ಬೆಂಗಳೂರು: ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಪ್ರಾಧಿಕಾರದ ಆಯುಕ್ತರಿಗೆ …
Read More »ಪ್ರಯಾಣಿಕರನ್ನು ‘ಪಲ್ಲಕ್ಕಿ’ಯಲ್ಲಿ ಹೊತ್ತು ತಿರುಗಲಿದೆ ಕೆಎಸ್ಆರ್ಟಿಸಿ
ಬೆಂಗಳೂರು: ಪ್ರಯಾಣಿಕರನ್ನು ಅಂಬಾರಿಯಲ್ಲಿ ಹೊತ್ತು ರಾಜ್ಯದ ರಸ್ತೆಗಳಲ್ಲಿ ಸಂಚರಿಸಿದ್ದ ಕೆಎಸ್ಆರ್ಟಿಸಿ ಇದೀಗ ಪಲ್ಲಕ್ಕಿ ಮೂಲಕ ಪ್ರಯಾಣಿಕರನ್ನು ಹೊತ್ತು ಸಂಚರಿಸಲು ಸಿದ್ಧವಾಗಿದೆ. ‘ಸಂತೋಷವು ಪ್ರಯಾಣಿಸುತ್ತಿದೆ’ ಎನ್ನುವ ಟ್ಯಾಗ್ ಲೈನ್ನೊಂದಿಗೆ ಸಾರಿಗೆ ನಿಗಮದ ಪಲ್ಲಕ್ಕಿ ರಸ್ತೆಗಿಳಿಯಲು ಸಜ್ಜಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಸ್ಲೀಪರ್ ಬಸ್ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಹವಾನಿಯಂತ್ರಣ ರಹಿತ ಬಸ್ಗಳಿಗೆ ಪ್ರಯಾಣಿಕರು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅಂಬಾರಿ ಹೆಸರಿನಲ್ಲಿ ನಾನ್ ಎಸಿ ಸ್ಲೀಪರ್ ಸೇವೆ ಒದಗಿಸುತ್ತಿದ್ದ ಕೆಸ್ಆರ್ಟಿಸಿ ಇದೀಗ …
Read More »ಖ್ಯಾತ ಟೈಲರ್ ಉದ್ಯಮಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾಜಿ ಕೆಲಸಗಾರ
ಕಲಬುರಗಿ : ಬಿಸಿಲೂರು ಕಲಬುರಗಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಖ್ಯಾತ ಟೈಲರ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಮಕ್ತಂಪುರ ಬಡಾವಣೆಯಲ್ಲಿ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರೇಶ್ ಹಂಚಿ (44) ಮೃತ ವ್ಯಕ್ತಿ. ಸೂಪರ್ ಮಾರ್ಕೆಟ್ ಪ್ರದೇಶದ ಪುಠಾಣಿ ಗಲ್ಲಿಯಲ್ಲಿ ಬಿಎಸ್ ಟೈಲರ್ ಹೆಸರಿನ ಅಂಗಡಿ ಹೊಂದಿದ್ದಾರೆ. ಟೈಲರಿಂಗ್ ವೃತ್ತಿಯಲ್ಲಿ ಹೆಸರು ಮಾಡಿದ್ದ …
Read More »ಖಾನಾಪುರ ತಾಲೂಕಿನ ಗಣೆಬೈಲ್ ಟೋಲ್ ಬಂದ್ ಮಾಡಿ ಪ್ರತಿಭಟಿಸಿದ ರೈತರು
ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ರಸ್ತೆ ಪೂರ್ಣಗೊಳ್ಳುವ ಮುನ್ನ ಟೋಲ್ ವಸೂಲಿ ಮಾಡುವುದನ್ನು ವಿರೋಧಿಸಿ ಇಂದು ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು, ಆಕ್ರೋಶ ವ್ಯಕ್ತಪಡಿಸಿದರು. ಖಾನಾಪುರ ತಾಲೂಕಿನ ಗಣೆಬೈಲ್ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಖಾನಾಪುರ ತಾಲೂಕಿನ ರೈತರಿಗೆ ಟೋಲ್ ವಿನಾಯಿತಿ ನೀಡಬೇಕು. ರಸ್ತೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಈವರೆಗೆ ನೂರಾರು ರೈತರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ. ತಕ್ಷಣ ಎಲ್ಲರಿಗೂ ಪರಿಹಾರ ನೀಡಬೇಕೆಂದು ಆಗ್ರಹಿಸಿ …
Read More »ಬಸ್ತವಾಡ ಗ್ರಾಮ ಪಂಚಾಯತಿಯಿಗೆ ಗಾಂಧಿ ಗ್ರಾಮ ಪುರಸ್ಕಾರ
ಬೆಂಗಳೂರಿನ ಬ್ಯಾಂಕ್ವೇಟ ಹಾಲ್ ನಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಂದ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಯಿತು 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿಯು ಆಯ್ಕೆ ಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ಯಾಂಕ್ವೇಟ ಹಾಲ್ ನಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರವರು …
