ಆರೋಗ್ಯ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಹರ್ಷ ಗುಪ್ತ ಸಾಹೇಬರ ವರ್ಗಾವಣೆ ಸರ್ಕಾರದ ಅತ್ಯಂತ ಕೆಟ್ಟ ನಿರ್ಧಾರವಾಗಿದೆ ಎಂದು ಸತ್ಯಪ್ಪ ವಿಷಾದ ವ್ಯಕ್ತಪಡಿಸಿದರು. ಈ ಬಗ್ಗೆ ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರು ಮಾತನಾಡಿ ಶ್ರೀ ಹರ್ಷ ಗುಪ್ತ ಸಾಹೇಬರು ತಮ್ಮ 30 ವರ್ಷಗಳ ಸೇವಾ ಅವಧಿಯಲ್ಲಿ 26 ಬಾರಿ ಏಕಾಏಕಿ ವರ್ಗಾವಣೆಯಾಗಿದ್ದು ಈ ಬಾರಿಯೂ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದ …
Read More »ಖಾನಾಪುರ ಗ್ರಾಮದ ಶಿವಲಿಂಗ ಹಾದಿಮನಿ ನಿಧನ
ಗೋಕಾಕ ತಾಲೂಕಿನ ಖಾನಾಪುರ ಗ್ರಾಮದ ಹಿರಿಯರು ಹಾಗೂ ಗೌರವಾನ್ವಿತ ಪಂಚರಾದ ಶಿವಲಿಂಗ ಹಾದಿಮನಿ ಅವರು ನಿಧನ ಹೊಂದಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಸರಳ ಸ್ವಭಾವ, ಸಮಾಜಮುಖಿ ಚಿಂತನೆ ಮತ್ತು ಗ್ರಾಮಾಭಿವೃದ್ಧಿಗೆ ಮಾಡಿದ ಸೇವೆಗಳ ಮೂಲಕ ಅವರು ಎಲ್ಲರ ಮನಗಳಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ.
Read More »ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು
ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ. ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್ (2) ಮೃತ ಮಗು. ಅಕ್ಷತಾ ಮಗುವಿನೊಂದಿಗೆ ಸಾಗರದಲ್ಲಿನ ತವರು ಮನೆಗೆ ಬಂದಿದ್ದರು. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗುವಿಗೆ ಹಾವು ಕಚ್ಚಿದೆ. ಮಗು ಅಳುವುದನ್ನು ಕಂಡು ಕುಟುಂಬಸ್ಥರು ಬಂದು ನೋಡಿದಾಗ ಹಾವು ಕಚ್ಚಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಪೋಷಕರು …
Read More »ಬೆಳಗಾವಿ ನ್ಯಾಯಾಲದ ಮುಂದೆ ಮಾಧ್ಯಮಗಳ ಮೇಲೆ ಹಲ್ಲೆ: ನಾಲ್ವರ ವಿರುದ್ಧ ಎಫ್ಐಆರ್
ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಆರೋಪಿಗಳನ್ನು ನ್ಯಾಯಾಲಯದಿಂದ ವಾಪಸ್ ಕರೆದುಕೊಂಡು ಹೋಗುವ ವೇಳೆ ಆರೋಪಿಗಳ ದೃಶ್ಯ ಸೆರೆಹಿಡಿಯಲು ಮುಂದಾದ ಟಿವಿ ಕ್ಯಾಮೆರಾಮನ್ಗಳ ಮೇಲೆ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸದ್ಯ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿವಿಧ ಪ್ರಕರಣದ ಆರೋಪಿಗಳಾದ ಮುತ್ಯಾನಟ್ಟಿ ಮೂಲದ ಬಸವರಾಜ ದಡ್ಡಿ, ಬಸವಣ್ಣಿ ನಾಯಕ್, ನವೀನ್ ದಡ್ಡಿ ಹಾಗೂ ಲಕ್ಷ್ಮೀಣ ದಡ್ಡಿ ವಿರುದ್ಧ ಬೆಳಗಾವಿಯ …
Read More »ನದಾಫ್ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ.!
