Breaking News

Laxminews 24x7

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

ಅಧಿವೇಶನ: ಪೂರ್ಣ ಕಲಾಪ ಅನುಮಾನ

ಬೆಂಗಳೂರು: ಪಕ್ಷದ ಪರ ಅಲೆ ಎಬ್ಬಿಸಲು ವಿವಿಧ ಕಡೆಗಳಲ್ಲಿ ಯಾತ್ರೆ ನಡೆಸುತ್ತಿರುವ ನಾಯಕರು, ಮತ್ತೊಮ್ಮೆ ಗೆಲ್ಲಲೇಬೇಕೆಂಬ ಹಟಕ್ಕೆ ಬಿದ್ದಿರುವ ಎಲ್ಲ ಪಕ್ಷದ ಶಾಸಕರು ಕ್ಷೇತ್ರದಲ್ಲೇ ಬೆವರು ಹರಿಸುತ್ತಿರುವುದರಿಂ ದಾಗಿ 15 ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕಲಾಪ ನಿಗದಿಯಾದಷ್ಟು ದಿನ ನಡೆಯುವುದೇ ಅನುಮಾನ.   ಈ ಅಧಿವೇಶನ ಮುಗಿದ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಮುಂದೆಯೂ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳುವ ಸಲುವಾಗಿ ಶಾಸಕರು ಹರಸಾಹಸ ಪಡುತ್ತಿದ್ದು, ಕ್ಷೇತ್ರದಲ್ಲೇ ಮೊಕ್ಕಾಂ …

Read More »

10 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ.ಶಿ.

ಶಿವಮೊಗ್ಗ: ‘ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಅಭ್ಯರ್ಥಿಯ ಪಟ್ಟಿ ಬಿಡುಗಡೆ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್, …

Read More »

KPSC: ಪಿಡಬ್ಲ್ಯುಡಿ 335 ಜೆಇ ಹುದ್ದೆ: ಅಂತಿಮ ಆಯ್ಕೆ ಪಟ್ಟಿ ವಿಳಂಬ

ಬೆಂಗಳೂರು: ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಿರಿಯ ಎಂಜಿನಿಯರ್‌ (ಜೆಇ) 335 ಹುದ್ದೆಗಳಿಗೆ 1:1 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ‌ಪಟ್ಟಿ ಮೂರು ಬಾರಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸಭೆಯಲ್ಲಿ ಮಂಡನೆಯಾದರೂ ಅನುಮೋದನೆ ಸಿಕ್ಕಿಲ್ಲ.   ‘ತಾತ್ಕಾಲಿಕ ಪಟ್ಟಿ ಸಿದ್ಧಗೊಂಡು ಈಗಾಗಲೇ ತಿಂಗಳು ಕಳೆದಿರುವುದರಿಂದ, ಫೆ. 7ರಂದು ನಡೆದ ಆಯೋಗದ ಸಭೆಯಲ್ಲಿ ಎಲ್ಲ ಸದಸ್ಯರ ಅನುಮೋದನೆ ಪಡೆದು ಆಯ್ಕೆ ಪಟ್ಟಿ ಬಿಡುಗಡೆ ಮಾಡಲು ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮುಂದಾಗಿದ್ದರು. …

Read More »

ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿ

ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. ಬೆಂಗಳೂರು: ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. ಪುನೀತ್ ರಸ್ತೆ ನಾಮಕರಣ ಕಾರ್ಯಕ್ರಮ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲದೇ ರಾಜಕೀಯ ನಾಯಕರ ಫೋಟೋಗಳು ರಾರಾಜಿಸಿದ ವರದಿಯೊಂದನ್ನು ಎಎಪಿ ರಾಜ್ಯ ಅಧಿಕೃತ ಟ್ವೀಟರ್ ಖಾತೆಯಲ್ಲಿ …

Read More »

ರಾಜ್ಯ ಸರ್ಕಾರ ತೆರೆದ ‘ನಮ್ಮ ಕ್ಲಿನಿಕ್‌’ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್

ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ. ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ …

Read More »

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?

ರೈತನ ಮಗನಾಗಿದ್ದುಕೊಂಡು ಕೊತ್ವಾಲ್ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ. ಬೆಂಗಳೂರು: ರೈತನ ಮಗನಾಗಿದ್ದುಕೊಂಡು ಕೊತ್ವಾಲ್ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ. ಆದರೆ ಆ ಬಗ್ಗೆ ಜಾರಿ ನಿರ್ದೇಶನಾಲಯ ತಿಳಿಯಲು ಹೊರಟಾಗ ಮಾತ್ರ ಅವರಿಗೆ ಆತಂಕ ಉಂಟಾಗುತ್ತದೆ ಎಂದು ಬಿಜೆಪಿ ಹೇಳಿದೆ. ಈ …

Read More »

ಬ್ಯಾನರ್ ತೆಗೆಯಿರಿ, ಇಲ್ಲವೇ ಕ್ರಿಮಿನಲ್ ಕೇಸ್ ಎದುರಿಸಿ: ರಾಜಕೀಯ ಮುಖಂಡರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ

ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ತುಷಾರ್ ಗಿರಿನಾಥ್ ಅವರು, ಈ ವಾರಾಂತ್ಯದ ವೇಳೆಗೆ ಕನಿಷ್ಟ …

Read More »

ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ!

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಕಾರಿಗೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈ …

Read More »

ಪ್ರಹ್ಲಾದ್ ಜೋಶಿ ಕಚೇರಿಯಲ್ಲಿ ಲಂಚ ಸ್ವೀಕಾರ ಆರೋಪ ಮಾಡಿದ ಜೆಡಿಎಸ್: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಕೇಂದ್ರ ಸಚಿವ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮಂಗಳವಾರ ಆರೋಪಿಸಿದ್ದು, ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ …

Read More »