ಬೆಂಗಳೂರು: ವೇತನ ಪರಿಷ್ಕರಣೆ, ಖಾಯಂ ನೌಕರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದ್ದು, ಎಸ್ಮಾ ಜಾರಿಗೆ ಮುಂದಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳು ಕೂಡಲೇ ಕತ್ಯವ್ಯಕ್ಕೆ ಹಾಜರಾಗಲು ಸೂಚನೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಒಂದು ವೇಳೆ ಪ್ರತಿಭಟನೆ ಮುಂದುವರೆಸಿದರೆ ESMA ACT ಜಾರಿಗೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. NHM ಒಳಗುತ್ತಿಗೆ ನೌಕರರನ್ನು ಈ ತನಕ ಯಾವ ರಾಜ್ಯದಲ್ಲೂ ಖಾಯಂಗೊಳಿಸಿಲ್ಲ. ಮಣಿಪುರ, ಅಸ್ಸಾಂ, …
Read More »ಶಾಲೆಗೆ ನುಗ್ಗಿ ಮದ್ಯ, ಗಾಂಜಾ ಸೇವಿಸಿ ನನಗೂ ಪಾಠ ಮಾಡಿ ಎನ್ನುವ ಯುವಕನ ಕಾಟ
ವಿಜಯನಗರ: ಹಳೆಯ ವಿದ್ಯಾರ್ಥಿಯೊಬ್ಬನ ದುರ್ವರ್ತನೆಗೆ ಹೊಸಪೇಟೆಯ ಊರಮ್ಮ ಬಯಲು ಪ್ರದೇಶದಲ್ಲಿರುವ ಶ್ರೀಮತಿ ಕಟ್ಟಾ ಕೃಷ್ಣ ವೇಣಮ್ಮ ಸ್ಮಾರಕ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ. ವಿದ್ಯಾರ್ಥಿಗಳ ಮಧ್ಯೆ ಬಂದು, ಮದ್ಯ ಮಿಶ್ರಿತ ಜ್ಯೂಸ್ ಸೇವಿಸುತ್ತಾನೆ. ಇಷ್ಟೇ ಅಲ್ಲದೆ, ಶಾಲೆಯಲ್ಲೇ ಗಾಂಜಾ ಹೊಡೆಯುತ್ತಾ ನನಗೂ ಪಾಠ ಮಾಡಿ ಅಂತಾ ಶಿಕ್ಷಕರನ್ನು ಕಾಡುತ್ತಿದ್ದಾನೆ. ಆರೋಪಿಯನ್ನು ರಾಮು ಅಲಿಯಾಸ್ ಹೆಗ್ಗಣ ಎಂದು ಗುರುತಿಸಲಾಗಿದೆ. ಈತ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾನೆ. ಗಾಂಜಾ, …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು
ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು ಮುಂಜಾನೆ ೧೧ ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು ೪೭,೧೮೫ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ೧೧ ಸ್ವರ್ಣ ಪದಕಗಳನ್ನು ನೀಡಲಾಗುವುದು. ೨೭ ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು. …
Read More »20ರಂದು ಕಾಂಗ್ರೆಸ್ ರ್ಯಾಲಿ | ಯುವಜನರಿಗೆ ಸಂದೇಶ ನೀಡಲಿರುವ ರಾಹುಲ್ ಗಾಂಧಿ: ಸತೀಶ
ಬೆಳಗಾವಿ: ‘ಕಾಂಗ್ರೆಸ್ನಿಂದ ಈಗಾಗಲೇ ರೈತರ ಹಾಗೂ ಮಹಿಳಾ ಸಮಾವೇಶ ಮಾಡಲಾಗಿದೆ. ಈಗ ಯುವಜನರ ಸಮಾವೇಶಕ್ಕೆ ಬೆಳಗಾವಿಯಲ್ಲಿ ಸಿದ್ಧತೆ ಮಾಡಿದ್ದೇವೆ. ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಯುವಜನತೆಗೆ ಚುನಾವಣಾ ಸಂದೇಶ ನೀಡಲಿದ್ದಾರೆ’ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ಮಾರ್ಚ್ 20ರಂದು ನಗರದಲ್ಲಿ ಆಯೋಜಿಸಿದ ಕಾಂಗ್ರೆಸ್ ಯುವ ಕ್ರಾಂತಿ ರ್ಯಾಲಿಯ ಸಿದ್ಧತೆ ಪಡಿಶೀಲಿಸಿ ಮಾತನಾಡಿದ ಅವರು, ‘ವೇದಿಕೆಯಲ್ಲಿ 2 ಲಕ್ಷ ಕುರ್ಚಿಗಳನ್ನು ಹಾಕಿದ್ದೇವೆ. ರಾಜ್ಯದ ಮೂಲೆಮೂಲೆಯಿಂದ ಅಪಾರ ಸಂಖ್ಯೆಯ …
Read More »ಚುನಾವಣಾ ಅಕ್ರಮ ತಡೆಗೆ 24X7 ಹದ್ದಿನ ಕಣ್ಣು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ‘ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ಕಣ್ಣಿಡಲು ಹಾಗೂ ಅಕ್ರಮ ಚಟುವಟಿಕೆ ತಡೆಯಲು ತಂಡಗಳು 24X7 ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ ಪಾಳಿಯಲ್ಲಿ ಕೆಲಸ ಮಾಡು ಮೂರು ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಮತ್ತು ವಿವಿಧ ತಂಡಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಯಾವುದೇ ರೀತಿಯ ಅಕ್ರಮ ಅಥವಾ …
Read More »ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು: ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ ಪಟ್ಟಣದಲ್ಲಿ ಜರುಗಿದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೆ …
Read More »ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು
ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ …
Read More »ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್ನಲ್ಲಿ ನಿಂತ ನೀರು
ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಪರದಾಡುವಂತೆ ಆಯಿತು. ಈ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದು ಕಾರ್ ಜಖಂ ಆಯಿತು. ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದೆ. ಕಟಾವು ಹಂತಕ್ಕೆ ಬಂದಿರುವ ಮಾವಿನ ಬೆಳೆಗೂ ಮಳೆ ನೀರೆರೆದಿದೆ.
Read More »ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಕಲಬುರಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ …
Read More »
Laxmi News 24×7