Breaking News

Laxminews 24x7

ಕಳೆದ ವರ್ಷ ಭೂಕುಸಿತವಾದ ಜಾಗದಲ್ಲೇ ಮತ್ತೆ ಅಪಾಯದ ಭೀತಿ

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತದ  ಆತಂಕ ಮತ್ತೆ ಹೆಚ್ಚಾಗಿದೆ. ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳದಲ್ಲೇ ಇದೀಗ ಮತ್ತೆ ಭೂಮಿ ಕುಸಿದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಡಿಕೇರಿ ಸಮೀಪದ ಮಂಗಳದೇವಿ ನಗರದ ಖಾಸಗಿ ಜಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ, ಇದೇ ಸ್ಥಳದಲ್ಲಿ ಕಳೆದ ವರ್ಷವೂ ಭೂಕುಸಿತ ಉಂಟಾಗಿತ್ತು. ಇದೀಗ ನಿರಂತರ ಮಳೆಯಿಂದ ಮತ್ತೊಮ್ಮೆ ಭೂಮಿ ಕುಸಿದಿರುವುದು ಸ್ಥಳೀಯರನ್ನು …

Read More »

ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವು

ಧಾರವಾಡ: ಕರ್ತವ್ಯ ನಿರತ ಯೋಧ  ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ  ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ಕೆಂಚರೆಡ್ಡಿನವರ್ (45) ಮೃತ ಯೋಧ. 18ನೇ ಇನ್ಫಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ ಅವರು ಸದ್ಯ ರಾಜಸ್ಥಾನದ ಬಾಡಮೆರ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತರೆಡ್ಡಿ ಅವರಿಗೆ ಬುಧವಾರ ಏಕಾಏಕಿ ಹೃದಯಾಘಾತವಾಗಿದೆ. ವೀರ ಯೋಧನ ಪಾರ್ಥಿವ ಶರೀರವು ಗುರುವಾರ ಸಂಜೆ 6 …

Read More »

ಮದುವೆಯಾದ 3 ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ

ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ ಬೆಂಗಳೂರಿನ  ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಬಿಹಾರ  ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ …

Read More »

ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಶಂಕೆ: ನಾಗಲಕ್ಷ್ಮಿ ಚೌಧರಿ ಅನುಮಾನ

ಬಾಗಲಕೋಟೆ: ನಗರದ 50 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿರಬಹುದು ಎಂಬ ಗಂಭೀರ ಅನುಮಾನವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಆಸ್ಪತ್ರೆಯಲ್ಲಿ ಪ್ರತಿದಿನ ಸರಾಸರಿ 30 ಹೆರಿಗೆಗಳಾಗುತ್ತಿವೆ. ಆದರೆ, ದಾಖಲೆಗಳನ್ನು ಗಮನಿಸಿದಾಗ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹೆಣ್ಣು …

Read More »

ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಕಂದಮ್ಮ ದುರ್ಮರಣ

ಹಾಸನ: ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ನಡೆದಿದೆ. ಪುಷ್ಪಾಲೋಚನ ಸಾವನ್ನಪ್ಪಿದ ಪುಟ್ಟ ಮಗು. ಪುಷ್ಪಾಲೋಚನ ಗಿರೀಶ್-ಚೈತ್ರಾ ಮೂರನೇ ಪುತ್ರಿಯಾಗಿದ್ದಳು. ಗಿರೀಶ್ ಚಿನ್ನ-ಬೆಳ್ಳಿ ಕೆಲಸ ಮಾಡುತ್ತಿದ್ದು, ದಂಪತಿಗೆ ಮೂವರು ಹೆಣ್ಣುಮಕ್ಕಳು. ಈ ಪೈಕಿ ಪುಷ್ಪಾಲೋಚನ ಮೂರನೆಯವಳು. ಚೈತ್ರಾ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಬಂದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ …

Read More »

ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ

ಚೆನ್ನೈ: ಸಿಡಬ್ಲ್ಯೂಆರ್‌ಸಿ ಆದೇಶ, ರಾಜ್ಯದಲ್ಲಿ ಕಾವೇರಿ ಹೋರಾಟದ ಮಧ್ಯೆಯೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್  ಇದೇ ಮುಂದಿನ ಸೋಮವಾರ ಬೆಂಗಳೂರಿಗೆ  ಬರಲಿದ್ದಾರೆ. ಕಾವೇರಿ ನೀರು-ಮೇಕೆದಾಟು ಡ್ಯಾಮ್ ವಿಚಾರವಾಗಿ ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ಜೊತೆ ಪರಸ್ಪರ ಚರ್ಚೆ ಮಾಡಲಿದ್ದಾರೆ. ಬೆಂಗಳೂರಿಗೆ ಬರಲು ಪ್ರೈವೆಟ್ ಜೆಟ್ ಸಿದ್ಧಗೊಳಿಸಿರುವ ಸಿಎಂ ವಿಜಯ್‌ಗೆ ಜಲಸಂಪನ್ಮೂಲ ಖಾತೆ ಸಚಿವ ಎನ್.ಆನಂದ್, ಕೃಷಿ ಸಚಿವ ಆರ್.ವಿನೋದ್ ಸಾಥ್ ಕೊಡುವ ಸಾಧ್ಯತೆ ಇದೆ. ವಿಧಾನಸೌಧದಲ್ಲಿ ಚರ್ಚೆಗೂ ಮೊದಲು ಸಿಎಂ …

