Breaking News

Laxminews 24x7

ಮಹಾರಾಷ್ಟ್ರ ಸಂಸದರಿಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ; ಡಿಸಿ ಆದೇಶ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವ್ ಆಯೋಜಿಸಿದ್ದು, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆಗೆ ಆಹ್ವಾನ ನೀಡಿತ್ತು. ಆದರೆ ಮಹಾ ಸಂಸದರಿಗೆ ಬೆಳಗಾವಿ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.   ನಾಳೆ ಬೆಳಗಾವಿಯ ವ್ಯಾಕ್ಸಿನ್ ಡಿಪೋದಲ್ಲಿ ನಡೆಯಲಿದ್ದ ಎಂಇಎಸ್ ಮಹಾಮೇಳಾವ್ ಸಮಾವೇಶದಲ್ಲಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಭಾಗಿಯಾಗಿ ಭಾಷಣ ಮಾಡುವವರಿದ್ದರು. ಈ ನಿಟ್ಟಿನಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ …

Read More »

ನನ್ನ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ ಜಗದೀಶ್ ಶೆಟ್ಟರ್ ವಾರ್ನ್‌

ಹುಬ್ಬಳ್ಳಿ, ಡಿಸೆಂಬರ್‌, 18: ನಾನು ಯಾರ ಉಸಾಬರಿಗೂ ಹೋಗುವುದಿಲ್ಲ. ನನ್ನ ಬಗ್ಗೆ ಯಾರಾದರೂ ಕೆಣಕಿದರೆ ಸುಮ್ಮನೆ ಬಿಡುವದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ವಾರ್ನಿಂಗ್ ಕೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಟ್ಟು ಹಬ್ಬದ ನಿಮಿತ್ತ ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಗದೀಶ್ ತಮ್ಮ ವಿರೋಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. …

Read More »

ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.   ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. ರಜೆಯ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.   ಕರ್ನಾಟಕ ಹೈಕೋರ್ಟ್ …

Read More »

ನಾಳೆಯಿಂದ ಬೆಳಗಾವಿಯಲ್ಲಿ ಮೀಸಲಾತಿ ಹೋರಾಟ

ಸದಾಶಿವ ವರದಿಯನ್ನು ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ‌ ಶಿಫಾರಸ್ಸು ಮಾಡಲು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಸೋಮವಾರದಿಂದ ಬೆಳಗಾವಿಯಲ್ಲಿ ಧರಣಿ ನಡೆಸಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೇಶವಮೂರ್ತಿ ಹೇಳಿದರು. ಭಾನುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನ್ಯಾ.ಸದಾಶಿವ ವರದಿಯನ್ನು ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ವಿಷಯವ ಸದನದಲ್ಲಿ ತೀರ್ಮಾನ ಮಾಡಿದ ವರದಿಯನ್ನು ಸರಕಾರ ಹೋರಾಟದ ಸಮಿತಿಗೆ ತಿಳಿಸಬೇಕು. ನ್ಯಾ. ನಾಗಮೋಹನ …

Read More »

ಸಿಎಂ ಬೆಂಗಾವಲು ವಾಹನ ತಡೆದ ಆಶ್ರಯ ಮನೆ ಫಲಾನುಭವಿಗಳು

ಆಶ್ರಯ ಮನೆ ಫಲಾನುಭವಿಗಳ ಮನವಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿ ಆಶ್ರಯ ಮನೆ ಫಲಾನುಭವಿಗಳು ಸಿಎಂ ಬೆಂಗಾವಲು ವಾಹನ ತಡೆದು ಪ್ರತಿಭಟನೆ ನಡೆಸಿದ ಘಟನೆ ಹುಬ್ಬಳ್ಳಿಯ ಸಿಎಂ ಅವರ ಆದರ್ಶ ನಗರದ ನಿವಾಸದ ಎದುರು ನಡೆದಿದೆ. ಜಗದೀಶ್ ನಗರ ಆಶ್ರಯ ಯೋಜನೆಯ 209 ಮನೆಗಳ ಹಂಚಿಕೆ ಹಾಗೂ ಹಕ್ಕು ಪತ್ರ ವಿತರಣೆ ಮಾಡುವಂತೆ ಫಲಾನುಭವಿಗಳು ಸಿಎಂಗೆ ಮನವಿ ಸಲ್ಲಿಸಲು ಆಗಮಿಸಿದ್ದರು. ಆದ್ರೆ ಸಿಎಂ ಅವರು ಸಮಯದ ಅಭಾವದಿಂದ ಅವರ ಮನವಿ ಸ್ವೀಕರಿಸದೆ …

Read More »

ಸಂಜೆ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲನೇ ಸಭೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತೀರ್ಮಾನ: ಡಿ.ಕೆ. ಶಿ

ಬೆಳಗಾವಿಯಲ್ಲಿ ಸಂಜೆ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲನೇ ಸಭೆ ಹಮ್ಮಿಕೊಳ್ಳಲಾಗಿದೆ. ಈ ನೂತನ ಸಮೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಅವರ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಲಿದೆ ಎಂದರು. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪ್ರಕರಣದ ಆರೋಪಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, …

Read More »

ವಿಧಾನಮಂಡಲದ ಚಳಿಗಾಲ ಅಧಿವೇಶನ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು: ಸಭಾಪತಿ ರಘುನಾಥರಾವ್

ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಭಾನುವಾರ(ಡಿ.18) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಚಿವರು, ಶಾಸಕರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು. ವಸತಿ ಕೊರತೆ ಕಂಡುಬಂದರೆ ಕೂಡಲೇ ವ್ಯವಸ್ಥೆ ಮಾಡಬೇಕು. ವಾಹನ ಚಾಲಕರು, ಮಾರ್ಷಲ್ ಗಳಿಗೆ ಸಮರ್ಪಕ ಊಟ ಒದಗಿಸಬೇಕು. ಆರೋಗ್ಯ …

Read More »

ಗರ್ಭಿಣಿ, ಬಾಣಂತಿ’ಯರಿಗೆ ನರೇಗಾದಲ್ಲಿ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮಹಾತ್ಮಾಗಾಂಧಿ ನರೇಂಗಾ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.   ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ.   ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ

ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ.25 ರಿಂದ 35 ವರೆಗೆ ಸಹಾಯಧನವನ್ನು ನೀಡಲಾಗುವುದು. ಈ ವರ್ಷದಲ್ಲಿ …

Read More »

ಶಾಮನೂರು ಶಿವಶಂಕರಪ್ಪ, ಖಂಡ್ರೆಗೆ ತುರ್ತು ನೋಟಿಸ್

ಬೆಂಗಳೂರು: ‘ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎನ್‌.ತಿಪ್ಪಣ್ಣ ಮಹಾಸಭಾದ ಸ್ಥಾನಗಳನ್ನು ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಅವರನ್ನು ಪದಚ್ಯುತಗೊಳಿಸಬೇಕು ಮತ್ತು ಮಹಾಸಭಾದಲ್ಲಿ ಲಿಂಗಾಯತ ಪದ ಸೇರ್ಪಡೆಗೆ ತಡೆ ನೀಡಬೇಕು’ ಎಂದು ಕೋರಲಾದ ಸಿವಿಲ್‌ ದಾವೆಗೆ ಸಂಬಂಧಿಸಿ ಮೂರು ಜನರಿಗೆ ತುರ್ತು ನೋಟಿಸ್ ಜಾರಿ ಗೊಳಿಸಲು ಬೆಂಗಳೂರು ಸಿಟಿ ಸಿವಿಲ್‌ ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. …

Read More »