Breaking News

Laxminews 24x7

ಸಿಎಂಗೆ ರಕ್ತದಲ್ಲಿ ಮನವಿ ಪತ್ರ ಬರೆದ ಬಸವರಾಜ್ ಪೂಜಾರ್

ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸಿಎಂಗೆ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಹಾಳ ತಾಲ್ಲೂಕಿನ ಸಿದ್ದಾಪುರ ಪಿ.ಟಿ.ಗ್ರಾಮದ ಬಸವರಾಜ್ ಪೂಜಾರ್ ಇವರು ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ಇಂದು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಪತ್ರ ನೀಡಲಿದ್ದಾರೆ‌. ಪತ್ರದಲ್ಲಿ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತಿಲ್ಲ ಎಂದು …

Read More »

ಅತ್ಯಾಚಾರ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್‌: ಸೂರತ್‌ ಮೂಲದ ಮಹಿಳೆ, ತಮ್ಮ ಮಾಜಿ ಶಿಷ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ. ಸೋನಿ ಅವರು ವಾದ- ಪ್ರತಿವಾದ ಆಲಿಸಿದ ನಂತರ, ಆರೋಪಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಅಹಮದಾಬಾದ್ ಬಳಿಯ ಮೊಟೆರಾದಲ್ಲಿರುವ ಆಶ್ರಮದಲ್ಲಿ 2001ರಿಂದ 2006ರವರೆಗೆ ಆಸಾರಾಂ ಬಾಪು ಹಲವು ಸಂದರ್ಭಗಳಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದರೆಂದು …

Read More »

2023: ಯಾವುದು ದುಬಾರಿ? ಯಾವುದು ಅಗ್ಗ?

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಬುಧವಾರ) ಮಂಡಿಸಿದರು. ಎನ್‌ಡಿಎ ಸರ್ಕಾರದ ಎರಡನೇ ಅವಧಿಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರು ಬಳಸುವ ಕೆಲವು ಸರಕುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದರೆ, ಇನ್ನು ಹಲವು ಸರಕುಗಳ ಮೇಲಿನ ಸುಂಕವನ್ನು ಕಡಿಮೆ ಮಾಡಲಾಗಿದೆ. ಬೆಲೆ ಏರಿಕೆಯಾದ ಸರಕುಗಳ ವಿವರ: ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ …

Read More »

2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’

ನವದೆಹಲಿ: ‌2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬುಧವಾರ ಮಂಡಿಸಿದ್ದಾರೆ. ಸಿಗರೇಟ್ ಮೇಲಿನ ತೆರಿಗೆಯನ್ನು ಶೇಕಡ 16ಕ್ಕೆ ಹೆಚ್ಚಳ ಮಾಡಿರುವುದಾಗಿ ನಿರ್ಮಲಾ ಘೋಷಿಸಿದರು.   ಕೇಂದ್ರ ಬಜೆಟ್‌ನಲ್ಲಿ ಸಿಗರೇಟ್ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಗಾಡ್‌ಫ್ರೇ ಫಿಲಿಪ್ಸ್ ಇಂಡಿಯಾ ಮತ್ತು ಐಟಿಸಿ ಲಿಮಿಟೆಡ್ ಸೇರಿದಂತೆ ಸಿಗರೇಟ್ ಕಂಪನಿಗಳ ಷೇರುಗಳು ಷೇರುಪೇಟೆ ಸಂವೇದಿ ಸೂಚ್ಯಂಕದಲ್ಲಿ (ಬಿಎಸ್‌ಇ) ಶೇಕಡ 5 ರಷ್ಟು ಕುಸಿತ …

Read More »

ಅನಿಲ್‌ ದೇಶ್‌ಮುಖ್‌ ಆಪ್ತ ಕುಂದನ್‌ ಶಿಂಧೆಗೆ ಜಾಮೀನು

ಮುಂಬೈ (‍ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರ ಆಪ್ತ ಕುಂದನ್‌ ಶಿಂಧೆಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಶಿಂಧೆ ಅವರು ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯಾಗಿರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.   ವಿಶೇಷ ನ್ಯಾಯಾಧೀಶ ಆರ್.ಎನ್. ರೋಕಡೆ ಶಿಂಧೆ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದರು. ಪ್ರಕರಣದ ಇತರ ಆರೋಪಿಗಳಲ್ಲಿ ಅನಿಲ್ ದೇಶಮುಖ್ …

Read More »

