Breaking News

Laxminews 24x7

ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ೨೪ ಗಂಟೆ ನೀರು ಸರಬರಾಜು ಹಾಗೂ ಬಿಲ್ಲಿಂಗ್ ಕುರಿತು ಜಾಗೃತಿ ಸಭೆ

ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ೨೪ ಗಂಟೆ ನೀರು ಸರಬರಾಜು ಹಾಗೂ ಬಿಲ್ಲಿಂಗ್ ಕುರಿತು ಜಾಗೃತಿ ಸಭೆ ಬೆಳಗಾವಿಯ ವಾರ್ಡ್ ಸಂಖ್ಯೆ ೩೩ರ ಮಾರ್ಕಂಡೇಯ ನಗರದಲ್ಲಿ ಸಾರ್ವಜನಿಕರಿಗೆ ೨೪ ಗಂಟೆ ಕುಡಿಯುವ ನೀರಿನ ಸಂಪರ್ಕ ಹಾಗೂ ಬಿಲ್ಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡಲು ವಿಶೇಷ ಸಭೆ ಆಯೋಜಿಸಲಾಗಿತ್ತು. ಮಾಜಿ ಉಪಮೇಯರ್ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪ್ರವೀಣ್ ಪಾಟೀಲ್ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಎಲ್ ಆಂಡ್ ಟಿ ಸಂಸ್ಥೆಯ …

Read More »

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಬೆಂಗಳೂರು, ಆ. 6: ಕಾಹೇರ್ (KAHER) ಕುಲಾಧಿಪತಿ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ ಬಿ. ಕೋರೆ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಇತ್ತೀಚೆಗೆ ನಿಧನರಾದ ಅವರ ಧರ್ಮಪತ್ನಿ ಶ್ರೀಮತಿ ಚಿನ್ನಮ್ಮ ದೇವೇಗೌಡ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಚಿನ್ನಮ್ಮ ಅವರ ನಿಧನವು ದೇವೇಗೌಡರ …

Read More »

ಶಿಕ್ಷಕರ ಸವಿನೆನಪಿಗಾಗಿ ಹಳೆ ವಿದ್ಯಾರ್ಥಿಗಳಿಂದ 200 ಸಸಿ ನೆಡುವ ಕಾರ್ಯಕ್ರಮ

ಅಥಣಿ : ಕೇವಲ ರೀಲ್ಸ್ ನಲ್ಲಿ ಪ್ರಕೃತಿ ಪ್ರೇಮ ತೋರಿಸದೆ ಸಸಿ ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ ಉಳಿಸುವ ಕೆಲಸವನ್ನು ಯುವ ಸಮೂಹ ಮಾಡಬೇಕು. ಗ್ರಾಮ ಹಸಿರಾಗಿದ್ದರೆ ಜನರ ಸ್ವಾಸ್ಥ್ಯ ಉತ್ತಮವಾಗಿರುತ್ತದೆ ಎಂದು ನದಿ ಇಂಗಳಗಾಂವ ಗ್ರಾಮದ ಗುರುಲಿಂಗದೇವರ ಮಠದ ಪ.ಪೂ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ನದಿ ಇಂಗಳಗಾಂವ ಗ್ರಾಮದ ಸರಕಾರಿ ಹೈಸ್ಕೂಲ್ ನಲ್ಲಿ‌ ಕಲಿತ 2008 ರ ಬ್ಯಾಚ್ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ …

Read More »

ಹಣ ಬಿದ್ದಿದೆ ಎಂದು ಗಮನ ಬೇರೆಡೆ ಸೆಳೆದು ಸ್ಕೂಟರ್ ಡಿಕ್ಕಿಯಲ್ಲಿಟ್ಟಿದ್ದ 3.40 ಲಕ್ಷ ರೂ. ನಗದು ಕಳ್ಳತನ

ಮೈಸೂರು:ಹಣ ಬಿದ್ದಿದೆ ಎಂದು ಗಮನ ಬೇರೆಡೆ ಸೆಳೆದು ಸ್ಕೂಟರ್ ಡಿಕ್ಕಿಯಲ್ಲಿಟ್ಟಿದ್ದ 3.40 ಲಕ್ಷ ರೂ. ನಗದು ಹಾಗೂ 30 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಹೂಟಗಳ್ಳಿಯ ಶಂಕುತಲಾ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ. ನೂತನವಾಗಿ ಮನೆ ನಿರ್ಮಾಣ ಮಾಡುತ್ತಿದ್ದು, ಅದರ ಕೆಲಸಕ್ಕೆ ಹಣ ಅಗತ್ಯ ಇದ್ದುದ್ದರಿಂದ ಚಿನ್ನಾಭರಣವನ್ನು ಹೂಟಗಳ್ಳಿಯ ಕೆನರಾ ಬ್ಯಾಂಕ್‌ನಲ್ಲಿ ಆ.1ರಂದು ಅಡವಿಟ್ಟು 3.35 ಲಕ್ಷ ರೂ. ಪಡೆದಿದ್ದರು. ಬಳಿಕ ಪುತ್ರ ಬೀರೇಂದ್ರ ಕುಮಾರ್ …

Read More »

