Breaking News

Laxminews 24x7

ತಣಿಯದ ಸೋಮಣ್ಣ ಕೋಪ: ದಿಲ್ಲಿಯಲ್ಲೂ ವಿಜಯೇಂದ್ರ ವಿರುದ್ಧ ಆಕ್ರೋಶ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದಿಂದ ದಿಲ್ಲಿ ಅಂಗಣ ತಲುಪಿದರೂ ವಸತಿ ಸಚಿವ ವಿ. ಸೋಮಣ್ಣ ಅವರ ಆಕ್ರೋಶ ಇನ್ನೂ ಆರಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಹಾಗೂ ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ‘ನಾನು ಬಂದ …

Read More »

ಟಿಕೆಟ್‌ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ:B.S.Y.

ಗಜೇಂದ್ರಗಡ: ಟಿಕೆಟ್‌ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಟಿಕೆಟ್‌ ಹಂಚಿಕೆ ಹೈಕಮಾಂಡ್‌ ಮಾಡುತ್ತೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೋ, ಜನಾಭಿಪ್ರಾಯ ಯಾರಿಗಿದೆಯೋ ಅಂಥವರಿಗೆ ಅವಕಾಶ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾರು ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯ ಹೊಂದಿರುತ್ತಾರೋ ಅಂಥವರಿಗೆ ಹೈಕಮಾಂಡ್‌ ಮನ್ನಣೆ ನೀಡುತ್ತದೆ. ಉತ್ತಮ ಕೆಲಸ …

Read More »

ಪಟೇಲ್‌ ಮಾದರಿ ಬಸವ ಮೂರ್ತಿ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಳಗಾವಿ: ನರ್ಮದಾ ತಟದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆ ಮಾದರಿಯಲ್ಲಿ ಘಟಪ್ರಭಾ ನದಿ ಮಧ್ಯಭಾಗದಲ್ಲಿ 108 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಲಾಗುವುದು. ಅಲ್ಲದೇ ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.   ನಗರದ ಬಸವೇಶ್ವರ ವೃತ್ತದಲ್ಲಿ 15 ಅಡಿ ಎತ್ತರದ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ಹಾಗೂ ಬಸವಾದಿ ಶರಣರ ಮತ್ತು ಅನುಭವ ಮಂಟಪದ ಥೀಮ್‌ ಪಾರ್ಕ್‌ …

Read More »

ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಬಸ್ ಪ್ರಯಾಣ ದರ ₹15ರಿಂದ ₹20ವರೆಗೆ ಹೆಚ್ಚಳ

ಬೆಂಗಳೂರು: ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರವನ್ನು ಕೆಎಸ್‌ಆರ್‌ಟಿಸಿ ₹15ರಿಂದ ₹20ರವರೆಗೆ ಹೆಚ್ಚಳ ಮಾಡಿದೆ. ಟೋಲ್ ಶುಲ್ಕ ಸರಿದೂಗಿಸಲು ಕರ್ನಾಟಕ ಸಾರಿಗೆ ಬಸ್‌ ಪ್ರಯಾಣ ದರದಲ್ಲಿ ₹15, ರಾಜಹಂಸ ಬಸ್‌ ಪ್ರಯಾಣ ದರದಲ್ಲಿ ₹18, ಐರಾವತ ಸೇರಿ ಮಲ್ಟಿ ಆಯಕ್ಸೆಲ್ ಬಸ್‌ಗಳ ಪ್ರಯಾಣ ದರದಲ್ಲಿ ₹20 ಹೆಚ್ಚಳ ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೆಯಲ್ಲಿ ಪ್ರಯಾಣಿಸುವ ಬಸ್‌ಗಳಿಗೆ ಮಾತ್ರ ಈ ದರ ಅನ್ವಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಎಕ್ಸ್‌ಪ್ರೆಸ್‌ …

Read More »

B.S.Y.ನವರನ್ನು ಬಿಜೆಪಿ ಕಾಲ ಕಸದಂತೆ ಕಾಣುತ್ತಿದೆ: ಕಾಂಗ್ರೆಸ್‌ ಲೇವಡಿ

ಬೆಂಗಳೂರು: ಟಿಕೆಟ್‌ ಯಾರಿಗೆ ನೀಡಬೇಕು ಎಂದು ನಿರ್ಧಾರ ಮಾಡುವುದು ಪಕ್ಷವೇ ಹೊರೆತು ಯಡಿಯೂರಪ್ಪನವರು ಅಲ್ಲ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪ್ರಶ್ನೆ ಎತ್ತಿದೆ. ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.     ಸಿ.ಟಿ ರವಿ ಅವರ ಹೇಳಿಕೆಯ ವರದಿಯ ಪ್ರತಿಯನ್ನು ಲಗತ್ತಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಬಿಜೆಪಿ ಕಾಲ …

