ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ಮೃತರನ್ನು ಸಂಗನಬಸವ (36), ರೇಖಾ (29), ಅಗಸ್ತ್ಯ (7) ಹಾಗೂ ಭೀಮಾಶಂಕರ್ (26) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಖಾಸಗಿ ಬ್ಯಾಂಕ್ ನೌಕರರಾಗಿರುವ …
Read More »ಭಾರತೀಯ ಮನೋವೈದ್ಯರ ಸಂಘದ ರಾಜ್ಯ ಶಾಖೆ ವಾರ್ಷಿಕ ಸಮ್ಮೇಳನದಲ್ಲಿ ಇಂದು ಎ ಎಸ್ ಕಿರಣ್ ಕುಮಾರ್ ಅವರಿಗೆ ಡಾ. ಆರ್ ಎಲ್ ಕಪೂರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಾಗಲಕೋಟೆ: ಇಸ್ರೋದ ಮಾಜಿ ಅಧ್ಯಕ್ಷ ಪದ್ಮಶ್ರೀ ಪುರಸ್ಕೃತ ಪ್ರೊ. ಎ ಎಸ್ ಕಿರಣ್ ಕುಮಾರ್ ಅವರಿಗೆ ಶನಿವಾರ ಡಾ. ಆರ್ ಎಲ್ ಕಪೂರ್ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಎಸ್ ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಭಾರತೀಯ ಮನೋವೈದ್ಯರ ಸಂಘದ ರಾಜ್ಯ ಶಾಖೆ 33ನೇ ವಾರ್ಷಿಕ ಸಮ್ಮೇಳನದಲ್ಲಿ, ಡಾ. ಆರ್ …
Read More »ಹೆರಿಗೆಗೆಂದು ತವರಿಗೆ ಬಂದ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರ ಅತ್ಯಾಚಾರ
(ಮಹಾರಾಷ್ಟ್ರ): ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಅತ್ಯಂತ ನೀಚ ಹಾಗೂ ಹೀನ ಕೃತ್ಯವೊಂದು ವರದಿಯಾಗಿದೆ. ಹೆರಿಗೆಗೆಂದು ತವರಿಗೆ ಬಂದ ಏಳು ತಿಂಗಳ ಗರ್ಭಿಣಿ ಸಹೋದರಿ ಮೇಲೆ ಆಕೆಯ ಇಬ್ಬರು ಸಹೋದರರು ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇಲ್ಲಿನ ಗಡ್ಚಿರೋಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂತ್ರಸ್ತೆ ಕೆಲವು ದಿನಗಳ ಹಿಂದೆ ಹೆರಿಗೆಗಾಗಿ ತನ್ನ ಪೋಷಕರ ಮನೆಗೆ ಬಂದಿದ್ದಳು. ಆಗಸ್ಟ್ 10ರಂದು …
Read More »3 ಮಂದಿ ವಿರುದ್ಧ ದೂರು ದಾಖಲು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಬೆಳಗಾವಿ: ಆ ಕುಟುಂಬ ಬದುಕು ಕಟ್ಟಿಕೊಳ್ಳಲು ತಮ್ಮ ಹುಟ್ಟೂರು ಬಿಟ್ಟು ಬೆಳಗಾವಿಗೆ ವಲಸೆ ಬಂದಿತ್ತು. ಪ್ರಾಮಾಣಿಕವಾಗಿ ಕಷ್ಟ ಪಟ್ಟು ದುಡಿಯುತ್ತಿದ್ದವರಿಗೆ ಆ ದೇವರು ಮಾತ್ರ ಕೈ ಹಿಡಿಯಲಿಲ್ಲ. ಹೌದು, ವಿಧಿಯಾಟಕ್ಕೆ ಮೂರು ಅಮಾಯಕ ಜೀವಗಳು ಬಲಿಯಾಗಿವೆ. ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಶಾಹು ನಗರದ 7ನೇ ಕ್ರಾಸ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ಅವಘಡದಿಂದ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ಈರಪ್ಪ …
Read More »ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ, ಲೋಕಸಭೆಗೆ ಸ್ಪರ್ಧಿಸಲ್ಲ: ಬಸವರಾಜ ರಾಯರಡ್ಡಿ
ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …
Read More »ಶಾರುಖ್ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ
ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಪುತ್ರಿ ಸುಹಾನಾ ಖಾನ್ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು. ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ …
Read More »ಏಳು ವರ್ಷದ ಬಾಲಕಿ ಮೇಲೆ ತಂದೆ ಮಗನಿಂದ ಅತ್ಯಾಚಾರ
ಹೈದರಾಬಾದ್, ತೆಲಂಗಾಣ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿತ್ಯ ಎಲ್ಲಾದರೂ ಒಂದು ಕಡೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಪ್ರಕರಣಗಳ ನಡೆಯುತ್ತಿರುವುದರ ಬಗ್ಗೆ ಬೆಳಕಿಗೆ ಬರುತ್ತಿವೆ. ಅದರಂತೆ ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ತಂದೆ ಮತ್ತು ಮಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ನಗರಕ್ಕೆ ವಲಸೆ ಬಂದಿದ್ದ ಕುಟುಂಬ: ಬಾಲಕಿಗೆ ಮೊಬೈಲ್ ಕೊಡಿಸುವುದಾಗಿ ಆಸೆ ತೋರಿಸಿ ತಂದೆ ಮತ್ತು ಮಗ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ …
Read More »ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್ವುಡ್ ನಿರ್ಮಾಪಕನ ಬಂಧನ
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್ …
Read More »ಗುತ್ತಿಗೆದಾರರ ಬಿಲ್ ಬಾಕಿ – ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ: ಸಿಎಂ
ಮೈಸೂರು: ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ರಾಜ್ಯ ಮಟ್ಟದ ವಕೀಲರ ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನನ್ನ ಹುಟ್ಟುಹಬ್ಬ ಆಗಸ್ಟ್ 3, ಆಗಸ್ಟ್ 12 ಎಂಬ ಎರಡು ದಿನಾಂಕಗಳು ಕೂಡ ತಪ್ಪು. ಒಂದನ್ನು ನಮ್ಮ ಮೇಷ್ಟ್ರು ಬರೆಸಿದ್ದರು, ಮತ್ತೊಂದನ್ನು …
Read More »ಬಿಬಿಎಂಪಿ ಅಗ್ನಿ ದುರಂತ.. ಇಬ್ಬರು ಸಿಬ್ಬಂದಿ ವಿಚಾರಣೆ: ಡಿಸಿಪಿ ಶ್ರೀನಿವಾಸ್ ಗೌಡ
ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ …
Read More »
Laxmi News 24×7