ಕೇಂದ್ರ ಬಜೆಟ್‌ ವಿಚಾರ ದೂರದೃಷ್ಟಿ ಇಲ್ಲದ ಬಜೆಟ್‌: ಮಲ್ಲಿಕಾರ್ಜುನ ಖರ್ಗೆ ಟೀಕೆ

ನವದೆಹಲಿ: ಬಿಜೆಪಿ ಮೇಲಿನ ಜನರ ನಂಬಿಕೆ ನಿರಂತರವಾಗಿ ಕುಸಿಯುತ್ತಿದೆ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಿರುವ ಇಂದಿನ ಬಜೆಟ್ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.   ಕೇಂದ್ರ ಬಜೆಟ್‌ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡನೆ ಮಾಡಿರುವ ಬಜೆಟ್ ಇದಾಗಿದ್ದು, ದೇಶವನ್ನು ಗಮನದಲ್ಲಿರಿಸಿಕೊಂಡಿಲ್ಲ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದು ದೂರದೃಷ್ಟಿ …

Read More »

ತಂದೆಯಿಂದಲೇ ಮಗಳ ಅತ್ಯಾಚಾರ

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಿನ್ನೆಲೆ ಗೃಹಿಣಿ (Woman) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ (Bengaluru) ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ರೆ, ಕಲಬುರಗಿಯಲ್ಲಿ (Kalburagi Case) ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಮಾಧುರಿ (26) ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 2016ರಲ್ಲಿ ಗುರುಪ್ರಸಾದ್ ಎಂಬಾತನನ್ನ ಮಾಧುರಿ ಮದುವೆಯಾಗಿದ್ದರು (Marriage). ಮದುವೆಯಾದ ಮೇಲೆ ಮಾಧುರಿಗೆ …

Read More »

20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ! ಕೇಂದ್ರ ಬಜೆಟ್​​ಗೆ ಟೀಕೆ, ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕಾಂಗ್ರೆಸ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2023-24ನೇ ಸಾಲಿನ ಬಜೆಟ್‌ (India Budget 2023) ಮಂಡನೆ ಮಾಡಿದ್ದಾರೆ. ಬಜೆಟ್​ ಬಳಿಕ ಸಹಜವಾಗಿಯೇ ಒಂದಷ್ಟು ವಲಯಗಳಿಗೆ ಬಿಸಿ ಏರಿಕೆಯ ಬಿಸಿ ತಟ್ಟಿದರೆ, ಇನ್ನೊಂದಷ್ಟು ವಲಯಗಳಿಗೆ ನಿಟ್ಟುಸಿರು ಬಿಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಆಡಳಿತ ಪಕ್ಷದ ವಿರುದ್ಧ ವಿರೋಧ ಪಕ್ಷದ ನಾಯಕರು ಬಜೆಟ್‌ನ್ನು (Budget 2023) ವಿರೋಧಿಸಿ ಟೀಕೆಗಳ ಸುರಿಮಳೆಯನ್ನೇ ಮಾಡಿದ್ದಾರೆ. 20 ಲಕ್ಷ ಕೋಟಿ …

Read More »

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ‌ಸರ್ವೇಗಳು ಕೂಡ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಆಗ್ತಾ ಇವೆ. ಇದರ ಬೆನ್ನಲ್ಲೇ ರಾಯಚೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಅಭ್ಯರ್ಥಿಯ ರಾಜಕೀಯ ಭವಿಷ್ಯ ನುಡಿದಿದ್ದಾನೆ ಓರ್ವ ವ್ಯಕ್ತಿ. ಹೌದು, ನಾಗರ ಹಾವು ಹಿಡಿದು ಕುತ್ತಿಗೆಗೆ ಹಾಕೊಂಡು ಚುನಾವಣಾ ಭವಿಷ್ಯ ನುಡಿದ್ದಾನೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ …

Read More »

ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ: ಕುಮಠಳ್ಳಿ

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದರು 2ಕೋಟಿ 20ಲಕ್ಷ ರೂ ವೆಚ್ಚದ ಶೆಡಶಾಳ ರಸ್ತೆ ಕಾಮಗಾರಿಕೆ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಶ್ರೀ ಲಕ್ಷ್ಮಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ,  5ಲಕ್ಷ ರೂ ಮೊತ್ತದ ಇಂಚಗೇರಿ ಮಠದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 57ಲಕ್ಷ ರೂ ಮೊತ್ತದ ಗೋಕಾಕ್ ಮುಖ್ಯ ರಸ್ತೆಯಿಂದ ಮಂಗಸೂಳಿ ತೋಟದ ರಸ್ತೆ ವರೆಗೆ ಸಿ. …

Read More »