Breaking News

Laxminews 24x7

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

ರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ  ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಭಕ್ತರು ರಾಯರ ವೃಂದಾವನ ದರ್ಶನ ಪಡೆಯುತ್ತಿದ್ದಾರೆ. ಮಠದ ಯಾವುದೇ ಬಾಗಿಲು ಬಂದ್ ಮಾಡಿಲ್ಲ. ಆದ್ರೆ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಒಂದೆಡೆ ಹೋಳಿ ಹುಣ್ಣಿಮೆ ಹಾಗೂ ಇನ್ನೊಂದೆಡೆ ಚಂದ್ರ ಗ್ರಹಣ ಹಿನ್ನೆಲೆ ಭಕ್ತರ ಸಂಖ್ಯೆ ವಿರಳವಾಗಿದೆ. ಮಂತ್ರಾಲಯ ಮಠದಲ್ಲಿ  ಬೆಳಿಗ್ಗೆ ರಾಯರ ವೃಂದಾವನಕ್ಕೆ ಜಲಾಭಿಷೇಕ ಹೊರತು ಪಡಿಸಿ ಬೇರೆ ಪೂಜೆ, ನೈವೇದ್ಯ …

Read More »

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ ಸಿಎಂ ಹಾಗೂ ಸಿಎಸ್ ಪತ್ರ ಬರೆದಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್‌  ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಕೊಲ್ಲಿ ದೇಶಗಳಲ್ಲಿ ಕನ್ನಡಿಗರು ಸಿಲುಕಿರುವ ಬಗ್ಗೆ ಪ್ರತಿಕ್ರಿಯಿಸಿದರು. ಬಹಳಷ್ಟು ಜನ ಕನ್ನಡಿಗರು ಅಲ್ಲಿ ಸಿಲುಕಿದ್ದಾರೆ. …

Read More »

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಇರಾನ್‌ನ ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪವಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿಗಳನ್ನು ತೀವ್ರಗೊಳಿಸಿವೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ನಡುವೆ ಭೂಕಂಪ ಸಂಭವಿಸಿದೆ. ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. …

Read More »

ಅಧ್ಯಯನದಿಂದ ಭವಿಷ್ಯ ರೂಪಿಸಿಕೊಳ್ಳಿ

ರಾಮದುರ್ಗ: ಹೆತ್ತವರು, ಗುರುಗಳು ಹಾಗೂ ಕಲಿತ ಶಾಲೆಯ ಋಣ ತೀರಿಸಲು ಮಕ್ಕಳು ಕಂಕಣಬದ್ಧರಾಗಬೇಕು ಎಂದು ನಿವೃತ್ತ ಡಿಡಿಪಿಐ ಎಂ.ಜಿ.ದಾಸರ ಹೇಳಿದರು. ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ. ಅಲ್ಲಿಂದಲೇ ಸಂಸ್ಕೃತಿ ಆರಂಭವಾವುದು ಬಹುಮುಖ್ಯವಾಗಿದೆ ಎಂದರು. ವಿಪ ಸದಸ್ಯ ಹನುಮಂತ ನಿರಾಣಿ ಮಾತನಾಡಿ, ಮಕ್ಕಳು ಟಿವಿ, ಮೊಬೈಲ್ ಗೀಳಿಗೆ …

Read More »

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

ಬೆಂಗಳೂರು: ದುಬೈನಲ್ಲಿ ಸಿಲುಕಿರುವ ಕನ್ನಡಿಗರ  ಸುರಕ್ಷತೆಗೆ ಆದ್ಯತೆ ನೀಡಿರುವ `ಕನ್ನಡಿಗಾಸ್ ಹೆಲ್ಪ್‌ಲೈನ್‌’  ತಂಡ ಪ್ರವಾಸಿಗರಲ್ಲಿ ಆತ್ಮವಿಶ್ವಾಸ ತುಂಬಿದೆ. ಹೌದು, ಇರಾನ್-ಇಸ್ರೇಲ್ ಯುದ್ಧದಿಂದಾಗಿ  ಉದ್ವಿಗ್ನತೆ ಹೆಚ್ಚಾಗಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡು ತವರಿಗೆ ಮರಳಲಾಗದೇ ಸಂಕಷ್ಟದಲ್ಲಿದ್ದಾರೆ. ಅಂಥವರ ನೆರವಿಗೆ ಅನಿವಾಸಿ ಕನ್ನಡಿಗ ಪೋಷಕರಾದ ರೊನಾಲ್ಡ್ ಕೊಲಸೊ ನೇತೃತ್ವದ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ತಂಡ ಧಾವಿಸಿದೆ. ಯುಎಇಯಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಕನ್ನಡಿಗಾಸ್ ಹೆಲ್ಪ್‌ಲೈನ್‌ ಸಹಾಯಹಸ್ತ ಚಾಚಿದ್ದು, ಕನ್ನಡಿಗರ ಮಾಹಿತಿ ಸಂಗ್ರಹಿಸಿ ತುರ್ತು …

Read More »

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ ಕಂಡುಬಂದಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಕಸ ವಿಲೇವಾರಿ, ವಿಂಗಡಣೆ ಹಾಗೂ ಸ್ವಚ್ಛತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೂವರು ರಾಯಭಾರಿಗಳ ನೇಮಕ ಮಾಡಿದ್ದಾರೆ. ಬೆಂಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು …

Read More »

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಈ ಬಗ್ಗೆ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಮಾತನಾಡಿ, ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್‌  2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದರು. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು …

Read More »

1 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಇಒ

ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇಒ ಕಚೇರಿಯ ಅಧೀಕ್ಷಕರಾದ ಲಿಂಗರಾಜು ಎಂಬುವವರಿಗೆ 2011 ರಿಂದ 2023 ರವರೆಗೆ ವೇತನ ಭಡ್ತಿ ಮತ್ತು ಇತರೇ ಭತ್ಯೆಗಳ ಹಣ ಬಾಕಿ ಇತ್ತು. ಇದನ್ನು ಮಂಜೂರು ಮಾಡಲು ಹಲವು ಬಾರಿ ಬಿಇಒ ನಾಗೇಂದ್ರಪ್ಪ ಅವರನ್ನು ಕೋರಿದ್ದರು. ಬಿಇಒ ಅವರು …

Read More »

ಮಾಹಿತಿ ನೀಡಲು ವಿಳಂಬ ಮಾಡಿದ ಪಿಡಿಒ ಸೇರಿ ಗ್ರಾಪಂ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ

ಕೊಪ್ಪಳ: ಸಕಾಲಕ್ಕೆ ಮಾಹಿತಿ ನೀಡಿದೆ ನಿರ್ಲಕ್ಷ್ಯ ವಹಿಸಿದ ಒಬ್ಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮೂವರು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಅವರು ತಲಾ 10,000 ರೂ.ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಮೇಲ್ಮನವಿದಾರರು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದೆ ಇರುವುದರಿಂದ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಸಲ್ಲಿಸಿದ …

Read More »

ರಾಜ್ಯದಲ್ಲಿ 56 ಸಾವಿರ ಹುದ್ದೆಗಳ ಭರ್ತಿ ಐತಿಹಾಸಿಕ ನಿರ್ಧಾರ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸೋಮವಾರ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆಶೀರ್ವಾದ ಪಡೆದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮೀಸಲಾತಿ ನಿಗದಿ ಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು …

Read More »