Breaking News

Laxminews 24x7

ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿ ಆಯೋಜನೆ

ಬೆಳಗಾವಿ: ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ಎಸ್ಬಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿಯ ರೋಗನಿದಾನ ವಿಭಾಗ ಹಾಗೂ ಎನ್ಎಸ್ಎಸ್ ಘಟಕವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ (DAPCU) ಬೆಳಗಾವಿ, ಕೆಎಸ್ಎಪಿಎಸ್ ಹಾಗೂ ಬೆಳಗಾವಿ ರಕ್ತ ಕೇಂದ್ರದ ಸಹಯೋಗದಲ್ಲಿ 2026ರ ಜೂನ್ 16ರಂದು ಎಸ್ಬಿಜಿ ಆಯುರ್ವೇದ ಆಸ್ಪತ್ರೆ, ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿಯನ್ನು …

Read More »

ನಿಪ್ಪಾಣಿಯಲ್ಲಿ ಮನೆಗಳ ಹಂಚಿಕೆ ಪಾರದರ್ಶಕವಾಗಿ ನಡೆಯಲಿದೆ: ಶಾಸಕಿ ಶಶಿಕಲಾ ಜೊಲ್ಲೆ

ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡ, ನಿರಾಶ್ರಿತ ಮತ್ತು ಅಗತ್ಯವಿರುವ ನಾಗರಿಕರಿಗೆ ಸ್ವಂತ ಮನೆ ಒದಗಿಸಲು ನಾವು ಬದ್ಧರಾಗಿದ್ದು, ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ‘ಪ್ರತಿಯೊಬ್ಬರಿಗೂ ಮನೆ’ ಎಂಬ ಕನಸನ್ನು ನನಸು ಮಾಡಲು ನಿಪ್ಪಾಣಿ ಕ್ಷೇತ್ರದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರು ತಿಳಿಸಿದರು. ನಿಪ್ಪಾಣಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಿಪ್ಪಾಣಿ ನಗರಸಭೆ ಮತ್ತು …

Read More »

ಇನ್‌ಸ್ಟಾದಲ್ಲಿ ಪರಿಚಯವಾಗಿ ಲವ್‌ – ಲಿವ್‌ಇನ್‌ ಗೆಳತಿಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ತನ್ನ ಲಿವ್‌ ಇನ್‌ ಗೆಳತಿಯನ್ನ  ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ. ಶರತ್‌ ಹಾಗೂ ಅನುಷಾ ಹಾಸನ ಮೂಲದವರು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್‌ ವಾಟರ್‌ ಟ್ಯಾಂಕ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ ಲಿವ್‌ …

Read More »

ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹ – ಗದಗದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗದಗ: ಗದಗ ಕ್ಷೇತ್ರದ ಶಾಸಕ ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗದಗ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಹೆಚ್.ಕೆ. ಪಾಟೀಲರನ್ನು ಉಪ ಮುಖ್ಯಮಂತ್ರಿ ಮಾಡಬೇಕು. ಇಲ್ಲವೇ ಪ್ರಮುಖ ಸಚಿವ ಸ್ಥಾನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಿಂದ ಮುಳಗುಂದ ನಾಕಾ ವರೆಗೆ ಭಾರೀ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಜಾನಪದ ಕಲಾತಂಡಗಳು, ಎತ್ತಿನ ಚಕ್ಕಡಿ, …

Read More »

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿ

ರೈತ ಮನಸ್ಸು ಮಾಡಿದರೆ ಯಾರಿಗೂ ಕಡಿಮೆ ಇಲ್ಲ..! ಮಹಾರಾಷ್ಟ್ರದ ಭಿವಂಡಿಯ ರೈತ ಹಾಗೂ ಉದ್ಯಮಿ Janardhan Bhoir ದೇಶದ ಗಮನ ಸೆಳೆದಿದ್ದಾರೆ. ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಬೆಲ್-407 ಹೆಲಿಕಾಪ್ಟರ್ ಖರೀದಿಸುವ ಮೂಲಕ ಅವರು ಸುದ್ದಿಯಾಗಿದ್ದಾರೆ. ಹೈನುಗಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ವ್ಯವಹಾರ ನಡೆಸುತ್ತಿರುವ ಜನಾರ್ದನ್ ಭೋಯಿರ್ ಅವರಿಗೆ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ನಿರಂತರವಾಗಿ ಸಂಚರಿಸಬೇಕಾಗುತ್ತದೆ. ಗ್ರಾಮೀಣ …

Read More »

