Breaking News

Laxminews 24x7

ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆ

ಬೆಂಗಳೂರು, ಡಿಸೆಂಬರ್​ 21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್(HK Patil), 2024ರ ಜೂನ್ 30ರವರೆಗೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನೀರಿನ ಕರ ದರ ಇನ್ನು ಮುಂದೆ ವಾರ್ಷಿಕ ಹಣದುಬ್ಬರ …

Read More »

ಕೇರಳದಲ್ಲಿ ಒಂದೇ ದಿನದಲ್ಲಿ ಪತ್ತೆಯಾದವು 300 ಸಕ್ರಿಯ ಕೋವಿಡ್​ ಪ್ರಕರಣ

ನವದೆಹಲಿ/ ಮಂಗಳೂರು: ದೇಶದಲ್ಲಿ ಚಳಿ ಹೆಚ್ಚಿದಂತೆ ಕೋವಿಡ್​​ ಪ್ರಕರಣಗಳ ಏರಿಕೆ ಕಂಡಿದೆ. ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೋವಿಡ್​ ರೂಪಾಂತರ ತಳಿ ಜೆಎನ್​.1 ಪತ್ತೆಯಾದ ಕೇರಳದಲ್ಲಿ ಡಿಸೆಂಬರ್​ 20ರಂದು ಒಟ್ಟು 300 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿದ್ದು, 3 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಇದೀಗ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಆಗಿದೆ. ಕಳೆದ ಮೂರು ವರ್ಷಗಳ …

Read More »

ಹೆಸ್ಕಾಂನಲ್ಲಿ 51 ಕೋಟಿ ರೂ. ವಂಚನೆ: ಮಧ್ಯಂತರ ವರದಿ ಸಲ್ಲಿಕೆ; ಐವರು ಸಿಬ್ಬಂದಿ ಅಮಾನತು…

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ 51 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸ್ಕಾಂನ ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಲೆಕ್ಕಾಧಿಕಾರಿ ಬೆಂಜಮಿನ್ ಮಸ್ಕನರ್ಸ್, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ, ಅಮಾನತುಗೊಂಡವರು. ಅವ್ಯವಹಾರದ ಕುರಿತು ತನಿಖೆ ನೆಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು. ತಂಡ ಮೂರು ವರ್ಷ ತನಿಖೆ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ …

Read More »

ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿ ಪೊಲೀಸರ ವಶಕ್ಕೆ

ಬಾಗಲಕೋಟೆ: ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ​ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ಹೇಳಿದ್ದಿಷ್ಟು: ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ದೆಹಲಿಯಿಂದ ನಾಲ್ಕು ಜನ …

Read More »

ಜನವರಿ 26ರಂದು ಫ್ಯಾನ್ಸ್​ಗಾಗಿ ಏನೋ ಪ್ಲಾನ್​ ಮಾಡ್ತಾರಂತೆ ರಕ್ಷಿತ್​ ಶೆಟ್ಟಿ

ಜನವರಿ 26ರಂದು ‘ಬ್ಯಾಚುಲರ್ ಪಾರ್ಟಿ’ ಚಿತ್ರತಂಡದಿಂದ ಹೊಸ ಅಪ್​ಡೇಟ್​ ಹೊರಬೀಳಲಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋ ಮಾಹಿತಿ ನೀಡಿದೆ. 7 ವರ್ಷಗಳ ಹಿಂದೆ ಕನ್ನಡದಲ್ಲಿ ಬ್ಲಾಕ್​ಬಸ್ಟರ್​ ಹಿಟ್​ ಪಡೆದು, ಇತರೆ ಭಾಷೆಗಳಿಗೂ ಡಬ್​ ಆಗಿ ಮೆಚ್ಚುಗೆ ಪಡೆದ ಸಿನಿಮಾ ‘ಕಿರಿಕ್​ ಪಾರ್ಟಿ’. ಈ ಭರ್ಜರಿ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದೆ. ರಿಷಬ್​ ಶೆಟ್ಟಿ ನಿರ್ದೇಶಿಸಿ, ರಕ್ಷಿತ್​ ಶೆಟ್ಟಿ ನಟಿಸಿ, ನಿರ್ಮಿಸಿರುವ ಆ …

Read More »

