Breaking News

Laxminews 24x7

ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಯೋಜನೆ ಜನರಿಗೆ ತಲುಪಿಸಿ

ಸತ್ತಿಗೇರಿ: ನರೇಂದ್ರ ಮೋದಿ ನೇತತ್ವದ ಕೇಂದ್ರ ಸರ್ಕಾರ 12 ವರ್ಷಗಳ ಯಶಸ್ವಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿರುವ ಜನಪರ, ಅಭಿವದ್ಧಿ ಕಾರ್ಯ ಕುರಿತು ಕಾರ್ಯಕರ್ತರು ಜನರಿಗೆ ಮಾಹಿತಿ ತಲುಪಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವಿರೂಪಾಕ್ಷ ಮಾಮನಿ ತಿಳಿಸಿದರು. ಇಟ್ನಾಳ, ಗುಡಮಕೇರಿ ಗ್ರಾಮಗಳಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಗ್ರಾಮಮಟ್ಟದ ಪಕ್ಷದ ಹಿರಿಯ ಕಾರ್ಯಕರ್ತರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮಹತ್ವ ವಿವರಿಸಿ, ಅರ್ಹ ಮತದಾರರ ಹೆಸರು ಸೇರ್ಪಡೆ, ಅಗತ್ಯ …

Read More »

ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ

ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ. ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಸಚಿವ ಜೋಶಿ ಅವರು, ರಾಜ್ಯದ ಮಾವು ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರವೇ …

Read More »

ಎಸ್ಐಆರ್ ಯಶಸ್ವಿಗೆ ನಗರ ಸೇವಕರ ಸಹಕಾರ ಅಗತ್ಯ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ

ಬೆಳಗಾವಿ: ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ  ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಆರಂಭವಾಗಲಿದ್ದು, ಯಶಸ್ವಿಗೆ ನಗರ ಸೇವಕರ ಸಹಕಾರ ಅಗತ್ಯವಾಗಿ ಬೇಕೆಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕೋರಿದರು. ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ  ಗುರುವಾರ  ನಗರಸೇವಕರಿಗಾಗಿ ಆಯೋಜಿಸಲಾಗಿದ್ದ ಎಸ್ಐಆರ್ ಕುರಿತ ಮಾಹಿತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಉತ್ತರ ದಕ್ಷಿಣ ಎರಡು ವಿಭಾಗಗಳಿದ್ದು, ದಕ್ಷಿಣಕ್ಕೆ ಚುನಾವಣಾ ಅಧಿಕಾರಿಯಾಗಿ ನಾನು, ಸಹಾಯಕ ಚುನಾವಣಾ …

Read More »

ಅತೀವೃಷ್ಠಿ ಮತ್ತು ಅನಾವೃಷ್ಠಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶಿಲ್ದಾರ ಹನುಮಂತ್ ಶಿರಹಟ್ಟಿ

ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ಅತೀವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ತಹಶಿಲ್ದಾರರಾದ ಹನುಮಂತ್ ಶಿರಹಟ್ಟಿ ಸೂಚನೆ ನೀಡಿದರು. ಸ್ಥಳೀಯ ರೈತ ತರಬೇತಿ ಕೇಂದ್ರದಲ್ಲಿ  ರಂದು ನಡೆದ ವಿಪತ್ತು ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಜಿಂಗಲ್ಸ್ ಹಾಗೂ …

Read More »

ಕಾಂಗ್ರೆಸ್​ 5, ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು! ಜೆಡಿಎಸ್​ಗೆ ಮುಖಭಂಗ

ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗಾಗಿ ನಡೆದ ಮತದಾನದ ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್​ ಮೇಲುಗೈ ಸಾಧಿಸಿದೆ. 32 ಮತಗಳಿಂದ ಗೆದ್ದ ವಿನಯ್​ ಕಾರ್ತಿಕ್​, ಅತಿ ಹೆಚ್ಚು ಮತಗಳನ್ನು ಗಳಿಸಿ ‘ಕೈ’ ಗೆಲುವಿಗೆ ಸಾಕ್ಷಿಯಾಗಿದ್ದಾರೆ. 6 ಜೆಡಿಎಸ್​, 3 ಬಿಜೆಪಿ ಶಾಸಕರಿಂದ ಅಡ್ಡ ಮತದಾನ! ಏಳನೇ ಸ್ಥಾನದ ಈ ರೋಚಕ ಕದನದಲ್ಲಿ ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್‌ನ ಗೋವಿಂದರಾಜು ನಡುವೆ ಪೈಪೋಟಿ ಇತ್ತು, ಇಬ್ಬರಿಗೂ ಮ್ಯಾಜಿಕ್ ನಂಬರ್ …

