Breaking News

Laxminews 24x7

ಬಡವರ ‘ಅನ್ನ’ಕ್ಕೆ ಕನ್ನ – ಗದಗದಲ್ಲಿ ಬೃಹತ್ ಪಡಿತರ ಅಕ್ಕಿ ದಂಧೆ ಪತ್ತೆ, 14 ಲಕ್ಷ ಮೌಲ್ಯದ ಅಕ್ಕಿ ಜಪ್ತಿ!

ಗದಗ: ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಕೋಟಿಗಟ್ಟಲೆ ಲೂಟಿ ಮಾಡುತ್ತಿದ್ದ ಜಾಲವನ್ನು ಗದಗ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಗದಗ ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜ್ ಬಳಿ ಸಂಚರಿಸುತ್ತಿದ್ದ ಮಧ್ಯಪ್ರದೇಶ ನೋಂದಣಿಯ ಲಾರಿಯನ್ನು ತಡೆದ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮ ಬಯಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಿಂದ ಹೊರಟಿದ್ದ ಈ ಲಾರಿ ಗದಗ, ಇಳಕಲ್ ಮಾರ್ಗವಾಗಿ …

Read More »

ರಾಜೀನಾಮೆ ನೀಡದ ಮಮತಾ ಸರ್ಕಾರವೇ ವಜಾ

ಕೋಲ್ಕತ್ತಾ: ರಾಜೀನಾಮೆ ನೀಡದೇ ಭಾರೀ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್‌ಎನ್‌ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್  ಸೋಲನ್ನನುಭವಿಸಿದರೂ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ಮೊಂಡಾಟ ಮುಂದುವರಿಸಿದ್ದರು. ಟಿಎಂಸಿಗೆ ಸೋಲಾಗಿಲ್ಲ, ಚುನಾವಣಾ ಆಯೋಗದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜಯಗಳಿಸಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ ಎಂದು ಸವಾಲು ಎಸೆದಿದ್ದರು. ಭಾರತದ ಸಂವಿಧಾನದ 172ನೇ …

Read More »

ಶಿವಮೊಗ್ಗ, ಹಾವೇರಿಯಲ್ಲಿ ಧಾರಾಕಾರ ಮಳೆ

ಹಾವೇರಿ: ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ಶಿವಮೊಗ್ಗ  ಹಾಗೂ ಹಾವೇರಿ  ಜನರಿಗೆ ವರುಣ ಕೊಂಚ ತಂಪೆರೆದಿದ್ದಾನೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿದೆಡೆ ಮಳೆಯಾಗಿದೆ. ಅಲ್ಲದೇ ವಿವಿಧ ಭಾಗದಲ್ಲಿ ಮೋಡ ಕವಿದ ವಾತವರಣವಿದ್ದು, ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದೆ. ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದ ಜಿಲ್ಲೆಯ ಜನರು ಮಳೆಯಿಂದ ಕೊಂಚ ನಿಟ್ಟುಸಿತರು ಬಿಡುವಂತಾಗಿದೆ. ಪ್ರತಿನಿತ್ಯ …

Read More »

ದೇಶದ ಆಹಾರ ದಾಸ್ತಾನು ಬಫರ್‌ಗಿಂತ ಮೂರು ಪಟ್ಟು ಹೆಚ್ಚು: ಜೋಶಿ

ನವದೆಹಲಿ: ಭಾರತದ ಆಹಾರ ಭದ್ರತಾ ವ್ಯವಸ್ಥೆ  ಪ್ರಬಲವಾಗಿದ್ದು, ಪ್ರಸ್ತುತದಲ್ಲಿ ಬಫರ್ ಅವಶ್ಯಕತೆಗಿಂತ ಸುಮಾರು ಮೂರು ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧತೆ ತೋರಿದ್ದು, ಪರಿಣಾಮ ನಮ್ಮ ಆಹಾರ ಭದ್ರತಾ ಚೌಕಟ್ಟು ಬಲವಾಗಿ ಬೆಳೆಯುತ್ತಲೇ ಇದೆ ಎಂದು ಜೋಶಿ ಪ್ರತಿಪಾದಿಸಿದ್ದಾರೆ. 604.02 ಲಕ್ಷ …

Read More »

ಹೈಕಮಾಂಡ್ ಸಿಎಂಗೆ ಅಧಿಕಾರ ಮುಂದುವರೆಸಿ ಎನ್ನಲಿ, ಇಲ್ಲ ಬದಲಾವಣೆ ಮಾಡ್ತೀವಿ ಅಂತಾದ್ರೂ ಹೇಳಲಿ: ರಾಜಣ್ಣ

ಮೈಸೂರು: ಹೈಕಮಾಂಡ್ ಸಿಎಂಗೆ ಅಧಿಕಾರ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಕೊಡಲಿ, ಇಲ್ಲ ಬದಲಾವಣೆ ಮಾಡ್ತೀವಿ ಅಂತಾದ್ರೂ ಹೇಳಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ  ಹೇಳಿದ್ದಾರೆ. ಮೈಸೂರಿನಲ್ಲಿ  ಮಾತನಾಡಿದ ಅವರು, ನಾನು ಸಿಎಂ ಬದಲಾಗುತ್ತಾರೆ ಅಂತಾನೂ ಹೇಳಲ್ಲ, ಇರುತ್ತಾರೆ ಅಂತಾನೂ ಹೇಳಲ್ಲ. ಆದರೆ ಹೈಕಮಾಂಡ್ ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರರು ಅಧಿಕಾರ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಆದರೂ ಕೊಡಲಿ. ಇಲ್ಲ ಬದಲಾವಣೆ ಮಾಡುತ್ತೇವೆ ಎಂಬುದಾದರೂ ಹೇಳಲಿ. ಎರಡು …

