ವಿಜಯಪುರ: ಪಕ್ಷವನ್ನು ಯಡಿಯೂರಪ್ಪ (BS Yediyurappa) ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ ಎಂದು ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ (Karnataka) ಬಿಜೆಪಿಯನ್ನು (BJP) ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಪಕ್ಷವನ್ನು ಯಡಿಯೂರಪ್ಪ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ರಿಜಿಸ್ಟ್ರಾರ್ ಮಾಡಿಸಿದ್ದಾರೆ ಎಂದರು. ಅಧಿವೇಶನದಲ್ಲಿ ಬಿಜೆಪಿ ಗಮನ ಸೆಳೆಯಲಿಲ್ಲ. ಇದು ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್. ಎಲ್ಲವೂ ಹೊಂದಾಣಿಕೆ, ಚುನಾವಣೆಯಲ್ಲೂ ಹೊಂದಾಣಿಕೆ, …
Read More »ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು:C.M.
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ. ಬೆಂಗಳೂರು, ಡಿಸೆಂಬರ್26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ …
Read More »ಬಿಎಸ್ವೈ ಸರ್ಕಾರದಲ್ಲಿ ಕೋವಿಡ್ ವೇಳೆ ಭಾರಿ ಅವ್ಯವಹಾರ? – ಯತ್ನಾಳ್
ವಿಜಯಪುರ : ಕೋವಿಡ್ ಮೊದಲ ಅಲೆಯ(Covid first wave) ಸಂದರ್ಭದಲ್ಲಿ ಬಿಎಸ್ವೈ(B S Yediyurappa) ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಈ ಬಗ್ಗೆ ಮಾಜಿ ಸಿಎಂ ಬಿಎಸ್ವೈ ಅವರಿಗೆ ಮಾಹಿತಿ ನೀಡಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸಮಯದಲ್ಲಿ 45 ರೂ ಮಾಸ್ಕ್ಗೆ 485 ರೂ ನಿಗದಿಪಡಿಸಲಾಗಿತ್ತು . ಕೊರೊನಾ ರೋಗಿ ಹೆಸರಲ್ಲಿ …
Read More »ರೈತರ ಅವಹೇಳನ – ಶಿವಾನಂದ ಪಾಟೀಲ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ. ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು. …
Read More »ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ …
Read More »ಶಾಮನೂರು, ಡಿಕೆಶಿ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಗಳು!
ಬೆಂಗಳೂರು : ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ 2023 (Pressclub annual award 2023) ರ ಪಟ್ಟಿ ಪ್ರಕಟವಾಗಿದ್ದು, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (Shamanur shivashankarappa), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ಕ್ರೀಡಾಪಟು ಕೆ. ಗೋವಿಂದರಾಜು ಸೇರಿದಂತೆ 29 ಮಂದಿ ಪತ್ರಕರ್ತರೂ ಸಹ ಜೀವಮಾನ ಪ್ರಶಸ್ತಿ ಪಡೆಯಲಿದ್ದಾರೆ. ಡಿ. 31 ರಂದು …
Read More »ಫ್ಯ್ಲಾಟ್ ನಿರ್ಮಿಸಿಕೊಡದ ಬಿಲ್ಡರ್! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ನಿಗದಿತ ಅವಧಿಯಲ್ಲಿ ಫ್ಯ್ಲಾಟ್ ನಿರ್ಮಿಸಿಕೊಡದ ಬಿಲ್ಡರ್ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್ ಬಿಲ್ಡರ್ಸ್ ಮತ್ತು ಡೆವೆಲಪರ್ಸ್ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ …
Read More »ಹುಬ್ಬಳ್ಳಿ: ಪ್ರತಿಷ್ಠಿತ ಹೋಟೆಲ್ನಲ್ಲಿ ಮಹಿಳೆಗೆ ಕಿರುಕುಳ
ಹುಬ್ಬಳ್ಳಿ, ಡಿ.24: ಪ್ರತಿಷ್ಠಿತ ಹೋಟೆಲೊಂದರಲ್ಲಿ ಮಹಿಳೆಗೆ ಮೂವರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ (Royal Ridge Hotel) ಇದೇ ತಿಂಗಳ 2ನೇ ತಾರೀಖಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕಿರುಕುಳ ಹಿನ್ನಲೆ ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದು 20 ದಿನಗಳು ಕಳೆದರೂ ಆರೋಪಿಗಳ ವಿರುದ್ಧ ಯಾವುದೇ …
Read More »ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್ರೂಮ್ನಲ್ಲೇ ಸಾವು
ಬೆಂಗಳೂರು, (ಡಿಸೆಂಬರ್ 25): ಸ್ನಾನ ಮಾಡಲು ಬಾತ್ರೂಮ್ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ ಮೃತಪಟ್ಟಿದ್ದಾಳೆ. ಬಾತ್ರೂಮ್ನಲ್ಲಿದ್ದ ಗೀಸರ್ನ ಗ್ಯಾಸ್(gas geyser) ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಆದ್ರೆ, ಇಂದು(ಡಿಸೆಂಬರ್ 25) ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ …
Read More »ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವು
ಬೆಂಗಳೂರು, ಡಿ.25:ನಗರದ ಸುದ್ದಗುಂಟೆಪಾಳ್ಯ( Suddaguntepalya ) ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷದಡಿಸಿಲುಕಿದ್ದ ಬಿಹಾರ ಮೂಲದ ಕಾರ್ಮಿಕ ರಂಜನ್ ಎಂಬಾತ ಕೊನೆಯುಸಿರೆಳೆದಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೃತ ದೇಹ ಹೊರ ತೆಗೆದಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ‘ಮಧ್ಯಾಹ್ನ 2.30ರ ಸುಮಾರಿಗೆ …
Read More »
Laxmi News 24×7