Read More »

ಎಂಇಎಸ್ ಆಯೋಜಿಸಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾಗೆ ಅನುಮತಿ ನೀಡದಂತೆ ಕರವೇ ಒತ್ತಾಯ

ಜೂನ್ 22 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಆಯೋಜಿಸಲಾಗಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕನ್ನಡ ನಾಡು, ನುಡಿ ಹಾಗೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಕಾನೂನು ಮತ್ತು …

Read More »

ಜೂ.25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ: ರಾಮಲಿಂಗಾರೆಡ್ಡಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳನ್ನು ಇದೇ ಜೂನ್ 25ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್‌ಗೆ ಭೇಟಿ ನೀಡಿ, ಜಲಾಶಯದ ಮೇಲ್ಭಾಗ ಹಾಗೂ ಕಾಯ೯ಕ್ರಮ ನಡೆಸುವ ಮೈದಾನವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ಕ್ರಸ್ಟ್ ಗೇಟಗಳ ಲೋಕಾಪ೯ಣೆ ಕಾಯ೯ಕ್ರಮಕ್ಕೆ ಆಂಧ್ರಪ್ರದೇಶ, ತಮಿಳುನಾಡಿನ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಆಗಮಿಸಲಿದ್ದಾರೆ. ಕೇಂದ್ರ ಜಲಸಂಪನ್ಮೂಲ …

Read More »

ಭಟ್ಕಳದಲ್ಲಿ ಲವ್ ಜಿಹಾದ್ ಆರೋಪ – ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಯುವಕ ಅರೆಸ್ಟ್‌

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ, ಮುಸ್ಲಿಂ ಸಂಘರ್ಷಕ್ಕೆ ಟ್ಟಿಸ್ಟ್ ಸಿಕ್ಕಿದೆ. ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್‌ ಮಾಡಲಾಗಿದ್ದು, ಲವ್ ಜಿಹಾದ್  ಆರೋಪ ಕೇಳಿಬಂದಿದೆ. ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಆದರೇ ಗ್ರಾಮೀಣ ಠಾಣೆ ಪೊಲೀಸರು ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದನ್ನ ವಿರೋಧಿಸಿ ಹಿಂದೂಪರ …

Read More »

ಹೊಸ ಸರ್ಕಾರ ಬಂದ ಮೇಲೆ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗ್ತಿದೆ: ಡಿಕೆಶಿ

ಬೆಂಗಳೂರು: ಹೊಸ ಸರ್ಕಾರ ಬಂದ ಮೇಲೆ ನಡೆದ ಚುನಾವಣೆಯಲ್ಲಿ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗುತ್ತಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು. ಪರಿಷತ್‌ ಚುನಾವಣೆ  ಫಲಿತಾಂಶದ ಬಗ್ಗೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ನಮ್ಮ ಸರ್ಕಾರಕ್ಕೆ ನೀವು ಮುಂದುವರಿಯಿರಿ ಎಂದು ರಾಜ್ಯದ ಜನರ ಅಭಿಪ್ರಾಯದ ಬೆಂಬಲ ಇದಾಗಿದೆ. ನಮಗೆ ಬೇರೆ ಬೇರೆ ಪಕ್ಷದವರು ಮತ ಕೊಟ್ಟಿದ್ದಾರೆ. ಅವರ ವಿಶ್ವಾಸಕ್ಕೆ, ಭಾವನಗೆ ನಾವು ಗೌರವಿಸುತ್ತೇವೆ. ಇದು ಇಡಿ …

Read More »

ಬಿಸಿಯೂಟದಲ್ಲಿ ಹಲ್ಲಿ ಬಾಲ ಪತ್ತೆ ಶಂಕೆ; 67 ಮಕ್ಕಳು ಆಸ್ಪತ್ರೆಗೆ ದಾಖಲು

ಮಂಡ್ಯ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ  ಬಿದ್ದಿರುವ ಶಂಕೆ ವ್ಯಕ್ತವಾದ ಹಿನ್ನೆಲೆ 67 ವಿದ್ಯಾರ್ಥಿಗಳನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದಲ್ಲಿ ನಡೆದಿದೆ. ರಾವಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿಯ ತಟ್ಟೆಯಲ್ಲಿ ಹಲ್ಲಿ ಬಾಲದಂತಿರುವ ಪದಾರ್ಥ ಪತ್ತೆಯಾಗಿದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ ಉಂಟಾಗಿದೆ. ತಕ್ಷಣ ಎಚ್ಚೆತ್ತ ಶಾಲಾ ಸಿಬ್ಬಂದಿ, …

Read More »