Breaking News

Laxminews 24x7

ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು 45 ದಿನದಲ್ಲಿ ಒಂದೇ ಗ್ರಾಮದ 30 ಜನ ಸಾವು;

ಬೆಳಗಾವಿ: ಒಬ್ಬರಲ್ಲ, ಇಬ್ಬರಲ್ಲ, ಒಂದೂವರೆ ತಿಂಗಳಲ್ಲಿ ಬರೋಬ್ಬರಿ 30 ಜನರ ಅಕಾಲಿಕ ಮರಣ. ಈ ದಿಢೀರ್​ ಸಾವುಗಳಿಗೆಕಾರಣವೇ ಗೊತ್ತಿಲ್ಲ. ಹೌದು,ಜಿಲ್ಲೆಯ ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು ಸಂಭವಿಸುತ್ತಿರುವುದರಿಂದ ಊರಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕಳೆದ 45 ದಿನಗಳ ಅಂತರದಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಈ ಸರಣಿ ಸಾವಿನಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮಸ್ಥರು ಏನಂತಾರೆ? : ಈ ಸಾವುಗಳಿಗೆ ಗ್ರಾಮದ ದುರ್ಗಾದೇವಿಗೆ ಪೂಜೆ ಸಲ್ಲಿಸುವಾಗ ದೇವಿ ಮೂರ್ತಿಯು ವಿರೂಪಗೊಂಡಿರುವುದು ಕಾರಣ …

Read More »

ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ ಗುಂಪು ಬೇಟೆಗೆ ಬಂದಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದರು. ಆಗ ಅರಣ್ಯ …

Read More »

ಯಾರಿಗೆಲ್ಲ ಸೆಮಿಫೈನಲ್ ಪ್ರವೇಶಿಸುವ ಅವಕಾಶ? ಹೀಗಿದೆ ಲೆಕ್ಕಾಚಾರ

ಚೆನ್ನೈ: ವಿಶ್ವಕಪ್ ಕ್ರಿಕೆಟ್​ ಪಂದ್ಯಾಟದಲ್ಲಿ ಭಾರತ ಅದ್ಭುತ ಪ್ರದರ್ಶನ ತೋರುತ್ತಿದ್ದು ಈಗಾಗಲೇ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡವೂ ಸೆಮಿಫೈನಲ್​ ಸುತ್ತು ಪ್ರವೇಶಿಸಿದೆ. ಸತತ ಗೆಲುವಿನಿಂದ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಈಗಾಗಲೇ ಏಳು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನೂ ಗೆದ್ದಿರುವ ಟೀಮ್​ ಇಂಡಿಯಾ, ಇಂದು ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈಗಾಗಲೇ ಎರಡೂ ತಂಡಗಳು ಸೆಮಿಫೈನಲ್​ ಪ್ರವೇಶಿಸಿರುವುದರಿಂದ ಈ ಗೆಲುವು ಇತ್ತಂಡಗಳಿಗೂ ಮುಖ್ಯ. ಭಾರತ ಏಳು …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೆಚ್ಚುವರಿ 2,000 ಬಸ್​ಗಳ ವ್ಯವಸ್ಥೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿಯಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 12ರಂದು ನರಕ ಚತುರ್ದಶಿ, ನವೆಂಬರ್ 14ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ವಿಶೇಷ ಬಸ್‌ ಸಂಚಾರದ ವ್ಯವಸ್ಥೆಯಾಗಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ …

Read More »

ಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿ ಬರ್ಬರ ಕೊಲೆ.

ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (37) ಕೊಲೆಯಾದವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪತಿಯಿಂದ ದೂರವಾಗಿದ್ದ ಪ್ರತಿಮಾ ಒಬ್ಬಂಟಿಯಾಗಿ ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್​ವೊಂದರಲ್ಲಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 8 …

Read More »

ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ‌. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು …

Read More »

ಹಣದ ಬೇಡಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ದೂರು.. ಆರೋಪ – ಪ್ರತ್ಯಾರೋಪ

