ಚೆನ್ನೈ: ಚುನಾವಣಾ ಫಲಿತಾಂಶದ ಬಳಿಕ ಯಾವ ಪಕ್ಷ ಸರ್ಕಾರವನ್ನ ರಚಿಸುತ್ತೇವೆ ಎಂದು ಮುಂದೆ ಬರುತ್ತದೆಯೋ ಅವರು ಬಹುಮತ ಇದೆ ಎನ್ನುವುದನ್ನು ನನಗೆ ಮನವರಿಕೆ ಮಾಡಬೇಕು. ಈಗಲೂ ಇದಕ್ಕಿಂತ ಹೆಚ್ಚು ನಾನು ಏನು ಕೇಳಿಲ್ಲ ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದ್ದಾರೆ. ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಪಕ್ಷ ಸರ್ಕಾರ ರಚಿಸಲು ಬಂದಾಗ ಅವರು ಬಹುಮತ ಇರುವ ಬಗ್ಗೆ ಖಾತರಿಪಡಿಸಬೇಕು. ನಾನು ತಲೆ ಎಣಿಕೆಯನ್ನು ಕೇಳುತ್ತಿಲ್ಲ. ಅದು …
Read More »ನಾಪತ್ತೆಯಾಗಿದ್ದ ಮಗು 12 ಗಂಟೆ ಬಳಿಕ ಹಳ್ಳದಲ್ಲಿ ಪತ್ತೆ – ರಾತ್ರಿಯಿಡಿ ಮಳೆ ಸುರಿದ್ರೂ ಗ್ರೇಟ್ ಎಸ್ಕೇಪ್
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಎಸ್ಟೇಟ್ ಬಳಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು 12 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ಒಂದೂವರೆ ವರ್ಷದ ಶಿವಂ ಮಳೆ ಮಧ್ಯೆ 12 ಗಂಟೆಗಳ ಕಾಲ ಹಳ್ಳದಲ್ಲಿ ಕೂತು ಬಚಾವ್ ಆದ ಮಗು. ಕಳೆದ ವಾರ ಮಧ್ಯಪ್ರದೇಶದಿಂದ ಕೆಲಸಕ್ಕೆಂದು ಬಂದಿದ್ದ ಕುಟುಂಬ, ಮಗುವನ್ನ ನೋಡಿಕೊಳ್ಳಲು ಮಹಿಳೆಯೊಬ್ಬರ ಜೊತೆಗೆ ಬಿಟ್ಟು ಹೋಗಿದ್ದರು. ಕೂಲಿ ಕಾರ್ಮಿಕರ ಐದು ಮಕ್ಕಳನ್ನು …
Read More »ವಿಜಯ್ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: ಹೆಚ್ಡಿಕೆ
ಹಾಸನ: ತಮಿಳುನಾಡಿನ ಬಜೆಟ್ ವರ್ಷಕ್ಕೆ 3.40 ಲಕ್ಷ ಕೋಟಿ ಇದೆ. ಆದರೆ, ವಿಜಯ್ ಉಚಿತ ಗ್ಯಾರಂಟಿಗಳನ್ನು ನೀಡಲು 6 ರಿಂದ 7 ಲಕ್ಷ ಕೋಟಿ ಬೇಕು. ಅದ್ಯಾವ ರೀತಿ ಹಣ ಹೊಂದಿಸುತ್ತಾರೆ ಕಾದು ನೋಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು. ಹಾಸನದ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಒಂದು ತಿಂಗಳ ಹಿಂದೆ …
Read More »ಕರ್ನಾಟಕದಲ್ಲಿ ಏಪ್ರಿಲ್ ತಿಂಗಳ ಮದ್ಯ ಮಾರಾಟದಲ್ಲಿ ದಾಖಲೆ
ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ ತಿಂಗಳ ಮದ್ಯ ಮಾರಾಟದಲ್ಲಿ ರಾಜ್ಯ ಅಬಕಾರಿ ಇಲಾಖೆ ಹೊಸ ಇತಿಹಾಸ ಬರೆದಿದೆ. ಕಳೆದ ತಿಂಗಳ ವ್ಯಾಪಾರದಿಂದ ಬರೋಬ್ಬರಿ ರಾಜ್ಯ ಸರ್ಕಾರಕ್ಕೆ ಮೂರು ಸಾವಿರ ಕೋಟಿ ಆದಾಯ ಬಂದಿದೆ. ಈ ಮೂಲಕ ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು. ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿ ಏಪ್ರಿಲ್ನಲ್ಲಿ ದಾಖಲೆಯ 68.17 ಲಕ್ಷ ಬಾಕ್ಸ್ ಮಾರಾಟವಾಗಿದ್ದು, ಇದರಿಂದ …
Read More »ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು
ಬಳ್ಳಾರಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಮೃತಪಟ್ಟಿದ್ದು ಸಾವಿನ ಹಿಂದೆ ಜೈಲು ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂಕನಾಳು ಗ್ರಾಮದ ನಿವಾಸಿ ಹನುಮಂತು (25) ಮೃತಪಟ್ಟ ದುರ್ದೈವಿ. ಅಣ್ಣ ಸಾವಿಗೆ ನ್ಯಾಯಬೇಕೆಂದು ತಂಗಿ ಮರಿಯಮ್ಮ ಆಗ್ರಹಿಸಿದ್ದಾರೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಹನುಮಂತು ನನ್ನು ಕಳೆದ ಜನವರಿಯಲ್ಲಿ ರಾಯಚೂರು ಜೈಲಿನಿಂದ ಬಳ್ಳಾರಿ ಕೇಂದ್ರ …
Read More »ಕೈಗಾ ಅಣುಸ್ಥಾವರಕ್ಕೆ ಬರುತ್ತಿದ್ದ 140 ಟನ್ ತೂಕದ ಯಂತ್ರ ಹೊತ್ತ ವಾಹನ ಪಲ್ಟಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣುಸ್ಥಾವರಕ್ಕೆ ಕೊಂಡೊಯ್ಯಲಾಗುತ್ತಿದ್ದ ಬೃಹತ್ ವಿಕಿರಣ ರಕ್ಷಾ ಕವಚ ಹೊತ್ತ ವಾಹನವೊಂದು ಗುರಿ ತಲುಪಲು ಕೇವಲ ನಾಲ್ಕು ಕಿಲೋಮೀಟರ್ ಬಾಕಿ ಇರುವಾಗ ಪಲ್ಟಿಯಾದ ಘಟನೆ ಕಾರವಾರ(Karawara) ತಾಲೂಕಿನ ಹಟುಗಾ ಗ್ರಾಮದಲ್ಲಿ ನಡೆದಿದೆ. ಫೆಬ್ರವರಿ 9 ರಂದು ಗುಜರಾತ್ನ ಸೂರತ್ನಿಂದ ಕೈಗಾ ಅಣುಸ್ಥಾವರಕ್ಕೆ ಈ 140 ಟನ್ ತೂಕ ಹೊಂದಿದ್ದ ವಿಕಿರಣ ರಕ್ಷಾ ಕವಚವನ್ನು ಮಲ್ಟಿ ಎಕ್ಸಲ್ ವಾಹನದ ಮೂಲಕ ಸಾಗಿಸಲಾಗುತ್ತಿತ್ತು. ಹಗಲಿರುಳು ಪರಿಶ್ರಮ ಪಟ್ಟು …
Read More »ನರ್ಸ್ ಕೆಲಸ ಮಾಡೋ ಸೊಸೆ ನಮಗೆ ಬೇಡ” ಅಂದವರಿಗೆ ಅದೇ ಹುಡುಗಿ ಹೇಗೆ ತಕ್ಕ ಉತ್ತರ ನೀಡಿದ್ದಾಳೆ ನೋಡಿ
ನಾಲ್ಕು ವರ್ಷದ ಹಿಂದೆ ಒಬ್ಬ ಹುಡುಗಿ ನರ್ಸ್ (Nurse) ಆಗಿದ್ದಾಳೆ ಅನ್ನೋ ಒಂದೇ ಕಾರಣಕ್ಕೆ, “ಇವಳು ರಾತ್ರಿಯೆಲ್ಲಾ ಆಸ್ಪತ್ರೆಯಲ್ಲಿ ಗಂಡಸರ ಮಧ್ಯೆ ಡ್ಯೂಟಿ ಮಾಡ್ತಾಳೆ, ಇವಳು ನಮಗೆ ಬೇಡ” ಅಂತ ನಿಶ್ಚಿತಾರ್ಥದ ದಿನವೇ ಹುಡುಗನ ಕಡೆಯವರು ಸಂಬಂಧ ಮುರಿದು ಅವಮಾನ ಮಾಡಿದ್ರು. ಆ ಹುಡುಗಿ ಕಿಂಚಿತ್ತೂ ಎದೆಗುಂದದೆ ಸುಮ್ಮನೆ ಆ ಅವಮಾನವನ್ನ ನುಂಗಿಕೊಂಡಿದ್ದಳು. ಆದ್ರೆ ಕಾಲ ಯಾರಿಗೂ ಕಾಯಲ್ಲ ನೋಡು ! ನಾಲ್ಕು ವರ್ಷ ಆದ ಮೇಲೆ ಅದೇ ಹುಡುಗನ …
