Breaking News

Laxminews 24x7

ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ     ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನುಲೋಕಾಯುಕ್ತ (Lokayukta)ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್​ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್​ …

Read More »

ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …

Read More »

ಭೀಕರ ಬರ ಇದ್ದರೂ ಶಾಸಕರ ನಿರ್ಲಕ್ಷ್ಯ: ರೈತರು ಆಕ್ರೋಶ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಂಚನದಿಗಳು ಹರಿದರೂ ಆ ನೀರು ಬಹುತೇಕ ರೈತರಿಗೆ ತಲುಪುತ್ತಿಲ್ಲ. ಬಹುತೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು ಜಲಸಂಪನ್ಮೂಲ ಸಚಿವರು, ಡಿಸಿಎಂ ಡಿಕೆ ಶಿವಕುಮಾರ್​ ಬೆಳಗಾವಿಯಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದರು. ಆದರೆ ರೈತರ ಸಮಸ್ಯೆ ಗಮನ ಸೆಳೆಯಬೇಕಿದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ, ಅಕ್ಟೋಬರ್​​​ 19: ಜಿಲ್ಲೆಯಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಬರಗಾಲ(drought)ಇದ್ದು ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಂಚನದಿಗಳು …

Read More »

ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ

ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಸಚಿವರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಬಿಜೆಪಿ, ಇದೀಗ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ರಾಹುಲ್ ಗಾಂಧಿ ಸೇರಿ ಹಲವು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಬಿಡುಗಡೆ …

Read More »

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ …

Read More »

ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ

ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …

Read More »

ದಸರಾ ಹಬ್ಬ: ನೈರುತ್ಯ ರೈಲುಗಳ ತಾತ್ಕಾಲಿಕ ನಿಲುಗಡೆ ಕುರಿತು ಮಾಹಿತಿ

ಹುಬ್ಬಳ್ಳಿ : ಅಕ್ಟೋಬರ್ 19 ರಿಂದ 25 ರವರೆಗೆ ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬ ನಡೆಯುತ್ತಿದೆ. ಈ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ, ರೈಲುಗಳಿಗೆ ಸೂಚಿಸಲಾದ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ.   1. ಮೈಸೂರು-ಬೆಳಗಾವಿ ಡೈಲಿ ಎಕ್ಸ್‌ಪ್ರೆಸ್ (17301) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ. • ಬೆಳಗುಳ ನಿಲ್ದಾಣಕ್ಕೆ: …

Read More »

ಕಿಮ್ಸ್​ನಲ್ಲಿ ಔಷಧಕ್ಕಾಗಿ ರೋಗಿಗಳ ನೂಕುನುಗ್ಗಲು

ಹುಬ್ಬಳ್ಳಿ: ಕಿಮ್ಸ್ ಉತ್ತರ ಕರ್ನಾಟಕ ಭಾಗದ ಅತೀ ದೊಡ್ಡ ಆಸ್ಪತ್ರೆ . ಈ ಭಾಗದ ಸಂಜೀವಿನಿ ಎಂದೇ ಖ್ಯಾತಿ‌ ಪಡೆದುಕೊಂಡಿದೆ. ಆದರೆ ಇಂದು ಔಷಧ ಪಡೆಯಲು ರೋಗಿಗಳು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇರುವ ಕೌಂಟರ್​ಗಳಲ್ಲಿ ಜನರಿಗೆ ಸಮರ್ಪಕವಾಗಿ ಔಷಧ ವಿತರಣೆ ಮಾಡಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಔಷಧ ವಿತರಣೆ ಕೌಂಟರ್ ಬಳಿಯಲ್ಲಿ ಜನದಟ್ಟಣೆ ಹೆಚ್ಚಾಗಿ ರೋಗಿಗಳು ಸಾಕಷ್ಟು ಸರ್ಕಸ್ ಮಾಡಿ ಔಷಧ ಪಡೆಯುವಂತಾಗಿತ್ತು. ರೋಗಿಗಳು ವೈದ್ಯರು‌ ಬರೆದುಕೊಟ್ಟ ಔಷಧದ ಚೀಟಿ …

Read More »

ಮಹಡಿ ಮೇಲೆ ಉಯ್ಯಾಲೆ ಆಡುವಾಗ ಆಯತಪ್ಪಿ ಬಿದ್ದು ಶಿಕ್ಷಕಿ ಸಾವು

ಚಾಮರಾಜನಗರ: ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದ ಶಿಕ್ಷಕಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ನಡೆದಿದೆ. ಶಿಕ್ಷಕಿ ಕೆ.ಪುಟ್ಟಿ(53) ಮೃತರು. ಪುಟ್ಟಿ ಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಸಂಘದ ತಾಲೂಕು ಅಧ್ಯಕ್ಷರು ಕೂಡ ಆಗಿದ್ದರು. ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಶಿಕ್ಷಕಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ …

Read More »

ಕುಲಕ್ಷ ಕಾರಣಕ್ಕೆ ಮಗನ ಜೊತೆ ಸೇರಿ ಗಂಡನನ್ನು ಕೊಂದ ಪತ್ನಿ.. ಮಂಡ್ಯದಲ್ಲಿ ಭೀಭತ್ಸಕ ಕೃತ್ಯ

ಮಂಡ್ಯ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಮಗ ಸೇರಿ ಕೊಲೆ ಮಾಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಚಾಪುರದೊಡ್ಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಉಮೇಶ್ (50) ಎಂದು ಗುರುತಿಸಲಾಗಿದೆ.   ಘಟನೆಯ ಹಿನ್ನೆಲೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಲವು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗುತ್ತಿದೆ. ಈಗಾಗಲೇ ಕಳೆದ ಐದಾರು ತಿಂಗಳ …

Read More »