Breaking News

Laxminews 24x7

ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್‌ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ.

ಬೆಳಗಾವಿ: ಸೀನಿಮಿಯ ರೀತಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಆರೋಪಿಯನ್ನು ಯಮಕನಮರಡಿ ಪೊಲೀಸ್‌ ರು ಬಂಧಿಸಿ ಆತನಿಂದ ಸತ್ಯ ಕಕ್ಕಿಸಿದ್ದಾರೆ. ಬೆಳಗಾವಿ ಮಹಾತೇಂಶ ನಗರದ ಸುರೇಶ ಮಾರುತಿ ನಾಯಿಕ (ಸನದಿ ) (37) ಬಂಧಿತ ಆರೋಪಿ. ಯಮಕನಮರಡಿ ವ್ಯಾಪ್ತಿಯಲ್ಲಿರುವ ಮನೆಯ ಬಾಗಿಲ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಪ್ರಕರಣ ದಾಖಲಾಗಿತ್ತು. ಕಳ್ಳತನ ಪ್ರಕರಣದ ಪತ್ತೆಗಾಗಿ ಜಾಡು ಜಾಲಾಡಿದ ಯಮಕನಮರ್ಡಿ ಪೊಲೀಸ್‌ ರು ಆರೋಪಿಯ ಬಂಧಿಸಿ, ಆತನಿಂದ …

Read More »

ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ:ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ ಹಾಗಾಗಿ ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಪಿ.ಎಂ.ಶ್ರೀ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಪೋಷಕರ – ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಬಗ್ಗೆ ಚಿಂತನೆ ಮಾಡದೆ ಶಿಕ್ಷಣಕ್ಕೆ ಮಹತ್ವ ನೀಡದೆ ಹೋದರೆ ದೇಶ ಏಳಿಗೆ ಸಾಧಿಸಲು …

Read More »

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ*

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಮುಂದೆ ಬರಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ ಸಿಐಐ ಸಮ್ಮೇಳನದಲ್ಲಿ ಸಚಿವರು ಭಾಗಿ* *ಬೆಂಗಳೂರು:* ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದೆ ಬರಬೇಕು. ಇದಕ್ಕಾಗಿ ಮಹಿಳಾ ಉದ್ಯಮಿಗಳಿಗೆ ಸಿಐಐ ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯರ ಕಾರ್ಯಕ್ಷೇತ್ರದ ಕುರಿತು ನಡೆದ 4ನೇ …

Read More »

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

*ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ* * *ಭಾರತ – ನೇಪಾಳ‌ ನಡುವಿನ ಪಂದ್ಯ ವೀಕ್ಷಿಸಿದ ಸಚಿವರು* *ಬೆಂಗಳೂರು:* ವಿಶೇಷ ಮಕ್ಕಳು ಪಾಲ್ಗೊಳ್ಳುತ್ತಿರುವ ಅಂಧರ ಕ್ರಿಕೆಟ್ ಟೂರ್ನಿಗೆ ಜಾಗತಿಕವಾಗಿ ಮನ್ನಣೆ ಸಿಗಲಿ ಎಂಬುದೇ ನನ್ನ ಆಶಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ತಿರುಮೇನಹಳ್ಳಿಯ ಸಂಪ್ರಸಿದ್ದಿ …

Read More »

ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ; ಸಭಾಪತಿ ಯು.ಟಿ. ಖಾದರ್

ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ; ಸಭಾಪತಿ ಯು.ಟಿ. ಖಾದರ್ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ಉ. ಕ. ನಡೆಯುತ್ತಿರುವ ಅಧಿವೇಶನಕ್ಕೆ ಎಲ್ಲರೂ ಸಹಕಾರ ನೀಡಿ ಅಧಿವೇಶನವು ಯಶಸ್ವಿಯಾಗಿ ನಡೆಯಲಿದೆ ಸಭಾಪತಿ ಯು.ಟಿ. ಖಾದರ್ ಹೇಳಿಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ …

Read More »

ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ

ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ ಬಿಹಾರದಲ್ಲಿ ಗೆದ್ದು ಬೀಗಿದ ಬಿಜೆಪಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ವಿಜಯೋತ್ಸವ ಮಾಜಿ ಶಾಸಕ ಸಂಜಯ್ ಪಾಟೀಲ್ ಸಂಭ್ರಮ ಪಟಾಕಿ ಸಿಡಿಸಿ – ಸಿಹಿ ಹಂಚಿದ ಬಿಜೆಪಿ ಕಾರ್ಯಕರ್ತರು ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ವಿಜಯೋತ್ಸವವನ್ನು ಆಚರಿಸಿದರು. ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ಇಂದು ಬೆಳಗಾವಿ …

Read More »

ಸಾಲಬಾಧೆ ತಾಳಲಾರದೇ ಬೆಳಗಾವಿ ರೈತ ಆತ್ಮಹತ್ಯೆ: ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ರೈತ ಸಂಘದ ಆಗ್ರಹ

