Breaking News
Home / Laxminews 24x7 (page 21)

Laxminews 24x7

ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 18 ರಿಂದ 20 ಸೀಟ್ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರೆಯುತ್ತಾರೆ. ಡಿಸಿಎಂ ಆಗಿ ಡಿಕೆಶಿಯವರು ಮುಂದುವರೆಯುತ್ತಾರೆ. ಅವರವರ ಎರಡು ಖುರ್ಚಿಗಳು ಫುಲ್ಲಾಗಿದೆ ಎಂದರು. ಈಶ್ವರಪ್ಪ ನವರು ಎಲ್ಲಾ ತಯಾರಿ ಮಾಡಿದ್ದರು, ಬೊಮ್ಮಾಯಿಯವರು ಅವರಿಗೆ ಹೇಳದೆ ಬಂದರು. ಈಶ್ವರಪ್ಪ ನವರ ಗತಿ ಏನಾಯ್ತು.ಬೊಮ್ಮಾಯಿ ಒಬ್ಬ ಮುಖ್ಯಮಂತ್ರಿ …

Read More »

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ …

Read More »

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.20ರಿಂದ 24ರವರೆಗೆ ಭರ್ಜರಿ ಮತಬೇಟೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ …

Read More »

ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ

ಬೆಂಗಳೂರು, ಏ.18- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ಆರಂಭವಾಗಲಿದ್ದು, ನಾಳೆಯಿಂದ ಕೊನೆಯ ಹಂತದ ಮತದಾನ ಮುಕ್ತಾಯವಾಗುವ ಜೂನ್ 1 ರ ಸಂಜೆ 6.30 ಗಂಟೆಯವರೆಗೂ ಮತಗಟ್ಟೆ ಸಮೀಕ್ಷೆಯನ್ನು ಭಾರತದ ಚುನಾವಣಾ ಆಯೋಗ ನಿಷೇಧಿಸಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಂಜೆ 6.30 ರ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ …

Read More »

ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲಿದ್ದಾರಾ ದಚ್ಚು?, ಎಚ್‌ಡಿಕೆ ಪರ ಇನ್ನೂ ಪ್ರಚಾರಕ್ಕಿಳಿಯದ ಸುಮಲತಾ-ಗುಟ್ಟೇನು?

ಮಂಡ್ಯ, ಏಪ್ರಿಲ್, 18: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣಗಳು ದಿನದಿಂದ ದಿನಕ್ಕೆ ಸುಡು ಬಿಸಲಿಲಿನಂತೆ ರಂಗೆರುತ್ತಿವೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಾಡಲು ಸಿನಿಮಾ ಸ್ಟಾರ್‌ಗಳು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರು ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿಳ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದ್ದು, ಈ ವಿಚಾರ ಇದೀಗ ಭಾರೀ ಸಂಚಲನ ಮೂಡಿಸಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ …

Read More »

ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ; ಬೆಚ್ಚಿಬಿದ್ದ ವೈದ್ಯರು

ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ನಡೆದಿದ್ದೇನು?: ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಕೂಲಿ ಕೆಲಸಕ್ಕೆ ಹೋಗಿದ್ದರುಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಗೆ ಹಾವು ಕಚ್ಚಿದೆ. ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆಸ್ಪತ್ರೆಗೆ …

Read More »

ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ನವದೆಹಲಿ : ಯಾವುದೇ ವ್ಯವಹಾರವನ್ನು ಪ್ರಾರಂಭಿಸಲು ಲಕ್ಷಾಂತರ ರೂಪಾಯಿಗಳು ಬೇಕಾಗುತ್ತವೆ, ಇದು ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಕಠಿಣವಾಗಿದೆ. ಅಂತಹ ಜನರಿಗೆ ಸರ್ಕಾರವು ಸಾಲವನ್ನು ವ್ಯವಸ್ಥೆ ಮಾಡುತ್ತದೆ. ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸರ್ಕಾರವು ಇದೇ ರೀತಿಯ ವ್ಯವಸ್ಥೆಯನ್ನು ಮಾಡಿದೆ, ಇದರಲ್ಲಿ ಅವರು ಯಾವುದೇ ಖಾತರಿಯಿಲ್ಲದೆ 10 ಲಕ್ಷ ರೂ.ಗಳವರೆಗೆ ಸಾಲವನ್ನು ತೆಗೆದುಕೊಳ್ಳಬಹುದು.ಈ ಯೋಜನೆಯ ಯಡಿ ಸಾಲವನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಭರವಸೆ …

