಏಳು ವರ್ಷದ ದಾಂಪತ್ಯ ಜೀವನ, …

Read More »

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …

Read More »

NDA ಜೊತೆ ನಿತೀಶ್ ಮೈತ್ರಿ: ನ್ಯಾ.ರೋಹಿಣಿ ಸಮಿತಿ ವರದಿ ನಿರ್ಲಕ್ಷ್ಯ ಸಾಧ್ಯತೆ?

ನವದೆಹಲಿ: ಲೋಕಸಭಾ ಚುನಾವಣೆ ಎದುರಾಗುತ್ತಿದ್ದಂತೆಯೇ ದೇಶಾದ್ಯಂತ ರಾಜಕೀಯ ಸಮೀಕರಣಗಳು ಬದಲಾಗತೊಡಗಿವೆ. ಸಹಜವಾಗಿಯೇ ಇದು ಹಲವು ರೀತಿಗಳಲ್ಲಿ ತನ್ನದೇ ಆದ ಪರಿಣಾಮಗಳನ್ನು ಹೊಂದಿರಲಿದೆ. ಈ ಪೈಕಿ ಬಿಹಾರಕ್ಕೆ ಸಂಬಂಧಿಸಿದ ನ್ಯಾ. ರೋಹಿಣಿ ಸಮಿತಿ ವರದಿಯೂ ಸೇರಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ, ಎನ್ ಡಿಎ ಮೈತ್ರಿಕೂಟ ಸೇರಿದ್ದು, ನರೇಂದ್ರ ಮೋದಿ ಸರ್ಕಾರ ನ್ಯಾ.ರೋಹಿಣಿ ಸಮಿತಿ ವರದಿಯನ್ನು ನಿರ್ಲಕ್ಷ್ಯ ವಹಿಸಿರುವಂತೆ ತೋರುತ್ತಿದೆ. ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ …

Read More »

ಗಡಿ ಸಂರಕ್ಷಣಾ ಆಯೋಗ: ಬೆಳಗಾವಿಯಲ್ಲಿ ಕಚೇರಿ’

ಬೆಳಗಾವಿ: ‘ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗವನ್ನು ಪುನರ್ ರಚಿಸಲಾಗುವುದು. ಅದಕ್ಕೂ ಮುನ್ನ, ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕಚೇರಿ ಆರಂಭಿಸಲಾಗುವುದು. ಆಯೋಗದ ಒಬ್ಬ ಸದಸ್ಯ ಇಲ್ಲಿದ್ದು ಜನರ ಕುಂದುಕೊರತೆಗೆ ಸ್ಪಂದಿಸಲಿದ್ದಾರೆ’ ಎಂದು ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಹೇಳಿದರು.   ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಇರುವ ಆಯೋಗ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ರಾಜ್ಯದ ವಿವಿಧೆಡೆಯ ಸದಸ್ಯರನ್ನು ಸೇರಿಸಿ, ನಾಲ್ಕೇ ತಿಂಗಳಲ್ಲಿ ಪುನರ್ …

Read More »

ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ಅಸಲಿ ಕಾರಣ ಇಲ್ಲಿದೆ ನೋಡಿ!

ಬಿಜೆಪಿ ಲೋಕಸಭಾ ಚುನಾವಣೆ 2024ರ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಮೊದಲೇ ಅಂದುಕೊಂಡಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಲ್ಲೂ ಈ ಪಟ್ಟಿಯಲ್ಲಿ ಮೈಸೂರು & ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಈಗ, ಮಾಜಿ ಸಂಸದ ಆಗೋದು ಪಕ್ಕಾ ಆಗಿದೆ. ತಮ್ಮದೇ ತಪ್ಪಿಗೆ ಬೆಲೆ ಕಟ್ಟಿದ ಸಿಂಹ?ಹೊರಗಡೆ ಈಗ ಓಡಾಡುತ್ತಿರುವ ವಿಚಾರ ಏನು ಅಂದ್ರೆ, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಸ್. ಯಡಿಯೂರಪ್ಪ …

Read More »