Read More »

ಕೈಕೊಟ್ಟ ಲವ್ವರ್ – ಮನನೊಂದು ಯುವಕ ಆತ್ಮಹತ್ಯೆ

ಕಾರವಾರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನಸ್ಸಿನ ನೋವು ತಾಳಲಾರದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಭಾಗದ ರಾಮನಗರದ ಬಳಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಹರೀಶ ಮೇಸ್ತಾ (24) ಆತ್ಮಹತ್ಯೆಗೆ ಶರಣಾದ ಯುವಕ. ತಾನು ಗಾಢವಾಗಿ ಪ್ರೀತಿಸುತ್ತಿದ್ದ ಯುವತಿಯನ್ನೇ ಮದುವೆಯಾಗಬೇಕೆಂಬ ಕನಸು ಕಂಡಿದ್ದ ಹರೀಶನಿಗೆ, ಇತ್ತೀಚೆಗೆ ಆಕೆ ದೂರವಾಗಿದ್ದು ತೀವ್ರ ನೋವು ತಂದೊಡ್ಡಿತ್ತು. ಪ್ರೇಮ ವೈಫಲ್ಯದಿಂದ ತೀವ್ರ ಮನನೊಂದಿದ್ದ ಈತ, ಮನೆಯಲ್ಲೇ …

Read More »

ಕಾವೇರಿ ವ್ಯಾಪ್ತಿಯಲ್ಲಿ ತೀವ್ರಗೊಂಡ ಪ್ರತಿಭಟನೆ – ಮಂಡ್ಯದಲ್ಲಿ ಜನನಾಯಗನ್ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ

ಬೆಂಗಳೂರು: ಕರ್ನಾಟಕ ಬಂದ್‌ಗೂ ಮುನ್ನ ಕಾವೇರಿ ಕೊಳ್ಳದ  ಜಿಲ್ಲೆಗಳಲ್ಲಿ ಕಿಚ್ಚು ಜೋರಾಗುತ್ತಿದೆ. ಸಿಡಬ್ಲ್ಯೂಎಂಸಿ ಆದೇಶ ನೀಡುತ್ತಿದ್ದಂತೆ, ಮಂಡ್ಯದ ಸಂಜಯ್ ವೃತ್ತದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡದಂತೆ ಆಗ್ರಹಿಸಿದ್ದಾರೆ. ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಮಿಳುನಾಡು ಸಿಎಂ ವಿರುದ್ಧ ಧಿಕ್ಕಾರ ಕೂಗಿವೆ. ಇನ್ನೊಂದೆಡೆ, ಕನ್ನಡಪರ ಸಂಘಟನೆಗಳು ಗುರುಶ್ರೀ ಥಿಯೇಟರ್‌ನಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ಜನನಾಯಗನ್ ಚಿತ್ರದ ಪೋಸ್ಟರ್ ಹರಿದು …

Read More »

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ: ಮತ್ತೊಂದು ವೀಡಿಯೋದಲ್ಲಿ ಮೋದಿ ಅಭಿನಂದನೆ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ವಿಷಯಗಳ ಕುರಿತು ಒಂದು ವಾರದ ಅವಧಿಯಲ್ಲಿ ನಾಲ್ಕನೇ ಬಾರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಹಂಚಿಕೊಂಡಿದ್ದಾರೆ. 4ನೇ ಇನ್‌ಸ್ಟಾ ವೀಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷೆಯನ್ನು ಹೆಚ್ಚಿಸಲು ಮತ್ತು ಅಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಹಲವಾರು ಕ್ರಮಗಳನ್ನು ಪ್ರಸ್ತಾಪಿಸುವ ಮಸೂದೆಯನ್ನು ಬುಧವಾರ …

Read More »

ಸೋಮವಾರ ಡಿಕೆ ಸಂಪುಟ ವಿಸ್ತರಣೆ?; ನಾಳೆ-ನಾಡಿದ್ದು ಅಂತಿಮ ಪಟ್ಟಿ ರವಾನೆ

ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೋಮವಾರ ಡಿಕೆ ಸಂಪುಟ ವಿಸ್ತರಣೆಯಾಗಲಿದ್ದು, ನಾಳೆ ಅಥವಾ ನಾಡಿದ್ದು ಅಂತಿಮ ಪಟ್ಟಿ ರವಾನೆಯಾಗಲಿದೆ. ಸೋಮವಾರ ಅಧಿಕೃತವಾಗಿ ಸಂಪುಟ ವಿಸ್ತರಣೆ ಆಗಲಿದೆ. ಸೋಮವಾರವೇ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು ಮಾಹಿತಿ ನೀಡಿವೆ. ಇಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಭೇಟಿ ಬಳಿಕ, ‘ನೀವು ಹೊರಡಿ.. ನಾವು ಪಟ್ಟಿ …

Read More »