Breaking News

Laxminews 24x7

ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಮಹಿಳೆ ಹೊಟ್ಟೆಯಲ್ಲಿತ್ತು 5 ಕೆ.ಜಿ ಗೆಡ್ಡೆ

ದೊಡ್ಡಬಳ್ಳಾಪುರ: ಹೊಟ್ಟೆನೋವು ಎಂದು 45 ವರ್ಷದ ಮಹಿಳೆಯೊಬ್ಬರು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಆಕೆಯ ಉದರದಲ್ಲಿದ್ದ 5 ಕೆ.ಜಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು. ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಆಕೆ, ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಡಾ.ಅರ್ಚನಾ ಅವರು ಪರೀಕ್ಷೆ ನಡೆಸಿದ್ದು, ಸ್ಕ್ಯಾನಿಂಗ್​ನಲ್ಲಿ ಹೊಟ್ಟೆಯಲ್ಲಿ 5 ಕೆ.ಜಿ ಗಾತ್ರದ ಗೆಡ್ಡೆ ಇರುವುದು …

Read More »

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ವಂಚಿಸಿದ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ: ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ ವಂಚಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಪ್ಪ ಶಿವಪ್ಪ ತೋಟದ ಬಂಧಿತ ಆರೋಪಿ. ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಚಂದ್ರಪ್ಪ ಮೋಸ ಮಾಡುತ್ತಿದ್ದ ಎಂದು ಹಾವೇರಿ ನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದ ಮನೋಜ ಹಾದಿಮನಿ ಎಂಬವರು ದೂರು ನೀಡಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ …

Read More »

ಜೈನ್ ವಿಶ್ವವಿದ್ಯಾಲಯದಲ್ಲಿ ಬಿಆರ್ ಅಂಬೇಡ್ಕರ್​​ರಿಗೆ ಅವಮಾನ: ವಿದ್ಯಾರ್ಥಿಗಳ ಮೇಲಿನ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಮಾರ್ಚ್​​ 01: ಡಾ. ಬಿಆರ್ ಅಂಬೇಡ್ಕರ್ (BR Ambedkar)​ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ವಿಡಂಬನಾತ್ಮಕ ನಾಟಕಕ್ಕೆ ಸಂವಿಧಾನದ ಆರ್ಟಿಕಲ್ 19 ರಕ್ಷಣೆಯಿದೆ. ನಾಟಕದಲ್ಲಿ ದಲಿತ ದೌರ್ಜನ್ಯದ ಉದ್ದೇಶವಿರಲಿಲ್ಲ ಎಂದು ನ್ಯಾ.ಎಸ್.ಆರ್.ಕೃಷ್ಣಕುಮಾರ್​ರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು, ಹೀಗಾಗಿ ಕೇಸ್ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶನಿವಾರ ಆದೇಶ …

Read More »

ಇಬ್ಬರು ಅಂತಾರಾಜ್ಯ ಕಳ್ಳರು ಸೆರೆ

ಬೆಂಗಳೂರು: ಉತ್ತರ ಪ್ರದೇಶದಿಂದ ರೈಲಿನ ಮುಖಾಂತರ ನಗರಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಜೀಂ ಆಲಿ ಹಾಗೂ ಸದ್ದಾಂ ಬಂಧಿತ ಆರೋಪಿಗಳು. ಇವರಿಂದ 186 ಗ್ರಾಂ ಚಿನ್ನಾಭರಣ, ಎರಡು ದ್ವಿಚಕ್ರವಾಹನ ಹಾಗೂ 15 ಸಾವಿರ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ಧಾರೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ದೂರುದಾರರ ಕುಟುಂಬ ಕಳೆದ …

Read More »

ಕೊಪ್ಪಳದಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧವಿದೆ : ಸಚಿವ ಶಿವರಾಜ ತಂಗಡಗಿ

ಕೊಪ್ಪಳ : ಜಿಲ್ಲೆಯಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಸಾವಿರ ಎಕರೆ ಜಮೀನು ಮೀಸಲಿರಿಸಿ ಖಾಸಗಿ ಕಂಪನಿ ಸ್ಥಾಪನೆಗೆ ಮುಂದಾಗಿರುವುದಕ್ಕೆ ಕೊಪ್ಪಳದ ಜನತೆ, ಗವಿಮಠದ ಗವಿಶ್ರೀಗಳು ವಿರೋಧಿಸಿದ್ದಾರೆ. ಅದಕ್ಕೆ ನಮ್ಮದು ವಿರೋಧವಿದೆ. ಈ ಕುರಿತು ಮಾ.4 ರಂದು ಸಿಎಂ ಜೊತೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವುದಾಗಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಆದರೆ ಅವರು ನಮ್ಮ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. …

Read More »

