Breaking News
Home / Laxminews 24x7 (page 1890)

Laxminews 24x7

ವಿಜಯಪುರದಲ್ಲಿ ಲಘು ಭೂಕಂಪ : ಭಯಪಡುವ ಅಗತ್ಯವಿಲ್ಲ

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯ ಲಘು ಭೂಕಂಪನ ನಡೆದಿರುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಬಸವನ ಬಾಗೇವಾಡಿ ತಾಲ್ಲೂಕಿನ ಮಸೂತಿ ಗ್ರಾಮ ಪಂಚಾಯಿತಿಯ 2.5 ಕಿಮೀ ದೂರದಲ್ಲಿ 1 ಗಂಟೆ 47 ನಿಮಿಷ 06 ಸೆಕೆಂಡ್ ಗೆ ಸರಿಯಾಗಿ ಭೂಕಂಪ ಸಂಭವಿಸಿದೆ ಎಂದು ಕೆಎಸ್‌ಎನ್‌ಡಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ. ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ. ಭೂಕಂಪದ ತೀವ್ರತೆಯು …

Read More »

ಬಿಜೆಪಿಯನ್ನು ‘ತುಕ್ಡೆ-ತುಕ್ಡೆ’ ಮಾಡುತ್ತೇನೆ.: ಕನ್ಹಯ್ಯಾ ಕುಮಾರ್

ನವದೆಹಲಿ: ಸಿಪಿಎಂ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯಾ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ “ನಾನು ಬಿಜೆಪಿಯನ್ನು ‘ತುಕ್ಡೆ-ತುಕ್ಡೆ’ ಮಾಡುತ್ತೇನೆ” ಎಂದು ಹೇಳಿದ್ದಾರೆ. ‘ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ದೃಢವಾಗಿ ನಂಬಿದ್ದೇನೆ. ಆ ಪಕ್ಷದ ಸೋಲನ್ನು ನಾನು ನೋಡುತ್ತೇನೆ. ಬಿಜೆಪಿ ನನ್ನನ್ನು ‘ತುಕ್ಡೆ-ತುಕ್ಡೆ ಗ್ಯಾಂಗ್’ ಎಂದು ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ‘ತುಕ್ಡೆ-ತುಕ್ಡೆ’, ಹಾಗೂ …

Read More »

ಹಾನಗಲ್ ಉಪಚುನಾವಣೆ: ರೇಸ್​ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್​ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್​ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …

Read More »

ರಾನು ಮಂಡಲ್​ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್​ ಮಾಡುತ್ತಿರುವ ನೆಟ್ಟಿಗರು

ಯೂಟ್ಯೂಬ್​, ಇನ್​ಸ್ಟಾಗ್ರಾಮ್​ ಮತ್ತು ಇತರೆ ಸೋಶಿಯಲ್​ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್​ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …

Read More »

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್‌ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸ್‌ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …

Read More »

ಅಜಯ್ ಸಿಂಗ್ ಬರಹ: ದೇಶ ವಿಭಜನೆ ನಿಲ್ಲಿಸಲು ಗಾಂಧಿ ವಿಫಲವಾದಾಗ

ಹಿಂದಿನ ಸಂಗತಿಗಳಿಂದ ಆರಂಭ ಮಾಡುವುದಾದರೆ ರಾಷ್ಟ್ರಪತಿ ಭವನವು ಭಾರತದ ವಿಭಜನೆ ಮತ್ತು ರಾಷ್ಟ್ರದ ಮುಂದಿನ ಪ್ರಯಾಣಕ್ಕೆ ಒಂದು ವಿಶಿಷ್ಟವಾದ ಐತಿಹಾಸಿಕ ಸನ್ನಿವೇಶವನ್ನು ಹೊಂದಿಸುತ್ತದೆ. ವಿಪರ್ಯಾಸವೆಂದರೆ, 1931 ರಲ್ಲಿ ವೈಸರಾಯ್ ಹೌಸ್ ಆಗಿ ಇದರ ಉದ್ಘಾಟನೆಯು ದುಂಡು ಮೇಜಿನ ಸಮ್ಮೇಳನಗಳೊಂದಿಗೆ ಕಾಕತಾಳೀಯ ಎಂಬಂತೆ ನಡೆಯಿತು. 1935 ರ ಭಾರತ ಸರ್ಕಾರದ ಕಾಯ್ದೆಯ ಮೂಲಕ ನಡೆಸಿದ ಅಧಿಕಾರ ವಿಕೇಂದ್ರೀಕರಣದ ಆಧಾರವಾಗಿರುವ ಸಮ್ಮೇಳನವಾಗಿತ್ತು. ಭವ್ಯವಾದ ಕಟ್ಟಡ ಮತ್ತು ಅದರ ಸುತ್ತಲಿನ ಇತರ ರಚನೆಗಳು – …

Read More »

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …

Read More »

ಇಂದಿನಿಂದ ಪಬ್-ಕ್ಲಬ್‍, ಚಿತ್ರಮಂದಿರ ಫುಲ್ ಓಪನ್..!

ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್‍ಲಾಕ್‍ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ ನೀಡಿತ್ತು. ಹೀಗಾಗಿ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್‍ಗಳು ಸೇರಿದಂತೆ ಎಲ್ಲದಕ್ಕೂ ಸಂಪೂರ್ಣ ಅನುಮತಿ ದೊರೆಯಲಿದೆ. ಶಾಲಾ-ಕಾಲೇಜುಗಳು ಶೇ.100ರಷ್ಟು ಹಾಜರಾತಿಗೆ ಅನುಮತಿ ಸಿಕ್ಕಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಗಳು ಸಂಪೂರ್ಣವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಅನ್‍ಲಾಕ್ …

Read More »

“ಕೊರೋನಾ ಬಂದ ಮೇಲೆ ಸಿದ್ದರಾಮಯ್ಯನವರ ತಲೆ ಕೆಟ್ಟಿರಬಹುದು” : ಸಚಿವ ಎಸ್.ಟಿ.ಎಸ್

ಮೈಸೂರು, ಅ.1- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಗೊತ್ತಾಗುತ್ತಿಲ್ಲ. ಅವರಿಗೆ ತಾಲಿಬಾನ್ ಗೊತ್ತಿಲ್ಲ, ಬಿಜೆಪಿ ಗೊತ್ತಿಲ್ಲ. ಯಾವುದಕ್ಕೂ ಯಾವ ಸಂಬಂಧವೂ ಇಲ್ಲದೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರೂ ಆರ್.ಎಸ್.ಎಸ್ ಶಾಖೆಗೆ ಬರಲಿ. ಅವರು ಶಾಖೆಗೆ ಬರುವುದಾದರೆ ನಾವೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇವೆ. …

Read More »