Read More »ಮೇ 8ರಿಂದ ಮಮದಾಪುರ ದುರ್ಗಾದೇವಿ ಜಾತ್ರಾ ಮಹೋತ್ಸವ
ಮಮದಾಪುರ: ಗ್ರಾಮದಲ್ಲಿ ಮೇ 8ರಿಂದ 10ರವರೆಗೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಜರುಗಲಿದೆ. ಮೇ 8ರಂದು ಬೆಳಗ್ಗೆ 6ಕ್ಕೆ ದೇವಿಗೆ ಮಹಾ ರುದ್ರಾಭಿಷೇಕ, ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಿ ಉಡಿ ತುಂಬಲಾಗುವುದು. 9 ಗಂಟೆಗೆ ಕುಂಭ ಬರಮಾಡಿಕೊಳ್ಳಲಾಗುವುದು. ಸಂಜೆ 6ಕ್ಕೆ ಸುತ್ತಮುತ್ತಲಿನ ಗ್ರಾಮಗಳ ದೇವರ ಪಲ್ಲಕ್ಕಿ ಬರಮಾಡಿಕೊಳ್ಳಲಾಗುವುದು. ಬಳಿಕ ಗ್ರಾಮಸ್ಥರಿಂದ ನೈವೇದ್ಯ ಅರ್ಪಣೆ, ‘ಅಣ್ಣನ ಕಣ್ಣೀರು’ ನಾಟಕ ಪ್ರದರ್ಶನ, ಭಜನಾ ಕಾರ್ಯಕ್ರಮ ನೀಡುವರು. ಮೇ 9ರಂದು ಪಲ್ಲಕ್ಕಿಯೊಂದಿಗೆ ಅಗ್ನಿ ಹಾಯುವ …
Read More »ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರ ಕ್ರಮ ವಹಿಸಲಿದೆ
ಬೆಳಗಾವಿ: ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಸರ್ಕಾರ ಕ್ರಮ ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಸಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ಮತ್ತು ಆರೋಗ್ಯ ವಿಮಾ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೌರಕಾರ್ಮಿಕರಿಗೆ ಭರವಸೆ ನೀಡಿರುವಂತೆ ಈಗಾಗಲೇ 20,000 …
Read More »ಬೌದ್ಧ ಬಿಕ್ಕುವಿನ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು…..!
ಆತನೊಬ್ಬ ಬೌದ್ಧ ಬಿಕ್ಕು. ತಾನಾಯಿತು ತನ್ನ ಧರ್ಮವಾಯಿತು ಎಂದು ಇದ್ದವರು. ಆದರೆ ಆತನ ಬಳಿ ಸಾಕಷ್ಟು ಹಣವಿದೆ ಎಂದು ಆಲೋಚಿಸಿದ ದುಷ್ಕರ್ಮಿಗಳು ಆತನ ಬೆನ್ನು ಬಿದ್ದಿದ್ದರು. ಆದರೆ ಆತನ ಬಳಿ ಹಣವೇ ಇಲ್ಲ ಅಂದಾಗ ಆತನನ್ನು ಕೊಂದು ಹಾಕಿದ ನಂತರ ಶವವನ್ನು ಬೇರೆ ಜಿಲ್ಲೆಯಲ್ಲಿ ಎಸೆದು ಪಕ್ಕದ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಆದರೆ, ಯಾವುದೇ ಸಣ್ಣ ಸುಳಿವು ಇಲ್ಲದಿದ್ದರೂ ಸಹ ಧಾರವಾಡ ಪೊಲೀಸರು ಪ್ರರಕಣದ ಬೆನ್ನು ಬಿದ್ದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. …
Read More »
Laxmi News 24×7