ಟಿಪ್ಪರ್, ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೈಸೂರಿನ ಶ್ರೀಲಕ್ಷ್ಮೀ(20), ಲಿಖಿತಾ, ಮಂಡ್ಯದ ಸುಹಾಸ್, ನಿತಿನ್ ಮತ್ತು ಶ್ರೇಯಸ್ ಮೃತಪಟ್ಟವರೆಂದು ತಿಳಿದುಬಂದಿದೆ. ಮೃತರೆಲ್ಲರೂ ಸ್ನೇಹಿತರಾಗಿದ್ದು, ಮಹಾಶಿವರಾತ್ರಿ ರಥೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ವೀಕೆಂಡ್ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ …

Read More »

ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ. ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಬೇಕೋ ಮಾಡುತ್ತೇವೆ: ಡಿಸಿಎಂ

ಬೆಂಗಳೂರು: ”ಸಿನಿಮಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಚಿತ್ರರಂಗ ಭಾಗವಹಿಸಬೇಕು. ನಾವು ನಿಮ್ಮ ಶೂಟಿಂಗ್‌ಗೆ ಅವಕಾಶ ಕೊಡದಿದ್ರೆ, ನೀವು ಹೇಗೆ ಸಿನಿಮಾ ಮಾಡ್ತೀರಿ?. ನಾವೂ ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ. ಇದು ನನ್ನ ವಾರ್ನಿಂಗ್ ಅಂತಲಾದ್ರೂ ತಿಳಿದುಕೊಳ್ಳಿ, ರಿಕ್ವೆಸ್ಟ್ ಅಂತಲಾದ್ರೂ ತಿಳಿದುಕೊಳ್ಳಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ಈ ಕಾರ್ಯಕ್ರಮ …

Read More »

ಅಣ್ಣನನ್ನು ಸಿಎಂ ಮಾಡಬೇಕೆಂಬ ಆಸೆ ನನಗೆ ಈಗಲೂ ಇದೆ:ಡಿ ಕೆ ಸುರೇಶ್

ಬೆಂಗಳೂರು : ಅಣ್ಣನನ್ನು ಸಿಎಂ ಮಾಡಬೇಕೆಂಬ ಆಸೆ ಇದೆ ಎಂದು ಈಗಲೂ ಹೇಳುತ್ತೇನೆ. ನಾನು ನನ್ನ ಆಸೆ ಮುಚ್ಚಿಟ್ಟಿಲ್ಲ. ಅದಕ್ಕೂ ಕಾಲ ಬರಬೇಕು ಎಂದು ಮಾಜಿ ಸಂಸದ ಡಿ. ಕೆ ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಮಾತನಾಡಿದ ಅವರು, ಈಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಕುಳಿತಿದ್ದಾರೆ. ಅವರನ್ನು ಎಳೆದು ಇವರನ್ನು ಕೂರಿಸಬೇಕು. ಅದು ಹೇಗಾಗುತ್ತದೆ. ಸಿದ್ದರಾಮಯ್ಯ ಅವರು ಆ ಸ್ಥಾನದಲ್ಲಿ ಕುಳಿತಿರುವಾಗ ಅವರ ಗೌರವ, ಘನತೆ, ಅವರ …

Read More »

“ನೀತಿ ಸಮಿತಿಯಲ್ಲೇ ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗಲಾಟೆ ಪ್ರಕರಣ ಪರಿಹಾರ: ಹೊರಟ್ಟಿ

ಬೆಂಗಳೂರು: “ನೀತಿ ಸಮಿತಿಯಲ್ಲೇ ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗಲಾಟೆ ಪ್ರಕರಣ ಪರಿಹಾರವಾಗುವ ವಿಶ್ವಾಸವಿದೆ” ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮಾತನಾಡಿದ ಅವರು, “ಸದನದಲ್ಲಿ ನಡೆದಿದ್ದನ್ನು ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗುತ್ತಿರಲಿಲ್ಲ. ಹೀಗಾಗಿ ಘಟನೆ ಇಷ್ಟು ದೊಡ್ಡದಾಗಿದೆ. ಇದನ್ನು ಎಥಿಕ್ಸ್ ಕಮಿಟಿಗೆ ಕೊಡಲಾಗಿದ್ದು, ವರದಿ ಬರಬೇಕಿದೆ. ಎಥಿಕ್ಸ್ ಕಮಿಟಿಯಲ್ಲಿಯೇ ಶೇ 99ರಷ್ಟು ಸಮಸ್ಯೆ ಪರಿಹಾರವಾಗೋ ವಿಶ್ವಾಸವಿದೆ. ಇಲ್ಲದೇ …

Read More »

ಬಳ್ಳಾರಿಯಲ್ಲಿ ಕೋಳಿಗಳ ಸಾವು 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ?

ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಕಳೆದ ವಾರದಿಂದ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. …

Read More »