Read More »

‘ಗೃಹ ಜ್ಯೋತಿ’ ಯೋಜನೆಗೆ ನೀವೂ ನೋಂದಣಿ ಆಗಿಲ್ಲವೇ? ಹಾಗಾದ್ರೆ ಅರ್ಜಿ ಸಲ್ಲಿಕೆ ಹೇಗೆ? ವಿಧಾನ, ಅರ್ಹತೆ ವಿವರ ಇಲ್ಲಿದೆ

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯನ್ನು ಘೋಷಿಸಿತ್ತು. ಇದರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಪೂರೈಕೆಯ ಉದ್ದೇಶವನ್ನು ಹೊರ ಹಾಕಿತ್ತು. ಈ ಯೋಜನೆ ಫಲಾನುಭವಿ ಆಗಲು ಆನ್‌ಲೈನ್‌ ಮತ್ತು ಆಫ್‌ಲೈನ್ ಮೂಲಕ ನೀವು ನೋಂದಾಯಿತ ಆಗಬಹುದು.ಈವರೆಗೆ ಯಾರೆಲ್ಲ ಯೋಜನೆಗೆ ನೋಂದಣಿ ಆಗಿಲ್ಲ ಅವರು ಫಲಾನುಭವಿ ಆಗಲು ಇಲ್ಲಿನ ವಿಧಾನ, ಮಾಹಿತಿ ತಿಳಿಯಬೇಕು.   ಕರ್ನಾಟಕ ಸರ್ಕಾರ ನಾಗರಿಕರ ಕಲ್ಯಾಣ ಉದ್ದೇಶದಿಂದ ಉಚಿತ ವಿದ್ಯುತ್ …

Read More »

ಬಡತನದಲ್ಲೂ ಅಪೂರ್ವ ಸಾಧನೆ

ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದ ಕೂಲಿ ಮಾಡುವ ದಂಪತಿಯ ಮಗಳು ಲಕ್ಷ್ಮೀ ಗುರುನಾಥ ಹರಿಜನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 97ರಷ್ಟು ಅಂಕ ಪಡೆದು ತಾನು ಕಲಿಯುತ್ತಿರುವ ಮಹಾಲಿಂಗಪುರದ ಕೆಎಲ್‌ಇ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ತಂದೆ ಗುರುನಾಥ ಮತ್ತು ತಾಯಿ ಯಲ್ಲವ್ವ ಇಬ್ಬರೂ ಬೇರೆಯವರ ಹೊಲದಲ್ಲಿ ಕೃಷಿ ಕೂಲಿ ಮಾಡಿಕೊಂಡು ಬದುಕು ಕಟ್ಡಿಕೊಂಡಿದ್ದಾರೆ. ಈ ದಂಪತಿಗೆ ಲಕ್ಷ್ಮಿ ಜತೆಗೆ ಇನ್ನಿಬ್ಬರು ಹೆಣ್ಣು ಮಕ್ಕಳು, …

Read More »

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ ಜಿಲ್ಲೆಯಲ್ಲಿ ಭೀಕರ ಬರದಿಂದ ಜಲಕ್ಷಾಮ ಉಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಬತ್ತಿವೆ. ಆದರೆ, ಇಲ್ಲಿನ ರಾಮಲಿಂಗೇಶ್ವರ 20 ಅಡಿ ಬಾವಿಯಲ್ಲಿ ಮಾತ್ರ ನಿರಂತರ ಜಲ ಪೂರಣವಾಗಿದೆ. ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಈ ಬಾವಿ ಎಂಥದ್ದೇ ಬಿರು ಬೇಸಿಗೆಯಲ್ಲೂ, ಬರದಲ್ಲೂ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ ಗುಡ್ಡಗಳ ನಡುವೆ ತಲೆ ಎತ್ತಿನಿಂತ ದೇವಸ್ಥಾನದಲ್ಲಿ …

Read More »