Breaking News

Laxminews 24x7

ಕರ್ನಾಟಕ ರಾಜಕಾರಣಕ್ಕೆ ಗುಡ್‌ ಬೈ ಹೇಳಿದ ಶ್ರೀರಾಮುಲು ಸೋದರಿ!

ಬಳ್ಳಾರಿ : ಬಿಜೆಪಿ (BJP) ತೊರೆದು ವೈಎಸ್‌ಆರ್‌ (YSRP) ಕಾಂಗ್ರೆಸ್‌ ಪಕ್ಷ ಸೇರಿರುವ ಮಾಜಿ ಸಂಸದೆ ಜೆ. ಶಾಂತಾ (J Shanta) ಕರ್ನಾಟಕ ರಾಜಕಾರಣಕ್ಕೆ ಗುಡ್‌ ಬೈ ಹೇಳಿದ್ದಾರೆ. ಮಾಜಿ ಸಚಿವ ಶ್ರೀರಾಮುಲು (Sriramulu) ಸೋದರಿಯಾಗಿರುವ ಶಾಂತಾ, ಆಂಧ್ರಪ್ರದೇಶದ (Andhrapradesh) ಸಿಎಂ ಜಗಮೋಹನ್‌ ರೆಡ್ಡಿ (CM Jagamohan reddy) ಸಮ್ಮುಖದಲ್ಲಿ ವೈಎಸ್‌ಆರ್‌ ಪಾರ್ಟಿ ಸೇರ್ಪಡೆಯಾಗಿದ್ದಾರೆ.   ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಕ್ಷೇತ್ರದಿಂದ ಶಾಂತಾ ಅವರಿಗೆ ವೈಎಸ್‌ಆರ್‌ ಟಿಕೆಟ್‌ ದೊರೆಯಲಿದೆ ಎನ್ನಲಾಗಿದೆ. …

Read More »

ಕರ ಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವೇ? ಅಶೋಕ್ ಪ್ರಶ್ನೆ

ಧಾರವಾಡ: ಕರ ಸೇವಕರ ಮೇಲಿನ ಕೇಸ್ ರೀ ಓಪನ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಅಲ್ಲದೇ ರಾಮ ಭಕ್ತರನ್ನು ಬಂಧಿಸುವ ಹುನ್ನಾರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಆರ್ ಅಶೋಕ್‌(R Ashoka) ಆರೋಪಿಸಿದ್ದಾರೆ. ಕರಸೇವಕ ಶ್ರೀಕಾಂತ್ ಪೂಜಾರಿಯನ್ನು(Srikanth Pujari) ಬಂಧನ ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ(Hubballi) ಶಹರ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್‍‌.ಅಶೋಕ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೇ ಸಂದರ್ಭದಲ್ಲಿ …

Read More »

ಲೂಟಿ ಮಾಡಿರುವವರು ರಾಮರಾಜ್ಯದ ಬಗ್ಗೆ ಮಾತಾಡುತ್ತಾರೆ: ಪಾಟೀಲ್

ವಿಜಯಪುರ: ಬಜೆಟ್ ಗಿಂತ ಹೆಚ್ಚು ಹಣ ಖರ್ಚು ಮಾಡಿ ರಾಜ್ಯವನ್ನು ಲೂಟಿ ಮಾಡಿರುವವರು ಈಗ ರಾಮ (ram) ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಇಂತವರಿಂದ ನಾವು ಕಲಿಯೋದು ಏನಿದೆ ಎಂದು ಕೈಗಾರಿಕ ಸಚಿವ ಎಂ. ಬಿ. ಪಾಟೀಲ್ (m.b. patil) ಹೇಳಿದರು. ವಿಜಯಪುರದಲ್ಲಿ (vijaypura) ಕೆಡಿಪಿ ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ (pulwama), ಬಾಲಾಕೋಟ್ (balkot) ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದ ಬಿಜೆಪಿ (bjp) ಈಗ ರಾಮನ ಹೆಸರನ್ನು ಬಳಸಿಕೊಂಡು …

Read More »

ರಾಮ ಮಂದಿರ ಲೋಕಾರ್ಪಣೆ- ಸಿದ್ದಗಂಗಾ ಶ್ರೀಗಳಿಗೆ ಬಂತು ಆಹ್ವಾನ

ತುಮಕೂರು : ಇದೇ ಜನೆವರಿ 22 ರಂದು ಅಯೋಧ್ಯೆಯಲ್ಲಿ(Ayodhye) ನಡೆಯಲಿರುವ ರಾಮಲಲ್ಲಾ ಮೂರ್ತಿ(Ramalalla) ಪ್ರಾಣಪ್ರತಿಷ್ಟಾಪನೆ ಮತ್ತು ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳಿಗೆ ಆಮಂತ್ರಣ ತಲುಪಿದೆ. ಶ್ರೀರಾಮ ಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಂದ ಅಧಿಕೃತ ಆಹ್ವಾನ ಬಂದಿದ್ದು ಈ ಬಗ್ಗೆ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ. ಜನೆವರಿ 20 ರಂದೇ ಅಯೋಧ್ಯೆ ತಲುಪುವಂತೆ ರಾಮಮಂದಿರ ಟ್ರಸ್ಟ್‌ನಿಂದ …

