Breaking News

Laxminews 24x7

ಬೆಳಗಾವಿ: ತಪ್ಪಿದ ಕಾಂಗ್ರೆಸ್‌ ಟಿಕೆಟ್: ಆಕ್ರೋಶ

ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಹಾಗೂ ಖಾನಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಇರ್ಫಾನ್‌ ತಾಳಿಕೋಟಿ ಅವರು ಟಿಕೆಟ್ ಸಿಗದ ಕಾರಣ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರ್ಜುನ ಗುಡ್ಡದ, ‘ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ರಾಮದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದು ಸರಿಯಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ, ಸಿದ್ದರಾಮಯ್ಯ ಅವರ ಮೇಲೆ ಒತ್ತಡ …

Read More »

ಬೆಳಗಾವಿ: ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್(ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಪರಿಣಾಮ, ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಹೆಚ್ಚುತ್ತಿದೆ.   ಕಳೆದ 4 ವರ್ಷಗಳಿಗೆ ಹೋಲಿಸಿ ದರೆ, ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ, ಒಂದು ಸಾವಿರ ಪುರುಷ ಮತದಾರರಿಗೆ 975 ಮಹಿಳಾ ಮತದಾರರಿದ್ದರು. ಈಗ ಮಹಿಳಾ ಮತದಾರರ ಪ್ರಮಾಣ 979ಕ್ಕೆ ಏರಿಕೆಯಾಗಿದೆ. 18 ಕ್ಷೇತ್ರಗಳ …

Read More »

ಜಾನಪದ ವಿದ್ವಾಂಸನಿಗೆ ಗ್ರಂಥ ಅರ್ಪಣೆ

ಮೂಡಲಗಿ: ‘ಘಟಪ್ರಭೆ ಧಬಧಬೆಗೆ ಜೀವಜಲ ದಡಗುಟ್ಟಿ ಹರಿದಿರುವಂತೆ, ಭರವಸೆಯ ತೂಗು ಸೇತುವೆ ದಾಟಿ’ ಕವಿ ಚನ್ನವೀರ ಕಣವಿ ಅವರು ಗೋಕಾಕದ ಜಾನಪದ ವಿದ್ವಾಂಸ ಸಿ.ಕೆ. ನಾವಲಗಿ ಅವರ ಕುರಿತು ಬರೆದಿರುವ ಸುನೀತದ ಸಾಲು ಇದು. ಈ ಸಾಲುಗಳಿಗೆ ಅರ್ಥ ಬರುವಂತೆ ಬಾಳಿದವರು ಈ ಸಾಹಿತಿ.   ಸಿ.ಕೆ. ನಾವಲಗಿ ಅವರು ಮೂರೂವರೆ ದಶಕಗಳ ಅಧ್ಯಯನ, ಪರಿಶ್ರಮದ ಮುಪ್ಪರಿಗೊಂಡ ಪರಿಪಕ್ವತೆಯ ವ್ಯಕ್ತಿತ್ವ. ಓದು, ಬರವಣಿಗೆ, ಅಧ್ಯಾಪನಗಳೊಂದಿಗೆ ಜಾನಪದ ಸಾಹಿತ್ಯದಲ್ಲಿ ಅಗ್ರಗಣ್ಯ ಎನಿಸಿಕೊಂಡಿದ್ದಾರೆ. …

Read More »

8 ಗ್ರಾಮಗಳ ಕೆರೆ ತುಂಬಿಸುವ ಕಾಮಗಾರಿ ಶೀಘ್ರ ಪೂರ್ಣ

ಐಗಳಿ: ‘ಅಥಣಿ ತಾಲ್ಲೂಕಿನ ಪೂರ್ವ ಭಾಗದ ಅಡಹಳ್ಳಿ, ಅಡಹಳ್ಳಟ್ಟಿ, ಕೋಹಳ್ಳಿ, ರಾಮತೀರ್ಥ ಸೇರಿದಂತೆ 8 ಗ್ರಾಮಗಳ ಕೆರೆ ತುಂಬಿಸುವ ಎರಡನೆಯ ₹95 ಕೋಟಿ ವೆಚ್ಚದ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಕಾರ್ಯ ಈಗ ಪ್ರಾರಂಭವಾಗಲಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.   ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಪೈಪ್‌ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕರಿಮಸೂತಿ ಏತನೀರಾವರಿ ಕಾಲುವೆಯಿಂದ …

Read More »

