Breaking News

Laxminews 24x7

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

K.M.F ಮೇಲೆ ಕೇಂದ್ರದ ಕಣ್ಣು: ಕಾಂಗ್ರೆಸ್‌ ವಾಗ್ಧಾಳಿ

ಬೆಂಗಳೂರು: ಕನ್ನಡಿಗರ ಕೆನರಾ, ಕಾರ್ಪೊರೇಷನ್‌, ವಿಜಯಾ ಬ್ಯಾಂಕುಗಳ ಅಸ್ತಿತ್ವ ಕಸಿದ ಕೇಂದ್ರ ಸರ್ಕಾರ ಈಗ ಕೆಎಂಎಫ್ ಮೇಲೆ ಕಣ್ಣು ಹಾಕಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಎಂದರೆ ಭಸ್ಮಾಸುರ ಜನತಾ ಪಾರ್ಟಿ.ಭಸ್ಮಾಸುರ ತಲೆಯ ಮೇಲೆ ಕೈ ಇಟ್ಟರೆ ಭಸ್ಮವಾಗುತ್ತಿದ್ದರು. ಆದರೆ ಬಿಜೆಪಿಯವರು ಕಣ್ಣು ಹಾಕಿದರೆ ಸಾಕು ಭಸ್ಮವಾಗುತ್ತದೆ. ಕೆಎಂಎಫ್ ಉಳಿಸಲು ಕಾಂಗ್ರೆಸ್‌ ಬದ್ಧವಾಗಿದೆ ಎಂದು ಹೇಳಿದೆ. ರೈತರ ಮೇಲೆ ಬಿಜೆಪಿ ಸರ್ಕಾರಕ್ಕೆ …

Read More »

ಟಿಜಿಟಿ ಶಿಕ್ಷಕರ ಹೆಚ್ಚುವರಿಯಾಗಿ ಗುರುತಿಸಲು ಸಮ್ಮತಿಸಿದ ಸರಕಾರ

ಹುಬ್ಬಳ್ಳಿ: ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ವರ್ಗಾವಣೆ ಪ್ರಕ್ರಿಯೆ ಡಿ.28ರಿಂದಲೇ ಪ್ರಾರಂಭಿಸಿದ್ದು, ಜ.2ರಿಂದ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ ಟಿಜಿಟಿ ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.   2021, ಡಿ.31ರಿಂದ 8ನೇ ತರಗತಿಯಲ್ಲಿ ಶೂನ್ಯ ದಾಖಲಾತಿ ಇರುವ ಹಾಗೂ ಈಗಾಗಲೇ 8ನೇ ತರಗತಿಯಲ್ಲಿ ಗಣಿತ ಪದವೀಧರ ಶಿಕ್ಷಕರಿರುವ(ಜಿಪಿಟಿ) ಶಾಲೆಯ ಪ್ರೌಢಶಾಲಾ ವೃಂದದ ಗಣಿತ(ಟಿಜಿಟಿ) ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಿ ಅವರನ್ನು ಅವಶ್ಯವಿರುವ ಪ್ರೌಢಶಾಲೆಗೆ …

Read More »

102 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಜ್ಜಾದ ರೆಡ್ಡಿ; ಜ.16ಕ್ಕೆ 25 ಅಭ್ಯರ್ಥಿಗಳ ಘೋಷಣೆ

ಬಳ್ಳಾರಿ: ಬಿಜೆಪಿ ಮೇಲೆ ಮುನಿಸಿಕೊಂಡು ಪ್ರತ್ಯೇಕ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.   ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಗಣಿನಾಡು ಬಳ್ಳಾರಿ, ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅ ಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜನಾರ್ದನ ರೆಡ್ಡಿ ಈಗ ಬಿಜೆಪಿ ಮೇಲೆಯೇ ಮುನಿಸಿಕೊಂಡು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ …

Read More »

ಮೀಸಲಾತಿ ವಿಚಾರದಲ್ಲಿ ಸರಕಾರ ತಲೆಗೆ ತುಪ್ಪ ಸವರಿದೆ, 2 ದಿನಗಳಲ್ಲಿ ನಿರ್ಧರಿಸುತ್ತೇವೆ : ಜಯಮೃತ್ಯುಂಜಯಶ್ರೀ

ವಿಜಯಪುರ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸಿದ್ದ ಹೋರಾಟಕ್ಕೆ ಸರ್ಕಾರ ನಮ್ಮ ಮೂಗಿಗೆ ತುಪ್ಪ ಸವರಿಲ್ಲ, ತಲೆಗೇ ತುಪ್ಪ ಸವರುವ ಕೆಲಸ ಮಾಡಿದೆ. ಹೀಗಾಗಿ ಇನು ಎರಡು ದಿನಗಳಲ್ಲಿ ಈ ಬಗ್ಗೆ ನಮ್ಮ ಮುಂದಿನ ನಡೆ ಏನೆಂದು ನಿರ್ಧರಿಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.   ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆನಾರೋಗ್ಯ ಪೀಡಿದ ಸಿದ್ಧೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ …

Read More »

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಆಶ್ರಮದತ್ತ ಭಕ್ತರು ಬರದಂತೆ ಮನವಿ

ವಿಜಯಪುರ: ಸಿದ್ದೇಶ್ವರ ಶ್ರೀಗಳ ಅನಾರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಮತ್ತೊಂದೆಡೆ ಭಕ್ತರ ದಂಡು ಆಶ್ರಮದತ್ತ ಆಗಮಿಸುತ್ತಿದ್ದು,‌ ಶ್ರೀಗಳ ಆರೋಗ್ಯದ ದೃಷ್ಟಿಯಿಂದ ಆಶ್ರಮಕ್ಕೆ ಆಗಮಿಸದೇ ಭಕ್ತರು ಸಹಕರಿಸಬೇಕು ಎಂದು ಆಶ್ರಮದ ಸಾಧಕರು ಮನವಿ ಮಾಡುತ್ತಿದ್ದಾರೆ.   ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆಗಾಗಿ ಬಿಎಲ್ ಡಿಇ‌ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ತಂಡ ಟೊಂಕ ಕಟ್ಟಿದೆ. ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯರಾದ ನ್ಯೈರೋಲಾಜಿಸ್ಟ್ ಡಾ.ಎಸ್.ಬಿ.ಪಾಟೀಲ, …

Read More »

ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ಬಿಡುಗಡೆ

ಗದಗ: ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರವಿವಾರ ನಗರದಲ್ಲಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ವಿಜಯೇಂದ್ರ ಅವರು, ನಮ್ಮ ನಾಡಿನ ಯುಗಪುರುಷರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಹಾನಗಲ್ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ …

Read More »

ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಶಾ ಹೊರಟಿದ್ದಾರೆ :H.D.K.

ಬೆಂಗಳೂರು: ”ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.   ”ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ …

Read More »

2023 ರಲ್ಲಿ ವಿಧಾನಸಭಾ ಚುನಾವಣೆಗಳ ಸರಣಿ ; 2024ಕ್ಕೆ ಒಂದು ರೀತಿ ಸೆಮಿಫೈನಲ್

ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ.   ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …

Read More »