Read More »

ರಾಜ್ಯದ ಸಾರ್ವಭೌಮತೆಗೆ ಧಕ್ಕೆ;ಮಹಾರಾಷ್ಟ್ರ ಸರ್ಕಾರ ವಜಾಕ್ಕೆ ಸಿದ್ದರಾಮಯ್ಯ ಒತ್ತಾಯ

ಹುಬ್ಬಳ್ಳಿ: ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ 865 ಹಳ್ಳಿಗಳ ಜನರಿಗಾಗಿ ಮಹಾರಾಷ್ಟ್ರ ಸರ್ಕಾರವು ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುತ್ತಿರುವುದು ಅಕ್ಷಮ್ಯ. ಇದು ಒಕ್ಕೂಟದ ವ್ಯವಸ್ಥೆಗೆ, ರಾಜ್ಯದ ಸಾರ್ವಭೌಮತೆಗೆ ಧಕ್ಕೆ ತರುವಂತಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಯಮ್ಯ ಒತ್ತಾಯಿಸಿದರು.   ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ‘ರಾಜ್ಯ ಹಾಗೂ ಕನ್ನಡಿಗರ ಹಿತಾಸಕ್ತಿ ಕಾಪಾಡುವಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂಡ ವಿಫಲರಾಗಿದ್ದಾರೆ. …

Read More »

ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ. ‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ. ‘ಪ್ರವೀಣ್ …

Read More »

ಗಡಿ ಭಾಗದವರಿಗೆ ಮಹಾರಾಷ್ಟ್ರ ಸರ್ಕಾರದ ವಿಮೆ; ಹೇಗೆ ತಡೆಯಬೇಕು ಯೋಚಿಸುತ್ತೇನೆ:ಸಿಎಂ

ಬೆಳಗಾವಿ: ‘ಕರ್ನಾಟಕ ಗಡಿ ಭಾಗದ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದರೆ, ಅದನ್ನು ಪರಿಶೀಲಿಸಿ ಹೇಗೆ ತಡೆಯಬೇಕು ಯೋಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ನೀಡಿದ್ದಕ್ಕೆ ನಾನೇಕೆ ರಾಜೀನಾಮೆ ಕೊಡಬೇಕು. ನಾಡು, ನುಡಿ, ಗಡಿ ಜನರ ರಕ್ಷಣೆ ವಿಚಾರದಲ್ಲಿ ನಾನು ಡಿ.ಕೆ.ಶಿವಕುಮಾರ ಅವರಿಂದ ಪಾಠ ಕಲಿಯಬೇಕಾಗಿಲ್ಲ’ ಎಂದರು. ‘ನಾವು ಕೂಡ …

Read More »

ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ.

ಬೆಳಗಾವಿ: ಇಲ್ಲಿನ ಕೆಕೆ ಕೊಪ್ಪ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಬೈಕ್ ಸವಾರನನ್ನು ಬಲಿತೆಗೆದುಕೊಂಡಿದೆ. ಸುಳೇಬಾವಿ ಗ್ರಾಮದ ರಾಮು ನಾರಾಯಣ ಬಂಗೋಡಿ (54) ಮೃತಪಟ್ಟವರು. ಅವರು ವಡಗಾವಿ ದೇವಾಂಗನಗರ ನಿವಾಸಿ, ಗೋಪಾಲ ಬಸಪ್ಪ ತಾಳೂಕರ (58) ಅವರೊಂದಿಗೆ ಬುಧವಾರ ಮಧ್ಯಾಹ್ನ ಹಿರೇಬಾಗೇವಾಡಿಯಿಂದ ಬೈಕ್ ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ ಗುದ್ದಿದೆ. ಗೋಪಾಲ ತಾಳೂಕರ ಅವರಿಗೆ ಗಾಯಗಳಾಗಿದ್ದು ತಲೆ ಹಾಗೂ ಮುಖಕ್ಕೆ ತೀವ್ರ ಏಟು ತಗುಲಿದ ರಾಮು ಬಂಗೋಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …

Read More »