ಹೆತ್ತ ತಂದೆ- ತಾಯಿಗಳನ್ನು ಗೌರವಿಸಬೇಕು. ತಂದೆ ತಾಯಿಗಳು ಮೊದಲ ಗುರು

ಹಂದಿಗುಂದ: ‘ಪ್ರತಿಯೊಬ್ಬರೂ ಹೆತ್ತ ತಂದೆ- ತಾಯಿಗಳನ್ನು ಗೌರವಿಸಬೇಕು. ತಂದೆ ತಾಯಿಗಳು ಮೊದಲ ಗುರುಗಳಾದರೆ ವಿದ್ಯೆ ಕಲಿಸುವ ಗುರುಗಳು ಪೂಜ್ಯನೀಯರು’ ಎಂದು ಮುಗಳಖೋಡ ಈಶ್ವರಲಿಂಗೇಶ್ವರ ದೇವಸ್ಥಾನ ಹಿರೇಮಠದ ಪ್ರಧಾನ ಅರ್ಚಕ ಸಚಿನ ಶಾಸ್ತ್ರಿ ಹೇಳಿದರು.   ಇಲ್ಲಿನ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿಗಳಿಂದ ಪಾಲಕರ ಪಾದಪೂಜೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಮಕ್ಕಳು ಪರೀಕ್ಷೆಗಳನ್ನು ಧೈರ್ಯದಿಂದ ಬರೆಯಬೇಕು. ಮೊಬೈಲ್ ದೂರವಿಟ್ಟು ಅಕ್ಷರಭ್ಯಾಸದ ಜೊತೆಗೆ ಸಂಸ್ಕಾರವಂತ ಜೀವನ …

Read More »

ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಬಂಧಿಸಿದ ಅಬಕಾರಿ ತಂಡ

ಅಥಣಿ: ಇಲ್ಲಿನ ಅಬಕಾರಿ ವಲಯ ವ್ಯಾಪ್ತಿಯ ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಅಬಕಾರಿ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದೆ. ಸುರೇಶ ಅಪ್ಪಾಸಾಬ ಚೋರಮುಲೆ ಬಂಧಿತ. ಈತನಿಂದ 40,612 ರೂ. ಅಂದಾಜು ಮೌಲ್ಯದ 64.44 ಲೀ ಮದ್ಯ ಹಾಗೂ 46.8 ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಬೆಳಗಾವಿ ಉತ್ತರ ಜಿಲ್ಲೆ ಜಂಟಿ …

Read More »

ಬೊಮ್ಮಾಯಿ ಅವರ ಬಲಗೈ ಬಂಟ ಕಾಂಗ್ರೆಸ್ ಪಕ್ಷಕ್ಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಬಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿಂತಾಮಣಿ, ಕೆ ಆರ್ ಪೇಟೆ, ಶಿಗ್ಗಾವ್ ಹಾಗೂ ಶಿವಮೊಗ್ಗ ಕ್ಷೇತ್ರದ ಅನ್ಯ ಪಕ್ಷಗಳ ನಾಯಕರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ರೆಹಮಾನ್ ಖಾನ್ …

Read More »

10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ*

ಗೋಕಾಕ: ಸತೀಶ್‌ ಶುಗರ್ಸ್‌ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್‌ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್‌ಗೆ, ಎಥೆನಾಲ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 300 ಕೆ.ಎಲ್. ನಿಂದ 600 ಕೆ.ಎಲ್.ಗೆ ವಿಸ್ತರಣೆ ಮತ್ತು ನೂತನ 12 ಟನ್ ಪ್ರತಿವಿನ ಸಾಮರ್ಥ್ಯದ ಮಲ್ಟಿ ಫೀಡ್ ಬಯೋ ಸಿ.ಬಿ.ಜಿ. ಉತ್ಪಾದನಾ ಘಟಕಗಳನ್ನೊಳಗೊಂಡು ಅಂದಾಜು 500 ಕೋಟಿ ರೂ.ಗಳ …

Read More »

ಬಿಜೆಪಿ ಸಂಸದರಾಗಿದ್ದ ಪ್ರಬಲ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ!

ಹಾವೇರಿ: ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಭೇಟಿಗೆ ತೆರಳಿದ್ದಾರೆ. ಇವರು 1989 – 1994, 1994-1999 ಅವಧಿಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿದ್ದರು. ನಂತರ 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದರು. ಮುಂದೆ 2009ರಲ್ಲಿ ಕಾಂಗ್ರೆಸ್​ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು. ನಂತರ 2018ರಲ್ಲಿ ಮತ್ತೆ ಬಿಜೆಪಿ ಸೇರಿದ್ದ ಇವರು ಇದೀಗ ವಾಪಸ್​ ಕಾಂಗ್ರೆಸ್​ಗೆ …

Read More »

ರಾಹುಲ್ ಗಾಂಧಿ’ಗೆ ಮತ್ತೊಂದು ಶಾಕ್ ; ‘ಸರ್ಕಾರಿ ಬಂಗಲೆ’ ಖಾಲಿ ಮಾಡುವಂತೆ ನೋಟೀಸ್

ನವದೆಹಲಿ : ಸರ್ಕಾರಿ ಬಂಗಲೆ ತೊರೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಲಾಗಿದ್ದು, ಸಂಸತ್ತಿನ ಸದಸ್ಯತ್ವದ ನಂತರ ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದೆ. ರಾಹುಲ್ ಗಾಂಧಿ 12 ತುಘಲಕ್ ಲೇನ್‌ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ನೋಟಿಸ್ ಪ್ರಕಾರ, ಅನರ್ಹಗೊಂಡ ಒಂದು ತಿಂಗಳೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನ ಖಾಲಿ ಮಾಡಬೇಕು. …

Read More »