ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು …
Read More »ಗೋವನ್ನು ರಾಷ್ಟ್ರೀಯ ಪ್ರಾಣಿ ಅಂತ ಘೋಷಿಸಿ – ಕೇಂದ್ರಕ್ಕೆ ಬಾಬರಿ ಪ್ರಕರಣದ ವಾದಿ ಇಕ್ಬಾಲ್ ಅನ್ಸಾರಿ ಮನವಿ
ಲಕ್ನೋ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಪ್ರಮುಖ ಹಾಗೂ ಹಿರಿಯ ಮುಸ್ಲಿಂ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಮನವಿ ಮಾಡಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರವು ಗೋವಿಗೆ ರಾಷ್ಟ್ರೀಯ ಸ್ಥಾನಮಾನ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಮುಸ್ಲಿಮರು ಗೋವುಗಳನ್ನು ಗೌರವಿಸಬೇಕು, ಅವುಗಳ ಗೋಹತ್ಯೆಯನ್ನು ನಿಲ್ಲಿಸಬೇಕು. ಏಕೆಂದ್ರೆ, ಗೋಹತ್ಯೆಯ ವಿಚಾರವನ್ನೇ ಮುಂದಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸುವ ಹಾಗೂ ಸಮುದಾಯವನ್ನು …
Read More »ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಆರೆಂಜ್ ಅಲರ್ಟ್ ಘೋಷಿಸಿರುವ ರಾಜ್ಯ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ಹಾಗೂ ಬೆಂಗಳೂರು ಗ್ರಾಮಾಂತರಕ್ಕೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಿನಲ್ಲಿ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. …
Read More »ವಾಹನ ಪ್ರಿಯರಿಗೆ ಶಾಕ್| ಜೂನ್ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ 30 ಸಾವಿರ ರೂ.ವರೆಗೆ ಏರಿಕೆ!
ನವದೆಹಲಿ: ಭಾರತದ ಪ್ರಮುಖ ಮತ್ತು ಅತ್ಯಂತ ಜನಪ್ರಿಯ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿತನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ಜೂನ್ ತಿಂಗಳಿನಿಂದ ಅನ್ವಯವಾಗುವಂತೆ ತನ್ನೆಲ್ಲಾ ಕಾರುಗಳ ಮಾದರಿಗಳ ಬೆಲೆಯನ್ನು 30 ಸಾವಿರ ರೂ. ವರೆಗೆ ಹೆಚ್ಚಿಸುವುದಾಗಿ ಸಂಸ್ಥೆಯು ಅಧಿಕೃತವಾಗಿ ಪ್ರಕಟಿಸಿದೆ. ವಾಹನ ತಯಾರಿಕೆಗೆ ಬಳಸಲಾಗುವ ಕಚ್ಚಾ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾರುತಿ ಸುಜುಕಿ ಸಂಸ್ಥೆಯು ಮುಂಬೈನ ರಾಷ್ಟ್ರೀಯ ಷೇರು …
Read More »ಬೆಳಗಾವಿ–ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ
ಬೆಳಗಾವಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 17074 ಬೆಳಗಾವಿ–ಸಿಕಂದರಾಬಾದ್ ವಾರಾಂತ್ಯ ಎಕ್ಸ್ಪ್ರೆಸ್ ರೈಲಿಗೆ ಸೇವೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ ಅವರು, ಈ ಹೊಸ ರೈಲು ಸೇವೆಯಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಲಿದ್ದು, ಪರಸ್ಪರ ಆರ್ಥಿಕ ಬಲವರ್ಧನೆಗೂ ಸಹಕಾರಿಯಾಗುವುದರೊಂದಿಗೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು …
Read More »ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ಪಿರೀಟ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ
ಬೆಳಗಾವಿ: ಟ್ಯಾಂಕರ್ ನಲ್ಲಿ ಅಕ್ರಮವಾಗಿ ಸ್ವೀರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ವಶಕ್ಕೆ ಪಡೆಯಲಾಗಿದೆ. ಟ್ಯಾಂಕರ್ ನಲ್ಲಿ 14,000.ಲೀ ಸ್ವೀರಿಟ್ ಅಕ್ರಮವಾಗಿ ಮಾರಾಟಕ್ಕಾಗಿ ಸಾಗಾಣಿಕೆ ಮಾಡಲಾಗುತಿತ್ತು. ಟ್ಯಾಂಕರ್ ಚಾಲಕ ಸಿದ್ದರಾಜು ಪುಟ್ಟಸ್ವಾಮಿ ಶೆಟ್ಟಿ (47) ವಿರುದ್ಧ ಬಿಎನ್ಎಸ್ಎಸ್ ಕಾಯ್ದೆ 2023ರ ಕಲಂ 35(3)ರನ್ವಯ ಮುಂದಿನ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ …
Read More »ಎಲ್ ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: 15 ಸಾವಿರ ಶಿಕ್ಷಕರ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: • ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. • ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 …
Read More »ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಗೆ ನಮ್ಮ ಸಹಮತ ಇದೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಯಾರದೇ ಅಪ್ಪಣೆಯ ಅವಶ್ಯಕತೆಯಿಲ್ಲ. ನಮ್ಮ ನಾಡಿನಲ್ಲಿ ” ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಗೊತ್ತುವಳಿ ಪಾಸು ಮಾಡಬೇಕೆಂಬ ಕನ್ನಡ ಸಂಘಟನೆಗಳ ಒತ್ತಾಯಕ್ಕೆ ಸಹಮತವಿದೆ. ಈ ಕುರಿತು ಚರ್ಚಿಸಲು ಶೀಘ್ರವೇ ಮಹಾಪೌರರು, ಉಪಮಾಹಾಪೌರರು ಮತ್ತು ಕನ್ನಡ ಸಂಘಟನೆಗಳ ಸಭೆ ಕರೆಯುವುದಾಗಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಮಂಗಳವಾರ ಸಂಜೆ ಗೋಕಾಕ ನಗರದಲ್ಲಿ ಜಯಕರ್ನಾಟಕ …
Read More »ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಮಾರಕ: ಡಾ.ಕರ್ನಲ್ ದಯಾನಂದ
ಬೆಳಗಾವಿ: ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆಯನ್ನುಂಟು ಮಾಡುವ ನಿಧಾನ ಕೊಲೆಗಾರನಾಗಿದ್ದು, ಹೃದಯ, ಮೆದುಳು, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿನ ಜನರು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಜನರು ಚಿಕಿತ್ಸೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದವರು ತಮಗೆ ರಕ್ತದೊತ್ತಡ ಇದೆ ಎಂಬುದನ್ನೇ ಅರಿತುಕೊಂಡಿಲ್ಲ ಎಂದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ …
Read More »ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ …
Read More »
Laxmi News 24×7