ಅಂಬೋಲಿ ಕಣಿವೆಯಲ್ಲಿ ಕಣ್ಮರೆಯಾದ ನಿಪ್ಪಾಣಿ ವೈದ್ಯ: ತೀವ್ರಗೊಂಡ ಶೋಧ ಕಾರ್ಯಾಚರಣೆ

ಚಿಕ್ಕೋಡಿ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬೋಲಿಯ ಮಹಾದೇವಗಢ ಪಾಯಿಂಟ್‌ನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ನಿಪ್ಪಾಣಿ ತಾಲೂಕಿನ ಪ್ರಸಿದ್ಧ ವೈದ್ಯ ಡಾ. ಅಯೂಬ್ ಸಯ್ಯದ್ (೪೬) ಅವರು ಆಳವಾದ ಕಣಿವೆಗೆ ಬಿದ್ದು ಕಣ್ಮರೆಯಾಗಿದ್ದಾರೆ. ನಿಪ್ಪಾಣಿ ತಾಲೂಕಿನ ಜತ್ರಾಟ್ ನಿವಾಸಿಯಾಗಿರುವ ಡಾ. ಅಯೂಬ್ ಸಯ್ಯದ್ ಅವರು ಮಂಗಳವಾರ (ಆಗಸ್ಟ್ ೪) ತಮ್ಮ ಸ್ನೇಹಿತರೊಡನೆ ಅಂಬೋಲಿಗೆ ಪ್ರವಾಸ ಕೈಗೊಂಡಿದ್ದರು. ಸಂಜೆ ಸುಮಾರು ೫:೩೦ರ ಸುಮಾರಿಗೆ ಮಹಾದೇವಗಢ ಪಾಯಿಂಟ್‌ನಲ್ಲಿ ಸ್ನೇಹಿತರೊಂದಿಗೆ …

Read More »

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ…. ಬರ ಜಿಲ್ಲೆಯೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ರೈತರಿಂದ ನೂತನ ಸಚಿವ ಸಂತೋಷ ಲಾಡ್‌ಗೆ ಮನವಿ. ಸಿಎಂ ಡಿಕೆಶಿಯವರ ಕ್ಯಾಬಿನೆಟ‌ನಲ್ಲಿ ಮಂತ್ರಿ ಸ್ಥಾನ ಪಡೆದುಕೊಂಡ ಬಳಿಕ ಮೊದಲ‌ ಬಾರಿಗೆ ಧಾರವಾಡ‌ಗೆ ಸಚಿವ ಸಂತೋಷ ಲಾಡ್ ಅವರು ಭೇಟಿ ನೀಡುತ್ತಿದಂತೆ, ಲಾಡ್ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ. ಹೌದು… ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಇಂದು ಧಾರವಾಡಗೆ ಮೊದಲ ಬಾರಿ ಆಗಮಿಸಿದ …

Read More »

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ.

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆ. ಕಾಂಗ್ರೇಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ. ಹಿರೇಬಾಗೇವಾಡಿ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಪಂಜಿನ ಮೆರವಣಿಗೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ. ರಾಷ್ಟ್ರೀಯ ಹೆದ್ದಾರಿ ತಡೆಯಲಿಕೆ ಹೊರಟಿದ್ದವರನ್ನ ತಡೆದ ಪೊಲೀಸರು. ರಾಜ್ಯದ ಮಹಿಳಾ ಪ್ರಭಾವಿ ನಾಯಕಿಗೆ ಮಂತ್ರಿ ಸ್ಥಾನ …

Read More »

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ.

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುತಗಟ್ಟಿ ಸಮೀಪ ಇಂದು, ಆಗಸ್ಟ್ 5, 2026ರಂದು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದಿದೆ. ಕೆಲವು ದಿನಗಳ ಹಿಂದೆ ಶಿವಾಪುರ, ಹೊಸ ಇದ್ದಲ್ ಹೋಂಡ ಹಾಗೂ ಪರಿಶೆನಟ್ಟಿ ಕ್ರಾಸ್ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದವು. …

Read More »

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ : ಬೆಳಗಾವಿ ನಗರದ ವಡಗಾಂವ್‌ನಲ್ಲಿ ಆಗಸ್ಟ್ 11ರಿಂದ ಆರಂಭವಾಗಲಿರುವ ವಾರ್ಷಿಕ ಮಂಗಾಯಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ, ದೇವಸ್ಥಾನದ ಆವರಣ ಹಾಗೂ ವಡಗಾಂವ್ ವ್ಯಾಪ್ತಿಯಲ್ಲಿ ಪ್ರಾಣಿ ಹಾಗೂ ಪಕ್ಷಿಗಳ ಬಲಿ ನೀಡುವುದನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿಷೇಧಿಸಿದ್ದಾರೆ. ಈ ಆದೇಶವು ಆಗಸ್ಟ್ 11ರಿಂದ ಜಾತ್ರೆ ಮುಕ್ತಾಯಗೊಳ್ಳುವವರೆಗೆ ಜಾರಿಯಲ್ಲಿರಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು …

Read More »

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ!

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ! ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗಿದ ದಿಗಂಬರ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಖಾನಾಪುರದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಖಾನಾಪುರ-ಯಲ್ಲಾಪುರ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಘಟನೆಗೆ ತಹಶೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿ ಕಚೇರಿಗೆ ಮುತ್ತಿಗೆ ಹಾಕಿದರು. ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ …

Read More »