Read More »ಸಾವಯವ ಕೃಷಿ ಯುವ ಸಲಹೆಗಾರನಿಗೆ ₹5 ಲಕ್ಷ ಮೌಲ್ಯದ ಕಾರು ಗಿಫ್ಟ್ ನೀಡಿದ ರೈತ
ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಶೇಖರಗೌಡ ಪಾಟೀಲ್ ಎಂಬ ರೈತರೊಬ್ಬರು, ತಮಗೆ ಸಾವಯುವ ಬೇಸಾಯದ ಬಗ್ಗೆ ಸಲಹೆ ಸಹಕಾರ ನೀಡಿದ ಯುವ ಸಲಹೆಗಾರ ಗಂಗಯ್ಯ ಕುಲಕರ್ಣಿ ಎಂಬುವವರಿಗೆ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಶೇಖರಗೌಡ ಪಾಟೀಲ್ 20 ವರ್ಷಗಳ ಹಿಂದೆ ಆಧುನಿಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಅಧಿಕ ಕ್ರೀಮಿನಾಶಕ, ಅಧಿಕ ರಸಾಯನಿಕ ಗೊಬ್ಬರ ಕಳೆನಾಶಕ ಸೇರಿದಂತೆ ವಿವಿಧ ರಸಾಯನಿಕಗಳ ಬಳಕೆಯಿಂದ ಜಮೀನು ಫಲವತ್ತತೆ ಕಳೆದುಕೊಳ್ಳಲಾರಂಭಿಸಿತು. …
Read More »ಅಕ್ರಮವಾಗಿ ಭಾರತದ ಜಲ ಗಡಿ ಪ್ರವೇಶಿಸಿದ ಪಾಕಿಸ್ತಾನಿ ಮೀನುಗಾರನ ಬಂಧನ
ಕಛ್ (ಗುಜರಾತ್): ಕಚ್ನ ಸಮುದ್ರ ಗಡಿಯಲ್ಲಿ ಆಗಾಗ ಕಳ್ಳಸಾಗಾಣಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಪಾಕಿಸ್ತಾನಿ ನುಸುಳುಕೋರರು ಮತ್ತು ಪಾಕಿಸ್ತಾನಿ ಮೀನುಗಾರರು ಕೂಡ ಆಗಾಗ ಭಾರತದ ಯೋಧರ ಬಳಿ ಸಿಕ್ಕಿ ಬೀಳುತ್ತಿದ್ದಾರೆ. ಪ್ರಸ್ತತ ಬಿಎಸ್ಎಫ್ ತಂಡವು ಭಾರತದ ಕಚ್-ಪಾಕಿಸ್ತಾನ ಜಲ ಗಡಿ ಬಳಿಯ ಸರ್ ಕ್ರೀಕ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಬಂಧಿತ ವ್ಯಕ್ತಿಯ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಸರ್ ಕ್ರೀಕ್ ಬಳಿ ಇಂಜಿನ್ ಅಳವಡಿಸಿದ …
Read More »ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದ ಪುತ್ರ ಉಮೇಶ್
ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ …
Read More »ಧೋನಿಯನ್ನು ಬಿಗಿದಪ್ಪಿ ಮುತ್ತಿಕ್ಕಿದ ರಣ್ವೀರ್; ಕ್ಯಾಪ್ಟನ್ ಕೂಲ್ ಜೊತೆ ರಾಮ್ ಚರಣ್
ಎಂ.ಎಸ್.ಧೋನಿ ಅವರೊಂದಿಗೆ ನಟರಾದ ರಣ್ವೀರ್ ಸಿಂಗ್ ಮತ್ತು ರಾಮ್ ಚರಣ್ ಇರುವ ಫೋಟೋಗಳು ವೈರಲ್ ಆಗಿವೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೊತೆ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಗಳು ಕಾಣಿಸಿಕೊಂಡರು. ನಿನ್ನೆ, ಸೌತ್ ಸೂಪರ್ ಸ್ಟಾರ್ ರಾಮ್ ಚರಣ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ನಟ ರಣ್ವೀರ್ ಸಿಂಗ್ ಕೂಡಾ ಅಪರೂಪದ ಫೋಟೋಗಳನ್ನು ಶೇರ್ ಮಾಡಿದ್ದಾರೆ. …
Read More »ಬಿಪಿಎಲ್ ಕಾರ್ಡ್ದಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಹೆಸರು ಸೇರ್ಪಡೆ, ಪರಿಷ್ಕರಣೆಗೆ ಅವಕಾಶ
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡಬಹುದಾಗಿದೆ. ಆದರೆ, ಹೊಸ ಕಾರ್ಡ್ ಪಡೆಯಲು ಮತ್ತಷ್ಟು ಕಾಯಬೇಕಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಒನ್, ಬೆಂಗಳೂರು ಒನ್, …
Read More »
Laxmi News 24×7