Breaking News

Laxminews 24x7

ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ವೈದ್ಯಕೀಯ ನಿರ್ಲಕ್ಷ್ಯ: ಪ್ರಸೂತಿ ತಜ್ಞೆಗೆ ₹11 ಲಕ್ಷ ದಂಡ

ಧಾರವಾಡ: ವಾಸ್ತವಾಂಶವನ್ನು ಮರೆಮಾಚಿ ಅಂಗವಿಕಲ ಮಗುವಿನ ಜನನಕ್ಕೆ ಕಾರಣವಾದ ಇಲ್ಲಿನ ಮಾಳಮಡ್ಡಿಯ ಪ್ರಶಾಂತ ನರ್ಸಿಂಗ್ ಹೋಮ್‌ನ ಡಾ. ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಮತ್ತು ಪರಿಹಾರವಾಗಿ ₹11.10ಲಕ್ಷ ವಿಧಿಸಿದೆ.   ಇಲ್ಲಿನ ಶ್ರೀನಗರ ಬಡಾವಣೆಯ ಭಾವಿಕಟ್ಟಿ ಪ್ಲಾಟ್ ನಿವಾಸಿ ಪರಶುರಾಮ ಘಾಟಗೆ ಎಂಬುವವರು ತಮ್ಮ ಪತ್ನಿ ಪ್ರೀತಿ ಅವರನ್ನು ಪ್ರಶಾಂತ ನರ್ಸಿಂಗ್ ಹೋಮ್‌ನಲ್ಲಿ 2018ರ ಜುಲೈ 12ರಿಂದ 2019ರ ಜನೆವರಿವರೆಗೆ ತಪಾಸಣೆ ನಡೆಸಿದ್ದಾರೆ. …

Read More »

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ. 2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ. 2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ …

Read More »

 ಫೆ. 24ರಿಂದ ಬೆಳಗಾವಿ ಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪ್ರವಾಸ:

ಗೋಕಾಕ: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ …

Read More »

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

Read More »

ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ : ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧನಾಸಭಾ ಚುನಾವಣೆಗೆ ಭಾರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಲ್ಲೆಗಳಲ್ಲಿ ಮೋರ್ಚಾ ಸಮಾವೇಶ, ಫಲಾನುಭವಿಗಳ ಸಮ್ಮೇಳನ, ವಿಡಿಯೋ ವ್ಯಾನ್ ಪ್ರಚಾರ, ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನ, ರಥ ಯಾತ್ರೆಗಳಿಗೆ ಉಸ್ತುವಾರಿಗಳನ್ನು ನೀಮಕ ಮಾಡಿದೆ. ಯಾತ್ರೆ ಪ್ರಮುಖರಾಗಿ ಸಚಿವರ ಸಿ‌ಸಿ ಪಾಟೀಲ್, ಪಕ್ಷದ ಎಲ್ಲ ಮೋರ್ಚಾಗಳ ಜಿಲ್ಲಾ ಸಮಾವೇಶ ಸಂಚಾಲಕರಾಗಿ ಬಿ.ವೈ ವಿಜಯೇಂದ್ರ, ಫಲಾನುಭವಿಗಳ ಸಮ್ಮೇಳನದ ಸಂಚಾಲಕರಾಗಿ‌ …

Read More »

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ …

Read More »

ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಿಂದ ಯಾರಾದರೂ ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.   ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ತಾರೀಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕಗಳ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.  ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.

Read More »

ಸರ್ವೋದಯ ಕರ್ನಾಟಕ ಪಕ್ಷದಿಂದ ಚುನಾವಣೆ ಸ್ಪರ್ಧೆ: ಚಾಮರಸ

ಧಾರವಾಡ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷವು 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ’ ಎಂದು ಪಕ್ಷದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ತಿಳಿಸಿದರು.   ‘ರಾಜಕೀಯದಿಂದ ಭ್ರಷ್ಟಾಚಾರವನ್ನು ದೂರ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಈ ಬಾರಿ ಯುವ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗುತ್ತಿದೆ. ಜತೆಗೆ ರಾಜಕೀಯ ಎಂಬುದು ಹಣ ಗಳಿಕೆಯ ಉದ್ಯೋಗವಲ್ಲ, ಅದು ಸೇವಾ ಕ್ಷೇತ್ರ …

Read More »