Read More »

ಪ್ರವಾಹ ಎದುರಿಸಿದ್ದ ಕೃಷ್ಣೆಯ ಒಡಲು ಈಗ ಖಾಲಿ

ಯಾದಗಿರಿ: ಪ್ರವಾಹ ಎದುರಿಸಿದ್ದ ಕೃಷ್ಣಾ ನದಿಯ ಒಡಲು ಈಗ ರಣ ಬಿಸಿಲಿನಿಂದಾಗಿ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ರೈತರ ಜೀವನಾಡಿ ಕೃಷ್ಣಾ ನದಿ. ಮಳೆಗಾಲದಲ್ಲಿ ಪ್ರವಾಹ ಎದುರಿಸಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ ಒಡಲು ಬೇಸಿಗೆಯ ರಣ ಬಿಸಿಲಿಯಿಂದ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ  ಗ್ರಾಮದ ಮೌನೇಶ್ವರ ದೇಗುಲ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿದೆ. ಕೃಷ್ಣಾ ನದಿ ತೀರದಲ್ಲಿರುವ ಈ ದೇವಸ್ಥಾನಕ್ಕೆ ಭಕ್ತರು ಆಗಮಿಸಿ, ನದಿಯಲ್ಲಿ ಪುಣ್ಯಸ್ನಾನ …

Read More »

ಎಲ್ಲಾ ಬಂಡವಾಳ ಗುಜರಾತ್‌ಗೆ ಹೋಗ್ತಿದೆ, ಐಪಿಎಲ್‍ ಸಹ ಹೈಜಾಕ್ ಮಾಡಿದ್ದಾರೆ: ಕೇಂದ್ರದ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ದೇಶದ ಎಲ್ಲಾ ಬಂಡವಾಳ ಗುಜರಾತ್‌ ರಾಜ್ಯಕ್ಕೆ ಹೋಗುತ್ತಿದೆ. ಐಪಿಎಲ್‍ನ್ನೂ ಸಹ ಹೈಜಾಕ್ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ  ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೆಂಗಳೂರಿನಲ್ಲಿ (ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಐಪಿಎಲ್ ಫೈನಲ್ ಪಂದ್ಯ ಶಿಫ್ಟ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಐಪಿಎಲ್ ಮ್ಯಾಚ್‍ಗಳು ಗುಜರಾತ್‌ಗೆ ಹೋಗ್ತಾ ಇದೆ. ಬಂಡವಾಳ ಗುಜರಾತ್‌ಗೆ ಹೋಗ್ತಾ ಇದೆ. ಬಿಸಿಸಿಐ, ಐಸಿಸಿನಲ್ಲಿ ಜೈ ಶಾ ಇದ್ದಾರೆ ಅವರಿಗೆ ಮನಸ್ಸಿಗೆ …

Read More »

ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ ಮುನ್ನವೇ ಹಣ ದೋಚಿದ ಸೈಬರ್‌ ವಂಚಕರು!

ಚಿಕ್ಕಮಗಳೂರು: ಚಿನ್ನ ಅಡವಿಟ್ಟು ಪಡೆದ ಸಾಲ ಬ್ಯಾಂಕ್‌ ಖಾತೆಗೆ ಜಮೆಯಾದ ಒಂದೇ ಕ್ಷಣದಲ್ಲಿ ಸೈಬರ್‌ ವಂಚಕರು ಹಣ ಎಗರಿಸಿದ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ. ನಗರದ ವಕೀಲರೊಬ್ಬರು ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದು ಬ್ಯಾಂಕ್‌ನಿಂದ ಹೊರಬರುವ ಮುನ್ನವೇ ಅವರ ಖಾತೆಯಿಂದ 99,584 ರೂ. ಹಣವನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ. ಓಟಿಪಿ ಬಂದಿಲ್ಲ, ಎಪಿಕೆ ಲಿಂಕ್ ಕೂಡ ಬಂದಿಲ್ಲ ಹಣ ಮಾತ್ರ ಕಳ್ಳರ ಪಾಲಾಗಿದೆ. ಅಮೆಜಾನ್ …

Read More »

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿಯವರು  ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ. ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಪೊಲೀಸ್ ಅಧಿಕಾರಿ ಎ19 ಚೆನ್ನಕೇಶವ್ ಟೆಂಗರಿಕರ್ ಹಾಗೂ ಚಂದ್ರಶೇಖರ್ ಇಂಡಿ ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮುಗದಂ ಮತ್ತು ನ್ಯಾ.ರಾಜೇಶ್ …

Read More »

ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಆಸಿಫ್ (ರಾಜು) ಸೇಠ್

ಶಾಸಕ ಆಸಿಫ್ (ರಾಜು) ಸೇಠ್, ಅಮನ್ ನಗರ 4ನೇ, 5ನೇ, 6ನೇ ಮತ್ತು 7ನೇ ಕ್ರಾಸ್‌ಗೆ ಅಂಕಿತ್ ರಾಜೇಂದ್ರ ಸೇರಿದಂತೆ ನಿಗಮದ ಅಧಿಕಾರಿಗಳು, ಹೆಸ್ಕಾಂ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರೊಂದಿಗೆ ಭೇಟಿ ನೀಡಿ, ಈ ಪ್ರದೇಶದಲ್ಲಿ ನಡೆಯುತ್ತಿರುವ ಚರಂಡಿ, ಬೀದಿ ದೀಪ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಾಸಕರು ಸ್ಥಳೀಯ ನಿವಾಸಿಗಳೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಒಳಚರಂಡಿ, ರಸ್ತೆ ಪರಿಸ್ಥಿತಿಗಳು ಮತ್ತು …

Read More »