ಶಿಕ್ಷಣ ವ್ಯವಸ್ಥೆಯಲ್ಲಿ ನಿಮ್ಮ ಜಿಲ್ಲೆ ಕೊನೆಯಲ್ಲಿದೆ ಯಾಕೆ: ಪ್ರಿಯಾಂಕ್‌ಗೆ ನಿರಾಣಿ ಪ್ರಶ್ನೆ

ಬಾಗಲಕೋಟೆ: ಪ್ರಿಯಾಂಕ್ ಖರ್ಗೆ ಅವರು ಸದಾ ಆರ್‌ಎಸ್‌ಎಸ್‌ ಬಗ್ಗೆಯೇ ಮಾತನಾಡುತ್ತಾ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ. ಜನ ನಿಮ್ಮನ್ನು ಆರಿಸಿ ಕಳಿಸಿರುವುದು, ಸರ್ಕಾರ ಮಂತ್ರಿ ಮಾಡಿರುವುದು ಆರ್‌ಎಸ್‌ಎಸ್‌ಗೆ ಬೈಯಲು ಅಲ್ಲ ಎಂದು ಮುರುಗೇಶ್‌ ನಿರಾಣಿಆಕ್ರೋಶ ಹೊರಹಾಕಿದರು. ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ನಿಮಗಾಗಲಿ, ನಿಮ್ಮ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿಹಾಗೂ ರಾಹುಲ್ ಗಾಂಧಿಗಾಗಲಿ ಯಾವುದೇ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ಕುರಿತು …

Read More »

53 ಸಾವಿರ ಕೋಟಿ SCSP/TSP ನಿಧಿ ದುರ್ಬಳಕೆಯಾಗಿದೆ – ತನಿಖೆ ಕೋರಿ ಕೇಂದ್ರಕ್ಕೆ ಛಲವಾದಿ ಪತ್ರ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್  ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  ಉಪ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ ಭಾರಿ ಮೊತ್ತದ ಹಣವನ್ನು ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಇರುವ ಸಂಸದೀಯ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಡಾ. ಫಗ್ಗನ್ …

Read More »

ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳ ಪರವಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಯತೀಂದ್ರ

ಬೆಂಗಳೂರು: ಪೌರ ಕಾರ್ಮಿಕರ ನೇರ ಪಾವತಿ ವ್ಯವಸ್ಥೆ ಅಡಿ ನೇಮಕಾತಿ, ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ, ಕಸ ಗುಡಿಸುವವರು, ಲೋಡ್ ಮಾಡುವವರು, ಕಸದ ವಾಹನಗಳ ಡ್ರೈವರ್‌ಗಳನ್ನು ಪೌರ ಕಾರ್ಮಿಕರನ್ನಾಗಿ ಪರಿಗಣಿಸುವುದು ಸೇರಿದಂತೆ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಪೂರಕವಾದ ಕ್ರಮಗಳನ್ನು, ಆದ್ಯತೆಯ ಮೇಲೆ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ  ಹೇಳಿದರು. ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ …

Read More »

ಮೋದಿಯವರಿಂದ ಭಾರತದ ಅಭಿವೃದ್ಧಿಯ ಹಾದಿ ತೆರೆದುಕೊಂಡಿದೆ: ಸೋಮಣ್ಣ

ತುಮಕೂರು: ನರೇಂದ್ರ ಮೋದಿ  ಅವರು ದೇಶದ ಪ್ರಧಾನಿ ಆದ ನಂತರ ಅಭಿವೃದ್ಧಿಯ ಹಾದಿ ತೆರೆದುಕೊಂಡಿತು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ 12 ವರ್ಷ ಪೂರ್ಣಗೊಳಿಸಿದ್ದರಿಂದ, ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಸಾಧನೆ ಪಟ್ಟಿ ಓದಿ, ಮಾತನಾಡಿದರು. ಮೋದಿ ಅವರು ದೇಶದ ಪ್ರಧಾನಿ ಆಗುವುದಕ್ಕೂ ಮುನ್ನ ‘ಗರೀಬಿ ಹಠಾವೋ’ ಹೆಸರು ಹೇಳಿಕೊಂಡು ಜನರನ್ನು …

Read More »

ವಚನಾನಂದ ಶ್ರೀಗೆ ಜಾಮೀನು ನೀಡಿದ ರೀತಿ ಆಘಾತಕಾರಿ: ಕೆಳ ನ್ಯಾಯಾಲಯದ ವಿರುದ್ಧ ಹೈಕೋರ್ಟ್ ಗರಂ!

ಬೆಂಗಳೂರು: ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳಿಗೆ ಕೆಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಧಾನದ ಕುರಿತು ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ. ದೂರು ದಾಖಲಾಗುವ ಮುನ್ನವೇ ಜಾಮೀನು ನೀಡಿರುವ ರೀತಿ ಆಘಾತಕಾರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ …

Read More »