ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು. ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ …
Read More »ಚನ್ನಮ್ಮಾಜಿ ದಿಟ್ಟತನ, ಸ್ವಾಭಿಮಾನ, ಛಲವನ್ನು ಮೈಗೂಡಿಸಿಕೊಳ್ಳಿ: ನಟ ರಮೇಶ್ ಅರವಿಂದ ಕರೆ
ಬೆಳಗಾವಿ: “200 ವರ್ಷಗಳ ಹಿಂದೆ ಆಂಗ್ಲರು ಮಂಡಿಯೂರುವಂತೆ ಮಾಡಿದ ವೀರಮಹಿಳೆ ಕಿತ್ತೂರು ಚನ್ನಮ್ಮ. ಕಿತ್ತೂರಿನ ಈ ವೀರಭೂಮಿಯಲ್ಲಿ ಸಹಸ್ರಾರು ವೀರಮಹಿಳೆಯರು ಹುಟ್ಟಿ ಬರಬೇಕು. ಕಿತ್ತೂರು ನೆಲದ ಜನರು ಚನ್ನಮ್ಮನ ದಿಟ್ಟತನ, ಸ್ವಾಭಿಮಾನ, ಹೋರಾಟದ ಛಲವನ್ನು ರೂಢಿಸಿಕೊಳ್ಳಬೇಕು” ಎಂದು ನಟ ರಮೇಶ್ ಅರವಿಂದ್ ಕರೆ ನೀಡಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಸನ್ಮಾನಿಸಲಾಯಿತುಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ …
Read More »ಕಾರ್ಮಿಕ ನ್ಯಾಯಾಲಯದ ಪೀಠಾಧಿಕಾರಿ ನೇಮಕ ವಿಳಂಬವಾದರೆ 10 ಲಕ್ಷ ರೂ ದಂಡ: ಕೆಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ನಗರದಲ್ಲಿರುವ ಕೈಗಾರಿಕಾ ನ್ಯಾಯಾಧೀಕರಣ (ಕಾರ್ಮಿಕ ನ್ಯಾಯಾಲಯ) ದ ಪೀಠಾಸೀನಾಧಿಕಾರಿಯ ನೇಮಕಾತಿ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದಿನ ಮೂರು ವಾರಗಳಲ್ಲಿ ಈ ಸಂಬಂಧ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ ದಂಡ ತೆತ್ತಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೈಗಾರಿಕಾ ಕಾನೂನು ಅಭ್ಯಾಸಕಾರರ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ …
Read More »ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ
ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …
Read More »ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!
ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ …
Read More »ನವೆಂಬರ್ 2ರಿಂದ ಪ್ರಸಿದ್ಧ ಹಾಸನಾಂಬ ದೇವಾಲಯ ಓಪನ್
ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಹಾಸನ: ನವೆಂಬರ್ 2ರಂದು ಪ್ರಸಿದ್ಧ ಅಧಿದೇವತೆ ಹಾಸನಾಂಬೆ ದೇವಸ್ಥಾನ ತೆರೆಯಲಾಗುತ್ತಿದ್ದು ಅಪಾರ ಭಕ್ತರು ಆಗಮಿಸುವ ನಿರೀಕ್ಷೆಯ ಮೇಲೆ ನಿಗಾ ಇಡಲು ಜಿಲ್ಲಾಡಳಿತ ಹೊಸ ನಿಯಮಗಳನ್ನು ರೂಪಿಸಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಬರುವ …
Read More »ಬರ ಪರಿಸ್ಥಿತಿ: ಕೇಂದ್ರದಿಂದ 17,901.73 ಕೋಟಿ ರೂ. ಪರಿಹಾರ ಕೋರಿದ ರಾಜ್ಯ ಸರ್ಕಾರ!
ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ. 17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ.17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗ ಕೇಂದ್ರ …
Read More »ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ …
Read More »ದರ್ಶನ್, ರಾಕ್ಲೈನ್ ವೆಂಕಟೇಶ್ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಶೋಧ
ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪದಡಿ ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ನಟ ದರ್ಶನ್ ತೂಗುದೀಪ ಸೇರಿದಂತೆ ನಾಲ್ವರ ಮನೆಗಳ ಮೇಲೆ ಶೋಧ ವಾರೆಂಟ್ ಪಡೆದು ಪರಿಶೀಲನೆ ನಡೆಸಿದರು. ನಟರಾದ ಜಗ್ಗೇಶ್, ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಇಲಾಖೆಯ ನಾಲ್ಕು ತಂಡಗಳು ಪ್ರತ್ಯೇಕವಾಗಿ ತೆರಳಿದ್ದು, ನೊಟೀಸ್ ನೀಡಿ, ಮನೆಯ ಇಂಚಿಂಚೂ ಶೋಧಿಸಿವೆ. ಆರ್.ಆರ್.ನಗರದಲ್ಲಿರುವ ದರ್ಶನ್ ಮನೆಗೆ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ …
Read More »ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ! ನೆದರ್ಲೆಂಡ್ಸ್ ವಿರುದ್ಧ 309 ರನ್ಗಳ ಜಯಭೇರಿ
ಆಸ್ಟ್ರೇಲಿಯಾ ನೀಡಿರುವ 400 ರನ್ಗಳ ಗುರಿ ಬೆನ್ನತ್ತುವಲ್ಲಿ ವಿಫಲವಾದ ನೆದರ್ಲೆಂಡ್ಸ್ 309 ರನ್ಗಳ ಭಾರಿ ಅಂತರದ ಸೋಲು ಕಂಡಿತು. ನವದೆಹಲಿ: ಐದು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ಇಂದು ತಮ್ಮ ಹಳೆಯ ಚಾರ್ಮ್ ಪ್ರದರ್ಶಿಸಿತು. ನೆದರ್ಲೆಂಡ್ಸ್ ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಚಾಂಪಿಯನ್ ರೀತಿಯ ಪ್ರದರ್ಶನ ನೀಡಿ 29 ಓವರ್ ಮತ್ತು 309 ರನ್ಗಳಿಂದ ಪಂದ್ಯ ಗೆದ್ದುಕೊಂಡಿತು. ಆಸ್ಟ್ರೇಲಿಯಾ ನೀಡಿದ 400 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಡಚ್ಚರು 21 …
Read More »
Laxmi News 24×7