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ನೀಡಬೇಕು. ಇಲ್ಲದಿದ್ದರೆ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಬೆದರಿಸಿದ ಆರೋಪದ ಮೇಲೆ ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಂಟಿಕೇರಿಯ ಅಳಗುಂಡಗಿ ಓಣಿಯ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಮಂಜುನಾಥ ಲೂತಿಮಠ, ರಾಹುಲ್‌, ಅಮಿತ್‌, ಪ್ರವೀಣ, ಬಸವರಾಜ, ಬಾಲು, ಪ್ರಕಾಶ ಮತ್ತು ವಿಜಯ ವಿರುದ್ದ ದೂರು ನೀಡಿದ್ದಾರೆ. ಮಂಜುನಾಥ …

Read More »

ಅಂಗಾಂಗ ಕಸಿಗೆ ಹೆಚ್ಚಿನ ಬೇಡಿಕೆ: ಕೊರತೆ ನಿವಾರಿಸಲು ”ಆರ್ಗನ್ ಡೋನರ್ಸ್ ನೀತಿ” ಜಾರಿಗೆ ಸರಕಾರದ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ಕಸಿಗೆ ಸಾವಿರಾರು ಜನ ರೋಗಿಗಳು ಹಲವಾರು ವರ್ಷಗಳಿಂದ ಕಾಯತೊಡಗಿದ್ದು, ಸಾರ್ವಜನಿಕರಲ್ಲಿ ಅಂಗಾಂಗ ದಾನ ವನ್ನು ಪ್ರೇರೇಪಿಸಲು ”ಆರ್ಗನ್ ಡೋನರ್ಸ್ ನೀತಿ” ಅನುಷ್ಠಾನಕ್ಕೆ ತರಲು ರಾಜ್ಯ ಸರಕಾರ ಸಿದ್ಧತೆ ನಡೆಸಿದ್ದು ಅದಕ್ಕಾಗಿ ರೂಪುರೇಷೆ ಅಂತಿಮಗೊಳಿಸುತ್ತಿದೆ.   ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಕಿಡ್ನಿ, ಲಿವರ್, ಹೃದಯ, ಶ್ವಾಸಕೋಶ, ಸಣ್ಣ ಕರಳು, ಕಾರ್ನಿಯಾ ಸೇರಿದಂತೆ ಜೀವ ರಕ್ಷಕ ಅಂಗಾಂಗಳ ಕಸಿಗಾಗಿ ರಾಜ್ಯದಲ್ಲಿ ಸುಮಾರು 8000 ರೋಗಿಗಳು …

Read More »

ಈ ವಾರದ ರಾಶಿ ಭವಿಷ್ಯ ಹೀಗಿದೆ..

  ಮೇಷ : ವಿವಾಹಿತ ವ್ಯಕ್ತಿಗಳು ಕೌಟುಂಬಿಕ ಬದುಕಿನ ಸಮಸ್ಯೆಗಳಿಂದ ಹೊರಬರಲಿದ್ದು ನಿರಾಳತೆಯನ್ನು ಅನುಭವಿಸಲಿದ್ದಾರೆ. ನೀವು ಮತ್ತು ನಿಮ್ಮ ಕುಟುಂಬದ ನಡುವೆ ಒಂದಷ್ಟು ಅಂತರ ಮತ್ತು ಕೆಲವೊಂದು ತಾತ್ವಿಕ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳಬಹುದು. ಮನೆಗೆ ಸಂಬಂಧಿಸಿದಂತೆ ವೆಚ್ಚಗಳು ಉಂಟಾಗಬಹುದು. ನಿಮ್ಮ ಜವಾಬ್ದಾರಿಗಳು ನಿಮ್ಮ ಗಮನ ಸೆಳೆಯಲಿವೆ. ಇದೇ ವೇಳೆ ನಿಮ್ಮ ಕೆಲಸದಲ್ಲಿ ಸಮನ್ವಯ ಕಾಪಾಡಲು ಯತ್ನಿಸಲಿದ್ದೀರಿ. ಮನೆ ಮತ್ತು ಕಚೇರಿ ಎರಡೂ ಕಡೆಯಲ್ಲಿ ನಿಮ್ಮ ಅಗತ್ಯವಿದೆ. ಇವುಗಳನ್ನು ಚೆನ್ನಾಗಿ ನಿಭಾಯಿಸಿದಾಗಲೇ ಪರಿಸ್ಥಿತಿಯಲ್ಲಿ ಸುಧಾರಣೆ …

Read More »

ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಬರದ ತೀವ್ರತೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೆ ಏಳು ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಶನಿವಾರ ಸರ್ಕಾರ ಘೋಷಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ …

Read More »