ಬೆಳಗಾವಿ: ಸಾಲಬಾಧೆ ತಾಳಲಾರದೇ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾವಿಗೆ ಖಾಸಗಿ ಸೊಸೈಟಿ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಮನೆ ಮಾಲೀಕನ ಕಳೆದುಕೊಂಡ ಕುಟುಂಬ ಈಗ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ರೈತನ ಸಾವಿಗೆ ನ್ಯಾಯ ಕೊಡಿಸುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ. ಕಡೋಲಿ ಗ್ರಾಮದ ರೈತ ಸಾತೇರಿ ಹೊನ್ನಪ್ಪ ರುಟಕುಟೆ(78) ಆತ್ಮಹತ್ಯೆ ಮಾಡಿಕೊಂಡ ರೈತ. ಅ.31ರಂದು ಮಧ್ಯರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಹಿತ್ತಲಿನಲ್ಲಿ …

Read More »

ಮಂಗಳೂರಿನ ಈ ಶಾಲೆಯಲ್ಲಿದ್ದಾರೆ ಏಳು ಅವಳಿ ಜವಳಿ ಮಕ್ಕಳು!

ಮಂಗಳೂರು: ಶಾಲೆಗಳಲ್ಲಿ ಒಂದೋ ಅಥವಾ ಎರಡು ಜೋಡಿ ಅವಳಿ ಜವಳಿ ಮಕ್ಕಳು ಇರುವುದು ಸಾಮಾನ್ಯ. ಆದರೆ ಮಂಗಳೂರಿನ ಶಾಲೆಯೊಂದರಲ್ಲಿ ಒಂದಲ್ಲ, ಎರಡಲ್ಲ, ಏಳು ಜೋಡಿ ಅವಳಿ ಜವಳಿ ಮಕ್ಕಳಿದ್ದಾರೆ. ಇವರು ಶಾಲೆಯ ಇತರ ವಿದ್ಯಾರ್ಥಿಗಳಿಗೆ, ಶಿಕ್ಷಕರ ಆಕರ್ಷಣೆಗೆ ಪಾತ್ರರಾಗಿದ್ದಾರೆ. ಈ ಏಳು ಅವಳಿ ಜವಳಿ ವಿದ್ಯಾರ್ಥಿಗಳಿರುವುದು ಮಂಗಳೂರಿನ ಹೊರವಲಯದ ವಾಮಂಜೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್​ನಲ್ಲಿ. ಈ ಶಾಲೆಯ ಒಂದನೇ ತರಗತಿಯಲ್ಲಿ ಒಂದು ಜೋಡಿ, …

Read More »

2026ನೇ ಸಾಲಿನಲ್ಲಿ 20 ಸಾರ್ವತ್ರಿಕ ರಜೆ, 21 ಪರಿಮಿತ ರಜೆ ಪಟ್ಟಿಗೆ ಸಚಿವ ಸಂಪುಟ ಸಭೆ ಅಸ್ತು

ಬೆಂಗಳೂರು: ರಾಜ್ಯ ಸರ್ಕಾರ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದೆ.‌ 20 ದಿನಗಳ ಸಾರ್ವತ್ರಿಕ ರಜೆ ಹಾಗೂ 21 ಪರಿಮಿತ ರಜಾ ಪಟ್ಟಿಗೆ ಮಂಜೂರಾತಿ ನೀಡಲಾಗಿದೆ. ಸಾರ್ವತ್ರಿಕ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಮಹಾ ಶಿವರಾತ್ರಿ (15.02.2026), ಮಹರ್ಷಿ ವಾಲ್ಮೀಕಿ ಜಯಂತಿ (25.10.2026), ಕನ್ನಡ ರಾಜ್ಯೋತ್ಸವ (01.11.2026) ಹಾಗೂ ನರಕ ಚತುರ್ದಶಿ (08.11.2026) ಮತ್ತು ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (10.10.2026) …

Read More »

ನಾನು ಎಂದೂ ಕಾಂಗ್ರೆಸ್‌ ಬಿಡುವುದಿಲ್ಲ; ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದೇನೆ: ಕೆ.ಎನ್.‌ರಾಜಣ್ಣ

ತುಮಕೂರು: ನಾನು ಕಾಂಗ್ರೆಸ್‌ ಬಿಟ್ಟುಬಿಡುತ್ತೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಎಂದೂ ಕಾಂಗ್ರೆಸ್‌ ಪಕ್ಷವನ್ನು ಬಿಡುವುದಿಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೇನೆಯೇ ಹೊರತು ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.‌ರಾಜಣ್ಣ ಸ್ಪಷ್ಟಪಡಿಸಿದರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸಾಲ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನವಾದ ಅವಕಾಶ ನೀಡುವಂತಹ ಪಕ್ಷ ಕಾಂಗ್ರೆಸ್‌ ಆಗಿದೆ ಎಂದು ನಾನು …

Read More »