ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸರಿ ಸುಮಾರು 10 ತಿಂಗಳು ಬಾಕಿಯಾಗಿದೆ. ಆದರೆ, ಈಗಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟವು ಎರಡು ದಿನಗಳ ಮಹತ್ವದ ಸಭೆ ನಡೆಸಿದೆ. ಮತ್ತೊಂದೆಡೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸಭೆ ಆರಂಭವಾಗಿದೆ. ಕಾಂಗ್ರೆಸ್ 26 ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ತನ್ನ ಬಲ ಪ್ರರ್ದಶನ ಮಾಡಿದೆ. ಬಿಜೆಪಿಯು …
Read More »ಮಗನಿಂದಲೇ ಹತ್ಯೆಯಾದ ವೃದ್ಧ ದಂಪತಿ.
ಬೆಂಗಳೂರು: ಅವರಿಬ್ಬರು ವೃದ್ಧ ದಂಪತಿ. ಪತ್ನಿ ಕೇಂದ್ರ ಸರ್ಕಾರದ ನೌಕರಿ ಮಾಡಿ ನಿವೃತ್ತರಾಗಿದ್ದರು. ಸಂಸಾದರ ಬಂಡಿ ಸಾಗಿಸಲು ವಯಸ್ಸು 61 ಆದರೂ ಪತಿ ಇನ್ನೂ ಕೆಲಸ ಮಾಡುತ್ತಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು. ಅದರಲ್ಲಿ ಓರ್ವ ಉದ್ಯೋಗಸ್ಥನಾಗಿದ್ದರೆ ಇನ್ನೋರ್ವ ಮಗ ಮನೆಯಲ್ಲೇ ಇರುತ್ತಿದ್ದ. ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದರು ಈ ದಂಪತಿ. ಆದ್ರೆ ಪ್ರೀತಿಯಿಂದ ಬೆಳೆಸಿದ್ದ ಕಿರಿಯ ಮಗ ಅಪ್ಪ- ಅಮ್ಮನ ಪ್ರಾಣವನ್ನೇ ತೆಗೆದಿದ್ದಾನೆ. ಹೌದು, ಸಿಲಿಕಾನ್ ಸಿಟಿಯಲ್ಲಿ …
Read More »ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಮಧ್ಯಂತರ ಜಾಮೀನು ಮಂಜೂರು
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ವಿನೋದ್ ತೋಮರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ. ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮಂಜೂರಿಗೆ ಮನವಿ ಮಾಡಿದರು. ಈ ಸಾಮಾನ್ಯ ಜಾಮೀನು ವಿಚಾರಣೆಯನ್ನು ಜುಲೈ 20ರಂದು ನಡೆಯಲಿದೆ. ಮುಂದಿನ …
Read More »ಬೆಂಗಳೂರಿನ ಸಭೆ ಇದು ಭ್ರಷ್ಟರ ಸಭೆ: ಮೋದಿ
ನವದೆಹಲಿ : ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »ವಿಪಕ್ಷಗಳ ಸಭೆಯಲ್ಲಿ ಮಹಾಮೈತ್ರಿ ನಾಮಕರಣಕ್ಕೆ ನಾಲ್ಕು ಹೆಸರುಗಳ ಪ್ರಸ್ತಾವನೆ
ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »ಮಹಾಘಟಬಂಧನ್ ಸಭೆ: ಹೋಟೆಲ್ ಸುತ್ತ ರಾರಾಜಿಸುತ್ತಿವೆ ರಾಷ್ಟ್ರೀಯ ನಾಯಕರ ಪೋಸ್ಟರ್ಸ್
ಬೆಂಗಳೂರು : ಮಹಾಘಟಬಂಧನ್ ನಾಯಕರ ಸಭೆ ನಡೆಯುತ್ತಿರುವ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ಸುತ್ತಮುತ್ತ ರಾಷ್ಟ್ರೀಯ ನಾಯಕರ ಪೋಸ್ಟರ್ಗಳು ರಾರಾಜಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮೇರೆಗೆ ಎರಡನೇ ಸಭೆ ನಗರದ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ
ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದಿದ್ದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು, ಸ್ಮಗ್ಲರ್ಸ್ ಮೊದಲೇ …
Read More »ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿತು. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಈ ಬಿಲ್ಅನ್ನು ತರಾತುರಿಯಲ್ಲಿ ತಂದಿಲ್ಲ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ …
Read More »”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: C.M.
ಬೆಂಗಳೂರು: ”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲೇ ಇಲ್ಲ. …
Read More »ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ …
Read More »
Laxmi News 24×7