ಶಿವಮೊಗ್ಗ: ಟಿಸಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಎಇಇ

ಶಿವಮೊಗ್ಗ: ವಿದ್ಯುತ್ ಗುತ್ತಿಗೆದಾರನಿಗೆ ಟಿಸಿ ನೀಡಲು 20 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಮೆಸ್ಕಾಂನ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ರಮೇಶ್ ಬಂಧಿತ ಅಧಿಕಾರಿ. ವಿದ್ಯುತ್ ಗುತ್ತಿಗೆದಾರ ಪ್ರದೀಪ್ ಎಂಬವರು ಬೆಟ್ಟದಕೊರ್ಲಿ ನಿವಾಸಿಯಾಗಿದ್ದು, ವಿದ್ಯುತ್ ಗುತ್ತಿಗೆ ಕೆಲಸವನ್ನು ಕಳೆದ 6 ವರ್ಷಗಳಿಂದ ಮಾಡುತ್ತಿದ್ದಾರೆ. ಇವರು ಕ್ಲಾಸ್ -1 ಗುತ್ತಿಗೆದಾರರು. ಕಪ್ಪುಗುಡ್ಡೆ ಗ್ರಾಮ …

Read More »

15 ವರ್ಷಗಳ ಹಿಂದೆಯೇ ಆರಂಭಗೊಂಡಿತ್ತು ‘ಸಲಾರ್’ ಪಯಣ: ಇಂಟ್ರೆಸ್ಟಿಂಗ್​ ವಿಚಾರಗಳು

Salaar: ಮುಂದಿನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿರುವ ‘ಸಲಾರ್’ ಸಿನಿಮಾದ ಆಸಕ್ತಿದಾಯಕ ವಿಚಾರಗಳು ಇಲ್ಲಿವೆ. ಬಹುನಿರೀಕ್ಷಿತ ‘ಸಲಾರ್​​’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಸಿನಿಮಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಭಾರಿ ನಿರೀಕ್ಷೆಗಳ ನಡುವೆ ಸಿನಿಮಾ ವಿಶ್ವದಾದ್ಯಂತ ನಾಳೆ ಮುಂಜಾನೆ ಬಿಡುಗಡೆಯಾಗುತ್ತಿದೆ. ಬಿಗ್ ಪ್ರಾಜೆಕ್ಟ್ ಕುರಿತ ಕೆಲವು ಇಂಟ್ರೆಸ್ಟಿಂಗ್​ ವಿಚಾರಗಳನ್ನು ತಿಳಿದುಕೊಳ್ಳೋಣ. 15 ವರ್ಷ ಹಿಂದಿನ ಯೋಚನೆ: ಸಲಾರ್ ಚಿತ್ರಕಥೆಯನ್ನು ಸುಮಾರು 15 ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ …

Read More »

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು/ನವದೆಹಲಿ: ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸಂಸತ್‌ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ …

Read More »

ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ ಒಲಿಂಪಿಕ್​ ಪದಕ ವಿಜೇತೆ ಸಾಕ್ಷಿ ಮಲಿಕ್

ಕ್ರೀಡಾಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಪ್ರಕರಣ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರಣ್​ ಸಿಂಗ್ ಬೆಂಬಲಿತ ಸಂಜಯ್ ಕುಮಾರ್ ಸಿಂಗ್ ಡಬ್ಲ್ಯುಎಫ್​ಐಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ನಿವೃತ್ತಿ ಘೋಷಿಸಿದ್ದಾರೆ.   ನವದೆಹಲಿ: 2016ರರಿಯೋಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಾಕ್ಷಿ ಮಲಿಕ್ ಇಂದು ಕುಸ್ತಿಗೆ ನಿವೃತ್ತಿ ಘೋಷಿಸಿದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್​ಐ) ಮಾಜಿ ಮುಖ್ಯಸ್ಥ …

Read More »

ಯುವನಿಧಿ ಯೋಜನೆ ನೋಂದಣಿಗೆ ಡಿ.26 ರಂದು ಚಾಲನೆ; ಅರ್ಹರು ಯಾರು? ಅರ್ಜಿ ಸಲ್ಲಿಸುವುದೇಗೆ?

ಬೆಂಗಳೂರು: ಕಾಂಗ್ರೆಸ್​ ಘೋಷಿತ ‘ಪಂಚ ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆ ಇದೇ ಡಿಸೆಂಬರ್​ 26ರಂದು ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್​ ಪಾಟೀಲ್​ ತಿಳಿಸಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 …

Read More »