ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. 2023-24 ಸಾಲಿನ ಹೊಸ ಬಜೆಟ್ಗೆ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಈ ಬಾರಿ ಬಜೆಟ್ನಲ್ಲಿ ಹೆಚ್ಚಿನ ಗ್ಯಾರಂಟಿ ಆದಾಯ ಸಂಗ್ರಹಿಸುವತ್ತ ಚಿತ್ತ ನೆಟ್ಟಿದ್ದಾರೆ. ಅಷ್ಟಕ್ಕೂ ಕಳೆದ ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ. ಬಿಜೆಪಿಯನ್ನು ಸೋಲಿಸಿ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಸರ್ಕಾರ …
Read More »ಬಸ್ ಏರುವಾಗ ಬಾಲಕಿ ಜಾರಿ ಬಿದ್ದು ಗಾಯ
ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ …
Read More »ಆತ್ಮಹತ್ಯೆ ಮಾಡಿಕೊಂಡ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ.
ಗದಗ : ಗದಗ (Gadag) ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸರ್ಕಾರಿ ನೌಕರ ಆತ್ಮಹತ್ಯೆಗೆ (Suicide) ಶರಣಾದ ಘಟನೆ ನಡೆದಿದೆ. ಕುಮಾರಸ್ವಾಮಿ ಎಂಬುವವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸೇವೆ ಸಲ್ಲಿಸುತ್ತಿದ್ದಾರೆ. ಜೂನ್ 16 ರಂದು ಗದಗ ಆರೋಗ್ಯ ಇಲಾಖೆ ಮೀಟಿಂಗ್ಗೆ ಹೋಗಿ ನಾಪತ್ತೆಯಾಗಿದ್ದ ಕುಮಾರಸ್ವಾಮಿ, ನಿನ್ನೆ (ಜೂನ್ 18) ರಾತ್ರಿ ನಿಡಗುಂದಿ …
Read More »ನೇಣಿಗೆ ಶರಣಾದ ಸವಿತಾ ನಾಯ್ಕರ್
ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ. ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ …
Read More »ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕಾಂಗ್ರೆಸ್ ನಾಯಕರುಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಆರೋಪದಡಿ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ ಸೆಲ್) ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಯನಿಮೇಟೆಡ್ ವೀಡಿಯೋ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಿ, ರಾಹುಲ್ ಗಾಂಧಿಯವರ ವಿರುದ್ದ ವಿಡಿಯೋ ಹರಿಬಿಟ್ಟ ಬಗ್ಗೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ …
Read More »ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …
Read More »ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ …
Read More »ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ BJPಗಿದೆ: ಸಂತೋಷ ಲಾಡ್,
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ. ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ..?ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು…? ನಾವು ನೀಡಿದ ಕಾರ್ಯಕ್ರಮ ಆಗಬಾರದು …
Read More »ಮುರುಘಾ ಶರಣರ ಜಾರ್ಮಿನು ಅರ್ಜಿಯನ್ನು ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ಗೆ ಹೈಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ರೋಸ್ಟರ್ ಪ್ರಕಾರ ನಿಗದಿ ಮಾಡುವಂತೆ ಹೈಕೋರ್ಟ್ ಪೀಠ ರಿಜಿಸ್ಟ್ರಾರ್ ಜನರಲ್ಗೆ ಸೂಚನೆ ನೀಡಿದೆ. ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ, ರೋಸ್ಟರ್ ಪ್ರಕಾರ ಅರ್ಜಿಯ ವಿಚಾರಣೆ ನಿಗದಿ …
Read More »ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.
ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸಾಧನೆ ಮೆರೆದ ಪುಟ್ಟ …
Read More »
Laxmi News 24×7