ಬಾಗಲಕೋಟೆ: ಮುಸ್ಲಿಮ್ ಯುವಕನನ್ನು ಪ್ರೀತಿ ಮಾಡುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆಯ ಸೆಕ್ಟರ್ ನಂಬರ್ 48ರಲ್ಲಿ ನಡೆದಿದೆ. ಭೂಮಿಕಾ ತಿಪ್ಪಣ್ಣವರ್ (19) ಆತ್ಮಹತ್ಯೆಗೆ ಶರಣಾದ ಯುವತಿ. ಭೂಮಿಕಾ (Bhumika) ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಟಯರ್ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಭೂಮಿಕಾ ಪೋಷಕರು ನದಾಫ್ಗೆ ಸಾಕಷ್ಟು ಬಾರಿ ಮನೆ ಬಂದು ಮಾತನಾಡಬೇಡ …
Read More »ಡಿಸಿಸಿ ಬ್ಯಾಂಕ್ ನಿರ್ಧಾರಕ್ಕೆ ಶಶಿಕಾಂತ ಗುರೂಜಿ ಕೆಂಗಣ್ಣು: ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಕೋಟಿ ಕೋಟಿ ಸಾಲ ನೀಡಲು ರೈತ ಮುಖಂಡರ ವಿರೋಧ!
ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದ್ದು, ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂಪಾಯಿ ಸಾಲ ನೀಡುತ್ತಿರುವುದು ಖಂಡನೀಯ ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಗಮ ಸಕ್ಕರೆ ಕಾರ್ಖಾನೆಗೆ 27 ಕೋಟಿ ಸಾಲ ಮಂಜೂರು ಮಾಡುವುದಾಗಿ ಡಿಸಿಸಿ ಬ್ಯಾಂಕ್ ಸಭೆಯಲ್ಲಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ನಿರ್ಧಾರ ಕೈಗೊಂಡಿರುವುದನ್ನು ಟೀಕಿಸಿದರು. ಇದೇ ವೇಳೆ ಬೆಳಗಾಂ ಶುಗರ್ಸ್ ಸಂಸ್ಥೆಯೂ 16 ಕೋಟಿ …
Read More »ಬಸವ ಜಯಂತಿ ಉತ್ಸವ ಪ್ರಯುಕ್ತ 19 ರಂದು “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ
ಬೆಳಗಾವಿ: ಬಸವ ಜಯಂತಿ ನಿಮಿತ್ತ ಇದೆ ರವಿವಾರ ದಿನಾಂಕ 19 ರಂದು ಬೃಹತ್ ಬೈಕ್ ರ್ಯಾಲಿಯನ್ನು ಬೆಳಗಾವಿ ಮಹಾನಗರದಲ್ಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ-2026 ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಹೇಳಿದರು. ಪತ್ರಿಕಾ ಪರಿಷತ್ತಿನಲ್ಲಿ ಮಾತನಾಡಿದ ಅವರಿಂದು ಬೆಳಗಿನ 8:00 ಗಂಟೆಗೆ ಶಹಾಪೂರ ಗೋವಾವೇಸ ಬಸವೇಶ್ವರ ಸರ್ಕಲ್ ದಿಂದ ಆರಂಭವಾಗುವ ಈ ರ್ಯಾಲಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬೈಕ್ ಗಳು ಮತ್ತು ಕಾರುಗಳು ಭಾಗಿಯಾಗಲಿವೆ. ಬಸವಣ್ಣನವರು ಸಾರಿದ …