Read More »

ಸಿದ್ದರಾಮಯ್ಯ ಅವರನ್ನ ನಿತ್ಯಾನಂದನಿಗೆ ಹೋಲಿಸಿದ ಬಿ.ಕೆ ಹರಿಪ್ರಸಾದ್!

ಬೆಂಗಳೂರು: ನಿತ್ಯಾನಂದನಿಗೆ ಹೇಗೆ ಭಕ್ತರಿದ್ದಾರೆಯೋ ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ (BK Hariprasad) ವ್ಯಂಗ್ಯವಾಡಿದರು. ಮಾಜಿ ಸಚಿವ ಹೆಚ್. ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು. ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರವನ್ನು ಸಮರ್ಥಿಸಿಕೊಂಡ ಹರಿಪ್ರಸಾದ್, …

Read More »

ಕರಸೇವಕರ ಬಂಧನಕ್ಕೆ ವಿರೋಧ – ಬಿಜೆಪಿಯಿಂದ ಭಾರಿ ಪ್ರತಿಭಟನೆ..!

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ (BJP) ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯ (Hubballi) ನಗರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ (Protest) ನಡೆಸಿದರು. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್‌ (R Ashok) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಈ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಾಗಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಶಕಗಳ ಹಳೆಯ ಕೇಸ್‌ಗಳನ್ನು …

Read More »

ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ಕ್ಕೆ ಡಿಕೆಶಿ ಚಾಲನೆ

ಬೆಂಗಳೂರು: ಇಂದು ರಾಜ್ಯ ಸರ್ಕಾರದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಎಂಬ ಹೆಸರಿನ ಜನಸಂಪರ್ಕ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಮಹಾದೇವಪುರ ಮತ್ತು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ನಾಗರಿಕರು ತಮ್ಮ ಕುಂದುಕೊರತೆಗಳನ್ನು ಮುಕ್ತವಾಗಿ ಹಂಚಿಕೊಂಡರು.   ಕೆ.ಆರ್.ಪುರದ ಶಾಸಕ ಬೈರತಿ ಬಸವರಾಜು ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಸುತ್ತಲಿನ …

Read More »

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು …

Read More »

CONGRESS V/S BJP: ಸಿದ್ದು ನಮಸ್ಕಾರ ಬರೀ ಕಾಟಾಚಾರ – ಬಿಜೆಪಿ ಟೀಕೆ!

ಬೆಂಗಳೂರು: ವಿಜಯಪುರದ (Vijayapur) ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿದ್ದರು. ಈ ವೇಳೆ ಗರ್ಭಗುಡಿಯ ಒಳಗಡೆ ಹೋಗದೆ, ಹೊರಗಿನಿಂದಲೇ ನಮಸ್ಕರಿಸಿದ್ದರು. ಇದೀಗ ಈ ಬಗ್ಗೆ ರಾಜ್ಯ ಬಿಜೆಪಿ (BJP) ಟೀಕೆ ಮಾಡಿದೆ.   ಈ ಬಗ್ಗೆ ಎಕ್ಸ್ ನಲ್ಲಿ (X) ಬರೆದುಕೊಂಡಿರುವ ಬಿಜೆಪಿ, “ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ (Ram Mandir) ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ …

Read More »

ಮಕ್ಕಳು ಹೂ ಕಿತ್ತಿದ್ದಕ್ಕೇ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ದುಷ್ಟ!

ಬೆಳಗಾವಿ :‌ ಅಂಗನವಾಡಿಯ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿದ್ದ ಹೂ ಕಿತ್ತರೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಅಂಗನವಾಡಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿರುವ ದುರ್ಘಟನೆ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ( 50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಕಲ್ಯಾಣಿ ಮೋರೆ ಈ ದುಷ್ಕೃತ್ಯ ಎಸಗಿದ್ದಾನೆ.   ಅಂಗನವಾಡಿ ಸಹಾಯಕಿಯಾಗಿ ಸುಗಂಧಾ ಕೆಲಸ ಮಾಡುತ್ತಿದ್ದರು. ಅವರ ಅಂಗನವಾಡಿಯ ಮಕ್ಕಳು ಕಲ್ಯಾಣಿ ಮೋರೆ ಮನೆಯ ಮುಂದಿರುವ ಮಲ್ಲಿಗೆ ಹೂ …

Read More »