Breaking News

Laxminews 24x7

ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಬತ್ತಿಹೋಗಿದ್ದ ಭೀಮೆಯ ಒಡಲು ಒಂದೇ ದಿನದಲ್ಲಿ ಭರ್ತಿ

ಯಾದಗಿರಿ: ಮಹಾರಾಷ್ಟ್ರದ  ಪಶ್ಚಿಮ ಘಟ್ಟದಲ್ಲಿ  ವರುಣನ ಅಬ್ಬರ ಜೋರಾಗಿದ್ದು, ಬತ್ತಿಹೋಗಿದ್ದ ಭೀಮಾ ನದಿಯ  ಒಡಲು ಒಂದೇ ದಿನ ಭರ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಗುರುಸಣಗಿ ಬ್ಯಾರೇಜ್‌ನಿಂದ 50 ಸಾವಿರ ಕ್ಯೂಸೆಕ್ ನೀರನ್ನು ಭೀಮಾನದಿಗೆ ಬಿಡುಗಡೆ ಮಾಡಲಾಗಿದೆ. ಅಪಾರ ಪ್ರಮಾಣ ನೀರು ಹರಿದುಬರುತ್ತಿರುವ ಹಿನ್ನೆಲೆ ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪರಿಣಾಮ ನದಿ …

Read More »

ಬಿಜೆಪಿ ತೊರೆದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ

ನವದೆಹಲಿ: ಭಾರತೀಯ ಜನತಾ ಪಾರ್ಟಿಯ  ರಾಷ್ಟ್ರೀಯ ವಕ್ತಾರಾಗಿದ್ದ ಶೆಹಜಾದ್ ಪೂನಾವಾಲಾ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ತಮ್ಮ ‘X’ ಖಾತೆಯ ಬಯೋ  ಬದಲಾಯಿಸಿಕೊಂಡಿದ್ದು, ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಹುದ್ದೆಯ ಹೆಸರನ್ನು ತೆರವುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಸಕ್ರಿಯ ರಾಜಕೀಯದಿಂದ ಹೊರನಡೆಯುತ್ತಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಆರಂಭವಾಗಿದೆ. ಬಯೋದಲ್ಲಿ ಏನಿದೆ? ಗುರುವಾರ ತಮ್ಮ ಪರಿಷ್ಕೃತ X ಪ್ರೊಫೈಲ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ 38 ವರ್ಷದ ಪೂನಾವಾಲಾ, …

Read More »

ಸುಪ್ರೀಂ ಮೆಟ್ಟಿಲೇರಿದ್ದ ಸಿಎಂ ಒಮರ್‌ ಅಬ್ದುಲ್ಲಾಗೆ ಕೊನೆಗೂ ಪತ್ನಿಯಿಂದ ಸಿಕ್ತು ವಿಚ್ಛೇದನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ  ಮತ್ತು ಅವರ ಪತ್ನಿ ಪಾಯಲ್  ಅವರಿಗೆ ವಿಚ್ಛೇದನ ನೀಡುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ದಂಪತಿ ತಮ್ಮ ಮದುವೆಯನ್ನು ವಿಸರ್ಜಿಸಲು ಮತ್ತು ಬಾಕಿ ಇರುವ ಎಲ್ಲಾ ವಿವಾದಗಳನ್ನು ಬಗೆಹರಿಸಲು ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಬೆನ್ನಲ್ಲೇ ವಿಚ್ಛೇದನಕ್ಕೆ ಕೋರ್ಟ್‌ ಅನುಮತಿ ನೀಡಿದೆ. ದೆಹಲಿ ಹೈಕೋರ್ಟ್ ತನ್ನ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯಲ್ಲಿ …

Read More »

ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ – ಓರ್ವ ಸಾವು, ಅವಶೇಷಗಳ ಅಡಿಯಲ್ಲೇ ಹಲವರು ಸಿಲುಕಿರೋ ಶಂಕೆ

ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ತಿಳಿಯುತ್ತಿದ್ದಂತೆ ಈಗಾಗಲೇ ಎನ್‌ಡಿಆರ್‌ಎಫ್‌ ತಂಡ  ಹಾಗೂ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬೃಹತ್‌ ಕಟ್ಟಡ ಕುಸಿತದಿಂದ ಸುತ್ತಮುತ್ತಲಿನ ಪ್ರದೇಶದ ಜನರೂ ಆತಂಕಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. 8-10 ಜನ ಸಿಲುಕಿರುವ ಶಂಕೆ ಪ್ರಾಥಮಿಕ ವರದಿಗಳ ಪ್ರಕಾರ, ಸುಮಾರು 8 ರಿಂದ 10 ಮಂದಿ ಅವಶೇಷಗಳ …

Read More »

ಬಿಜೆಪಿಯಿಂದ ಇಂದು ಕೆಆರ್‌ಎಸ್‌ಗೆ ಮುತ್ತಿಗೆ – ಪೊಲೀಸರಿಂದ ಭಾರೀ ಬಿಗಿ ಭದ್ರತೆ

ಮಂಡ್ಯ: ಕಾವೇರಿ ಕೊಳ್ಳದಲ್ಲಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ತಮಿಳುನಾಡಿಗೆ  ನೀರು ಬಿಡೋ CWMA (ಕಾವೇರಿ ನೀರು ನಿರ್ವಹಣಾ ಮಂಡಳಿ) ಆದೇಶಕ್ಕೆ ಕನ್ನಡಿಗರು ಕೆಂಡಾಮಂಡಲರಾಗಿದ್ದಾರೆ. ಈ ತಾರತಮ್ಯದ ಆದೇಶ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬಿಜೆಪಿ (BJP), ಇವತ್ತು (ಜ.31) ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ (KRS) ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಇದರಿಂದಾಗಿ ಜಲಾಶಯದ ಬಳಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , …

Read More »

ಕಳೆದೆರಡು ತಿಂಗಳಿನಿಂದ ನಿಷೇಧ ಹೇರಿದ್ದ ಮೀನುಗಾರಿಕೆಗೆ ಇಂದಿನಿಂದ ಅವಕಾಶ

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ  ಎರಡು ತಿಂಗಳಿನಿಂದ ಹೇರಿದ್ದ ನಿಷೇಧವನ್ನು ಇಂದಿನಿಂದ ತೆರವುಗೊಳಿಸಲಾಗಿದೆ. ಮೀನುಗಾರಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಮೀನುಗಾರರು ತಮ್ಮ ಬೋಟುಗಳಿಗೆ ಪೂಜೆ ಸಲ್ಲಿಸಿ ಸಮುದ್ರಕ್ಕಿಳಿಯಲು ಭರದ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಮತ್ತೆ ಹವಾಮಾನ ವೈಪರೀತ್ಯ ಇದೀಗ ಮೀನುಗಾರರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆಯಿಂದಾಗಿ ಎರಡು ತಿಂಗಳುಗಳ ಕಾಲ ಮೀನುಗಾರಿಕೆಗೆ ನಿಷೇಧ ಹೇರಲಾಗಿತ್ತು. ಇಂದಿನಿಂದ ನಿಷೇಧ ತೆರವಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ಸ್ಯ …

Read More »

ಅತ್ತೆ-ಮಾವನ ಮನಸ್ಥಿತಿ ಎಂದಿಗೂ ಬದಲಾಗಲ್ಲʼ; ವಿಡಿಯೋ ರೆಕಾರ್ಡ್‌ ಮಾಡಿ ನೇಣಿಗೆ ಶರಣಾದ ಶಿಕ್ಷಕಿ

ನವದೆಹಲಿ: ಮದುವೆಯಾದ 8 ತಿಂಗಳ ಬಳಿಕ ಸರ್ಕಾರಿ ಶಿಕ್ಷಕಿಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದ (ಡೆಹ್ರಾಡೂನ್‌ನಲ್ಲಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ರೆಕಾರ್ಡ್‌ ಮಾಡಿದ್ದ 90 ಸೆಕೆಂಡ್‌ಗಳ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೃಷ್ಟಿ ಕಂಧಾರಿ ಮೃತ ಶಿಕ್ಷಕಿ. ಕಳೆದ ವರ್ಷ ನವೆಂಬರ್‌ನಲ್ಲಿ ಅವರು ಸರ್ಕಾರಿ ಉದ್ಯೋಗಿಯಾಗಿರುವ ಸೌರಭ್ ರಾತುರಿಯನ್ನು ಮದುವೆಯಾಗಿದ್ದರು. ಬಳಿಕ, ಡೆಹ್ರಾಡೂನ್ ಸಮೀಪದ ದೋಯಿವಾಲಾ ಪ್ರದೇಶದಲ್ಲಿ ದಂಪತಿ ವಾಸಿಸುತ್ತಿದ್ದರು. ವರದಕ್ಷಿಣೆ …

Read More »

ಧಾರಾಕಾರ ಮಳೆಗೆ ಕುಸಿದು ಬಿದ್ದ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ – ಕಳಪೆ ಕಾಮಗಾರಿ ಆರೋಪ

ಚಿಕ್ಕೋಡಿ: ಧಾರಾಕಾರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ  ತಡೆಗೋಡೆ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಸುಮಾರು 25 ಅಡಿ ಎತ್ತರದ ಹೊಸದಾಗಿ ನಿರ್ಮಿಸಲಾಗಿದ್ದ ಹೆದ್ದಾರಿಯ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಣ್ಣು ಹೊರಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಗೋಡೆ ನೆನೆದು ಕುಸಿದಿದೆ ಎನ್ನಲಾಗಿದೆ. …

Read More »

​ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ  ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ​ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಮತ್ತು ಪ್ರಾಧಿಕಾರಗಳಲ್ಲಿನರಾಜ್ಯದ ಪ್ರಾತಿನಿಧ್ಯ ತೀರಾ ದುರ್ಬಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ​ಕುಡಿಯುವ ನೀರಿಗಷ್ಟೇ ಲಭ್ಯ ನಮ್ಮ …

Read More »

ಕೂಡಲೇ ಬರ ಘೋಷಿಸದಿದ್ದರೆ ‘ಚಲೋ ಹೊಲ ಗದ್ದೆ’ ಧರಣಿ ಆರಂಭ – ಅಶೋಕ್ ಎಚ್ಚರಿಕೆ

ಬಳ್ಳಾರಿ: ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ‘ಚಲೋ ಹೊಲ ಗದ್ದೆ’ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲ ಜಿಲ್ಲೆಗಳಲ್ಲಿ ಬರ ಇದ್ದರೂ ರಾಜ್ಯ ಸರ್ಕಾರ (Congress) ಬರ ಘೋಷಣೆ ಮಾಡಿಲ್ಲ. ಕೂಡಲೇ ಬರ ಘೋಷಿಸದಿದ್ದರೆ ನಾವೆಲ್ಲರೂ ರೈತರ ಹೊಲದಲ್ಲಿ ಕುಳಿತು ಧರಣಿ ಮಾಡುತ್ತೇವೆ. …

Read More »