Read More »ಜಗತ್ತಿನ ಹಸಿವು ತಣಿಸುವ ಅನ್ನದಾತನಿಗೆ ಸರ್ಕಾರದ ಅಸಡ್ಡೆ; ಹೋರಾಟಕ್ಕಿಳಿದ ರೈತ ಸಂಘ
ಬಿಸಿಲು ಮಳೆ ಎನ್ನದೇ ತನ್ನ ಜಮೀನಿನಲ್ಲಿ ಶ್ರಮವಹಿಸಿ ಜಗತ್ತಿನ ಹಸಿವು ತಣಿಸುವ ಕಾಯಕ ಅನ್ನದಾತನದ್ದು. ಆದ್ರೆ ಅನ್ನದಾತನಿಗೆ ಅದೇಕೊ ಕಷ್ಟಗಳ ಸರಮಾಲೆ ತಪ್ಪಿದ್ದಲ್ಲಾ. ತನಗೆ ಏನೇ ಬೇಕಾದ್ರೂ ರೈತ ತಾನು ಹೋರಾಟ ಮಾಡಿಯೇ ಪಡೆಯಬೇಕಾಗಿರೋದು ನಮ್ಮ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಮತ್ತೆ ರೈತರ ವಿವಿಧ ಸಮಸ್ಯೆ ಈಡೇರಿಸಲು ರೈತ ಸಂಘದಿಂದ ಅಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್. ಹೌದು…ರೈತರಿಗೆ ಸಕಲ ಸೌಲಭ್ಯಗಳನ್ನು ಒದಗಿಸಲು …
Read More »ಹಾಸನದಲ್ಲಿ ಸಿನಿಮೀಯ ಟ್ವಿಸ್ಟ್ ಪಡೆದ ಪ್ರೇಮಕಥೆ
ಎಂಟು ವರ್ಷಗಳ ಸಂಸಾರ, 7 ವರ್ಷದ ಮಗನನ್ನು ಬಿಟ್ಟು ಪ್ರಿಯಕರನೊಂದಿಗೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡ ವಿವಾಹಿತೆ… ಇದೀಗ ಪಶ್ಚಾತ್ತಾಪದಿಂದ ಪತಿಯ ಬಳಿ ಮರಳಲು ಬೇಡಿಕೆ! ಮುಕುಂದೂರು ಗ್ರಾಮದಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ ಆಸ್ಪತ್ರೆ ಹೆಸರಿನಲ್ಲಿ ಮನೆಯಿಂದ ಹೊರಟ ಮಹಿಳೆ, ಸಾಂತ್ವನ ಕೇಂದ್ರದಿಂದಲೂ ಹೊರಬಂದು ಪ್ರಿಯಕರನೊಂದಿಗೆ ಮದುವೆಯಾಗಿದ್ದಾಳೆ. ಇಷ್ಟೆಲ್ಲ ನಡೆದ ಬಳಿಕವೂ ಪತಿ ದೊಡ್ಡ ಮನಸ್ಸು ತೋರಿಸಿ ಮನೆಗೆ ಕರೆದುಕೊಂಡು ಬಂದರೂ, ಮತ್ತೊಮ್ಮೆ ಪ್ರಿಯಕರನ ಜೊತೆ …
Read More »ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಪ್ರತ್ಯಕ್ಷ..!!
ಆಳಕ್ಕೆ ಗೂಳಿ ಬಿದ್ದಾಗ ಆಳಿಗೊಂದು ಕಲ್ಲು, ಅನ್ನುವಂತೆ, ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದರ್ಶನ್ ಅವರು ಆರೋಪಿ ಅಂತಾದಾಗ, ಈ ಮಾಜಿ ಮ್ಯಾನೇಜರ್ ಹೆಸರು ಕೂಡ ಮುನ್ನೆಲೆಗೆ ಬಂತು. ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ ನನ್ನೂರಿನವರು. ದರ್ಶನ್ ಅವರಿಗೆ ಮ್ಯಾನೇಜರ್ ಆಗೋಕು ಮುಂಚೆ ನಿರ್ಮಾಪಕ. ಯಶ್ ನಟನೆಯ ಮೊದಲಾ ಸಲ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರು. ಬೆಂಗಳೂರಿನ ವಿಜಯ ನಗರದಲ್ಲಿ ಉತ್ತರ ಕರ್ನಾಟಕ ಹೋಟೆಲ್ ನಡೆಸುತ್ತಿದ್ದರು. ಆಮೇಲೆ ದರ್ಶನ್ ಸರ್ ಮ್ಯಾನೇಜರ್ ಆದರು. ದರ್ಶನ್ …
Read More »
Laxmi News 24×7