Breaking News

Laxminews 24x7

ವಿಜಯಪುರದ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ:ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿ ಬುರಜ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿಜಯಪುರದ ಚಂದಾಬಾವಡಿ ನಿವಾಸಿ ಖಾಜಾ ನದಾಫ್ ಮೃತಪಟ್ಟಿರುವ ವ್ಯಕ್ತಿ.   ಖಾಜಾ ನದಾಫ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

1 ಕೆ.ಜಿ ಮರದ ಬೆಲೆ 8 ಲಕ್ಷ ರೂ.; ಅತ್ಯಂತ ದುಬಾರಿ ಮರ ಯಾವುದು ಗೊತ್ತಾ?

ನವದೆಹಲಿ: ಅತ್ಯಂತ ದುಬಾರಿ ಮರ ಯಾವುದು ಎಂದರೆ ಅನೇಕರು ಶ್ರೀಗಂಧ ಅಂತಾರೆ. ವಿಶ್ವದಾದ್ಯಂತ ವಿವಿಧ ಬಗೆಯ ದುಬಾರಿ ಮರಗಳಿವೆ. ಈ ಮರಕ್ಕೆ 1 ಕೆಜಿಗೆ ಲಕ್ಷಗಟ್ಟಲೆ ಬೆಲೆಯನ್ನು ಹೊಂದಿದೆ. ಯಾವ ಮರ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ… ಶ್ರೀಗಂಧಕ್ಕೆ ಸರಾಸರಿ 7 ರಿಂದ 8 ಸಾವಿರದವರೆಗೆ ಲಭ್ಯವಿದೆ. ಆದ್ರೆ, ಈ ದುಬಾರಿ ಬೆಲೆ ಬಾಳುವ ಈ ಮರದ ಹೆಸರು ‘ಆಫ್ರಿಕನ್ ಬ್ಲ್ಯಾಕ್‌ವುಡ್’. ಈ ಮರದ ಬೆಲೆ 8 ಸಾವಿರ ಪೌಂಡ್ …

Read More »

18 ತಿಂಗಳಿಂದ ‘DA ಬಾಕಿ’ಗಾಗಿ ಕಾದು ಕುಳಿತಿರುವ ‘ಸರ್ಕಾರಿ ನೌಕರರು-ಪಿಂಚಣಿದಾರ’ರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್

ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಆರಂಭದೊಂದಿಗೆ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ಬಾಕಿ ಸಮಸ್ಯೆ ಲೋಕಸಭೆಯಲ್ಲಿ ಉದ್ಭವಿಸಿದೆ. ಪ್ರಶ್ನೋತ್ತರ ವೇಳೆಯಲ್ಲಿ ತುಟ್ಟಿಭತ್ಯೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಲಾಗಿದ್ದು, ಕರೋನಾ ಅವಧಿಯಲ್ಲಿ ಸ್ಥಗಿತಗೊಂಡಿರುವ ಕೇಂದ್ರ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ತುಟ್ಟಿಭತ್ಯೆಯನ್ನ ಬಿಡುಗಡೆ ಮಾಡುವ ಉದ್ದೇಶವಿದೆಯೇ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಡಿಎ ಬಾಕಿ ನೀಡುವ …

Read More »

BIG NEWS: ರೇವಣ್ಣ ಕುಟುಂಬಕ್ಕೆ ಮತ್ತೆ ಶಾಕ್ ಕೊಟ್ಟ HDK

ಹಾಸನ: ಹಾಸನದ ಜೆಡಿಎಸ್ ಟಿಕೆಟ್ ವಿಚಾರವಾಗಿ ರೇವಣ್ಣ ಕುಟುಂಬ ಭವಾನಿ ರೇವಣ್ಣಗೆ ನೀಡಬೇಕು ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಶಾಕ್ ನೀಡಿದ್ದಾರೆ. ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ನೀಡಲಾಗುವುದು ಎಂದು ಈಗಾಗಲೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಯಾವುದೇ ಗೊಂದಲ ಇಲ್ಲ ಎಂದು ಹೇಳುವ ಮೂಲಕ ಭವಾನಿ ರೇವಣ್ಣಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಪಕ್ಷದ ಕಾಯಕರ್ತರಿಗೆ ಆದ್ಯತೆ …

Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ- ನಾಳೆಯೊಳಗೆ ಅರ್ಜಿ ಹಾಕಿ

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಅಂದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ​ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 10 ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್​ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ …

Read More »

ಕಲಬುರ್ಗಿಯ ಪೋಲಿಸ್ ಇಲಾಖೆಯಲ್ಲಿ ಕಾಮಪುರಾಣ

ಕಲಬುರಗಿ: ಜಿಲ್ಲೆಯಲ್ಲಿ ಐ ಎಸ್ ಡಿ ವಿಭಾಗದ ಎಸ್ ಪಿ ಆಗಿರುವ ಅರುಣ್ ರಂಗರಾಜನ್ ಮತ್ತು ಮಹಿಳಾ ಪಿ ಎಸ್ ಐ ನಡುವಿನ ಅನೈತಿಕ ಸಂಭಂದ ಈಗ ಅವಳ ಗಂಡನಿಂದಲೆ ಬಟಾಬಯಲಾಗಿದೆ. ಕಲಬುರಗಿ ಪಟ್ಟಣದ ಐವಾನ್ ಶಾಹಿ ಬಡಾವಣೆಯಲ್ಲಿರುವ ಪಿ ಡಬ್ಲೂ ಡಿ ಕ್ವಾರ್ಟರ್ ನಲ್ಲಿರುವ ಮಹಿಳಾ ಪಿ ಎಸ್ ಐ ಮತ್ತು ಆಕೆಯ ಪತಿ ಹೆಡ್ ಕಾನಸ್ಟೆಬಲ್ ಆಗಿರುವ ಕಂಟೆಪ್ಪ ಇದೇ ಕ್ವಾಟ್ರಸನಲ್ಲಿ ತಂಗಲು ಎಸ್ ಪಿ ಆಗಿರುವ …

Read More »

ದೊಡ್ಡ ಹುದ್ದೆ ತ್ಯಜಿಸಿ ಯುಪಿಎಸ್​ಸಿ ಪರೀಕ್ಷೆ ಬರೆದು ಮೊದಲ ರ‍್ಯಾಂಕ್​ ಗಳಿಸಿದ ಅಭ್ಯರ್ಥಿ

ಐಐಟಿ-ಬಾಂಬೆ ಹಳೆ ವಿದ್ಯಾರ್ಥಿಯಾಗಿರುವ ಐಎಎಸ್ ಅಧಿಕಾರಿ ಕನಿಶಕ್ ಕಟಾರಿಯಾ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯುವ ಸಲುವಾಗಿ ತಮ್ಮ ಹೆಚ್ಚಿನ ಸಂಬಳದ ಕೆಲಸವನ್ನು ತ್ಯಜಿಸಲು ನಿರ್ಧರಿಸಿದ್ದರು. 2019ರಲ್ಲಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಐಎಎಸ್​ ಅಧಿಕಾರಿಯಾಗಿ ಸಾರ್ಥಕತೆ ಮೆರೆದಿದ್ದಾರೆ.   IAS ಕನಿಶಕ್ ಕಟಾರಿಯಾ ರಾಜಸ್ಥಾನದ ಕೋಟಾದಿಂದ ಬಂದವರು ಮತ್ತು ಅವರು ಕೋಟಾದ ಸೇಂಟ್ ಪಾಲ್ಸ್ ಸೀನಿಯರ್ ಸೆಕೆಂಡ್‌ನಿಂದ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಅವರು IIT, …

Read More »

2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್‌ ಬಿಗ್‌ ಪ್ಲ್ಯಾನ್‌?

ಬೆಂಗಳೂರು, ಮಾರ್ಚ್‌ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್‌ ಟೈಮ್ಸ್‌’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …

Read More »

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ : ಅಧಿಕೃತವಾಗಿ ‘ಉದಯ್ ಗೌಡ’ ಕಾಂಗ್ರೆಸ್ ಸೇರ್ಪಡೆ

ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ತಗುಲಿದ್ದು, ಬಿಜೆಪಿ ಮುಖಂಡ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉದಯ್ ಗೌಡ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೆಚ್ ಡಿ …

Read More »

ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ.

ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …

Read More »